Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೇಶ್ವರಂ ಸ್ಪೋಟಕ್ಕೆ ಮಂಗಳೂರು ನಂಟು | Rameshwaram Cafe
    ಸುದ್ದಿ

    ರಾಮೇಶ್ವರಂ ಸ್ಪೋಟಕ್ಕೆ ಮಂಗಳೂರು ನಂಟು | Rameshwaram Cafe

    vartha chakraBy vartha chakraಮಾರ್ಚ್ 2, 202472 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.2- ಉದ್ಯಾನ‌ ನಗರಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ‌‌ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೂ ರಾಜ್ಯದ ಇತರೆಡೆ ಈ ಹಿಂದೆ ನಡೆದಿದ್ದ ಸ್ಫೋಟಗಳಿಗೆ ಇರುವ ಸಾಮ್ಯತೆಯ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
    ಅದರಲ್ಲೂ ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಇರುವ ಸಂಬಂಧವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
    ಪರಿಶೀಲನೆ ವೇಳೆ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಬಳಸಿದ್ದ ಸ್ಫೋಟಕ ಸಾಮಗ್ರಿಗಳು ಹಾಗೂ ರಾಮೇಶ್ವರಂ ಕೆಫೆ (Rameshwaram Cafe) ಸ್ಫೋಟಕ್ಕೆ ಸಾಮ್ಯತೆ ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ತನಿಖೆಯನ್ನು ‌ಈ‌ ದಿಸೆಯಲ್ಲೂ‌ ನಡೆಸಲಾಗುತ್ತಿದೆ
    ಎರಡೂ ಕಡೆ ಸ್ಪೋಟ ನಡೆದ ಸಂದರ್ಭದಲ್ಲಿ ಹೊರ ಸೂಸಿರುವ ಹೊಗೆ ಒಂದೇ ಮಾದರಿಯಲ್ಲಿದೆ. ಎರಡೂ ಕಡೆ ಬ್ಯಾಟರಿ, ಡಿಟೋನೇಟರ್‌ಗಳು, ನಟ್ಟು, ಬೋಲ್ಟ್‌ಗಳನ್ನು ಸ್ಫೋಟಕ್ಕೆ ಬಳಸಲಾಗಿದೆ.

    ಈ ಹಿನ್ನೆಲೆಯನ್ನು‌ ತನಿಖೆ ನಡೆಸುತ್ತಿರುವ ಪೊಲೀಸ್‌ ಅಧಿಕಾರಿಗಳು, ಮಂಗಳೂರು ಸ್ಫೋಟದ ರೂವಾರಿ ಶಾರಿಕ್‌ ಹಾಗೂ ಸಂಗಡಿಗರನ್ನು ವಿಚಾರಣೆಗೆ ಮುಂದಾಗಿದ್ದಾರೆ.
    ಸದ್ಯ ಶಾರಿಕ್  ಗ್ಯಾಂಗ್ ಪರಪ್ಪನ ಅಗ್ರಹಾರದಲ್ಲಿದ್ದು, ಅವರನ್ನೂ‌ ಈ ಕುರಿತಂತೆ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.
    ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾದ ಆರೋಪಿಯ ಜಾಡು ಹಿಡಿದು ಹೊರಟ ರಾಜ್ಯ ಮತ್ತು ರಾಷ್ಟ್ರೀಯ ತನಿಖಾದಳದ ತಂಡ ರಾಮೇಶ್ವರಂ ಕೆಫೆಯ ಸಿಸಿಟಿವಿ ಜಾಡು ಹಿಡಿದು ತನಿಖೆ ನಡೆಸುತ್ತಿದೆ.
    ಆರೋಪಿ ಕೆಫೆಯ ಒಳ ಪ್ರವೇಶ ಮಾಡಿ ಸುಮಾರು ಒಂದು ಗಂಟೆ ಕಾಲ ಒಳಗೆ ಓಡಾಡಿದ್ದಾನೆ. 11:15 ಗಂಟೆಗೆ ಒಳಗೆ ಪ್ರವೇಶ ಮಾಡಿದ ಆಯ 12:10ರ ಕೆಫೆಯ ತನಕ ಒಳಗಿರುವುದನ್ನು ಸಿಸಿ ಕ್ಯಾಮರಾ ದೃಶ್ಯ ಸಾಬೀತುಪಡಿಸಿದೆ.

    ಆತ, ಸೈಡ್ ಬ್ಯಾಗ್ ಹಾಕಿಕೊಂಡು ಒಳಗೆ ಬಂದಿದ್ದು, ಬ್ಯಾಗ್‌ ಒಳಗೆ ಮತ್ತೊಂದು ಬ್ಯಾಗ್‌ನಲ್ಲಿ ಸ್ಫೋಟಕ ತಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನರ ಕಣ್ಣಿಗೆ ಮತ್ತು ಸಿಸಿ ಕ್ಯಾಮರದಲ್ಲಿ ಸೆರೆಯಾಗದ ಜಾಗಕ್ಕಾಗಿ ಈತ ಹುಡುಕಾಟ ನಡೆಸಿದ್ದು, ಕೊನೆಗೆ ಕೈ ತೊಳೆಯುವ ಜಾಗದಲ್ಲಿದ್ದ ಡೆಸ್ಟ್ ಬಿನ್‌ನಲ್ಲಿ ಬ್ಯಾಗ್ ಬಿಸಾಡಿ ಪರಾರಿಯಾಗಿದ್ದಾನೆ.
    ಹೋಗುವಾಗ ಮೊಬೈಲ್ ಕೈಯಲ್ಲಿ ಹಿಡಿದು ಪರಾರಿಯಾಗಿದ್ದಾನೆ. ಆರೋಪಿ ಬಳಿ ಮೊಬೈಲ್ ಇರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸದ್ಯ ಆರೋಪಿ ಬಳಿ ಇರುವ ಮೊಬೈಲ್ ಜಾಡು ಹಿಡಿದು ಹೊರಟಿರುವ ಪೊಲೀಸರು ಟವರ್ ಡಂಪ್ ಮಾಡಿ ಮೊಬೈಲ್ ಡಿಟೈಲ್ಸ್ ಕಲೆ ಹಾಕಿ ಆರೋಪಿಗೆ ಬಲೆ ಬೀಸಿದ್ದಾರೆ.
    ಸ್ಪೋಟದ ಹಿಂದೆ ಒಂದು‌ ತಂಡವೇ ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಸ್ಪೋಟಕ ತಯಾರು ಮಾಡುವುದು ಹಾಗೂ ಅದಕ್ಕೆ ಬೇಕಾಗಿರುವ ‌ವಸ್ತುಗಳನ್ನು ಪಡೆಯಲು ವ್ಯವಸ್ಥಿತ ಸಂಚು ನಡೆದಿರಬಹುದು ಎಂಬ ಅಂಶ ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಈ‌ ತಂಡದಲ್ಲಿ ವೆಲ್ ಟ್ರೈನ್ಡ್ ಆರೋಪಿಗಳು‌ ಭಾಗಿಯಾಗಿರುವ ಶಂಕೆ ಮೂಡಿದೆ.ಈ ಬಾಂಬನ್ನು ಸ್ಥಳೀಯವಾಗಿ ಸಿಗುವ ಕಚ್ಚಾ ವಸ್ತುಗಳನ್ನ ಬಳಸಿ ಸಿದ್ಧಪಡಿಸಲಾಗುತ್ತದೆ. ಮೊಳೆಗಳು, ಗಾಜಿನ ಚೂರು, ಗನ್ ಪೌಡರ್ ಅಥವಾ ಬೆಂಕಿ ಕಡ್ಡಿಯ ಮದ್ದುಗಳನ್ನೂ ಬಳಸಿ ಇವನ್ನು ತಯಾರಿಸಬಹುದು.

    ಪ್ರೆಷರ್ ಆಗುವಂತೆ ಡಿವೈಸ್‌ನ್ನು ಸೃಷ್ಟಿಸಿ ಸ್ಫೋಟಿಸಬಹುದು. ಇದು ಎಷ್ಟು ಕಚ್ಚಾ ವಸ್ತುಗಳನ್ನು ಹಾಕಬಹುದೋ ಅಷ್ಟೂ ತೀವ್ರತೆಯನ್ನು ಪಡೆದುಕೊಳ್ಳುತ್ತದೆ.ಪ್ಲಾಸ್ಟಿಕ್ ಸ್ಪೋಟಕ‌ ಕೂಡ ಬಳಸಿರುವ ಸಾಧ್ಯತೆ ಇದೆ. ಇದನ್ನ ಪುಟ್ಟಿ ಸ್ಫೋಟಕ ಎಂದು ಕರೆಯಲಾಗುತ್ತದೆ.
    ಜಿಲೇಟಿನ್‌ಗಳನ್ನು ಬಳಸಿ ಈ ಪ್ಲಾಸ್ಟಿಕ್ ಎಕ್ಸ್‌ಪ್ಲೋಸಿವ್ ತಯಾರಿಕೆ ಮಾಡಲಾಗುತ್ತದೆ. ಈ ಸಾಧನವನ್ನು ಯಾವುದೇ ಮೆಟಲ್ ಡಿಟೆಕ್ಟರ್ ಕಂಡು ಹಿಡಿಯುವುದಿಲ್ಲ. ಇದನ್ನ ಎಲ್ಲಿ ಬೇಕಾದರೂ ಭದ್ರತಾ ಸಿಬ್ಬಂದಿಗಳ ಕಣ್ಣು ತಪ್ಪಿಸಿ ತೆಗೆದುಕೊಂಡು ಹೋಗಬಹುದು ಎನ್ನಲಾಗಿದೆ.
    ಆದರೆ ಸ್ಲೀಪರ್ ಸೆಲ್‌ಗಳಿಲ್ಲದೆ ಬಾಂಬ್ ತಯಾರು ಸುಲಭವಲ್ಲ. ಕಚ್ಚಾ ವಸ್ತುಗಳಿಗೆ ಸ್ಲೀಪರ್ ಸೆಲ್‌ಗಳ ಅವಶ್ಯಕತೆ ಇದೆ. ಸ್ಲೀಪರ್ ಸೆಲ್‌ಗಳು ಸಪ್ಲೈ ಮಾಡುವ ಬಿಡಿ ಬಿಡಿ ವಸ್ತುಗಳಿಂದಲೇ ಬಾಂಬ್ ತಯಾರಿಕೆ ನಡೆದಿದೆ ಎನ್ನಲಾಗಿದೆ.

    Verbattle
    Verbattle
    Verbattle
    m war ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ – ಆರ್.ಅಶೋಕ | R Ashoka
    Next Article ಸ್ಪೋಟಕ ಹೊತ್ತು BMTC Volvo ಬಸ್ ನಲ್ಲಿ ಪ್ರಯಾಣ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 777bet_bcpr ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • pilesos daison kypit_jbml ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • Walterfak ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.