Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala
    ಚುನಾವಣೆ 2024

    ಸುರ್ಜೆವಾಲಾ ಇದೇನು ಮಾಡಿದ್ದು? Randeep Singh Surjewala

    vartha chakraBy vartha chakraಮೇ 2, 2023Updated:ಮೇ 3, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala) ವಿರುದ್ಧ ಇದೀಗ ಪಕ್ಷಿಯರೇ ತಿರುಗಿಬಿದ್ದಿದ್ದಾರೆ.
    ಕಾಂಗ್ರೆಸ್ ಈ ಬಾರಿ ಬಹುಮತ ಗಳಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಇದಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುರ್ಜೇವಾಲ ಅವರು ಅನುಸರಿಸುತ್ತಿರುವ ತಂತ್ರಗಾರಿಕೆಗಯೇ ಪ್ರಮುಖ ಕಾರಣ ಎಂದು ಬಣ್ಣಿಸಲಾಗಿತ್ತು ಆದರೆ ಇದೀಗ ಅವರ ಒಂದು ನಡೆ ಕಾಂಗ್ರೆಸ್ ಗೆಲುವಿನ ಸಾಧ್ಯತೆಯನ್ನು ಕ್ಷೀಣಿಸುವಂತೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.

    ಕರ್ನಾಟಕದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ಉತ್ತಮ ಆರಂಭ ಮಾಡಬೇಕು ಎಂಬ ತಂತ್ರ ಮಾಡಿರುವ ಕಾಂಗ್ರೆಸ್ ಅತ್ಯಂತ ವ್ಯವಸ್ಥಿತವಾಗಿ ಕರ್ನಾಟಕದಲ್ಲಿ ಚುನಾವಣೆಯನ್ನು ಎದುರಿಸುತ್ತಿದೆ ಪ್ರಚಾರದ ವೈಖರಿಯಂತೂ ಈ ಹಿಂದೆ ಯಾವುದೇ ಚುನಾವಣೆಯಲ್ಲಿ ಅನುಸರಿಸಿದ ರೀತಿಯಲ್ಲಿ ಇಲ್ಲ. ಇಡೀ ಚುನಾವಣೆ ಪ್ರಚಾರದ ಅಖಾಡದಲ್ಲಿ ಒಮ್ಮೆಯೂ ಭಾವನಾತ್ಮಕ ಅಂಶಗಳ ಬಗ್ಗೆ ಚಕಾರ ಎತ್ತಿಲ್ಲ ಅಲ್ಪಸಂಖ್ಯಾತ ಸಮುದಾಯವನ್ನು ಅತಿಯಾಗಿ ಓಲೈಸುವ ಮಾತನಾಡಿಲ್ಲ ಈ ಮೂಲಕ ಬಹು ಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಬಿಜೆಪಿ ಮಾಡುತ್ತಿದ್ದ ಪ್ರಯತ್ನಕ್ಕೆ ದೊಡ್ಡ ಹಿನ್ನಡೆ ಉಂಟಾಗುವಂತೆ ಮಾಡಿತ್ತು. ಈ ಎಲ್ಲವೂ ಕಾಂಗ್ರೆಸ್ ನ ಗೆಲುವಿನ ಸಾಧ್ಯತೆಯನ್ನು ಹೆಚ್ಚಿಸಿದ್ದವು ಎಂಬ ವಿಶ್ಲೇಷಣೆಗಳು ಕೇಳಿ ಬಂದಿದ್ದವು. (Randeep Singh Surjewala)

    Randeep Singh Surjewala
    ಇಂತಹ ಯಶಸ್ವಿ ತಂತ್ರಗಾರಿಕೆಯನ್ನು ರೂಪಿಸಿದ ಸುರ್ಜೆವಾಲ (Randeep Singh Surjewala) ಕೊನೆಯ ಹಂತದಲ್ಲಿ ಎಡವಿದರಾ ಎಂಬ ಪ್ರಶ್ನೆಗಳು ಕೇಳಿಬಂದಿವೆ ಅದು ಪ್ರಣಾಳಿಕೆಯಲ್ಲಿ ಹೇಳಿರುವ ಭಜರಂಗದಳ ನಿಷೇಧ ಎಂಬ ಪ್ರಸ್ತಾಪ ಕಾಂಗ್ರೆಸ್ ಪಾಲಿಗೆ ದುಬಾರಿ ಆಗಲಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ.
    ಬಿಜೆಪಿ ತಾನಾಗಿಯೇ ಯಾವುದನ್ನು ಮಾಡುವುದಿಲ್ಲ ಕಾಂಗ್ರೆಸ್ ತಪ್ಪು ಮಾಡುವುದನ್ನು ಕಾಯುತ್ತದೆ ಆನಂತರ ಆ ತಪ್ಪನ್ನು ಎತ್ತಿ ತೋರಿಸುವ ಮೂಲಕ ತನ್ನ ಪರವಾಗಿ ಅಲೆ ಏಳುವಂತೆ ಮಾಡುತ್ತದೆ ಎಂಬ ಅಭಿಪ್ರಾಯಕ್ಕೆ ತಕ್ಕಂತೆ ಈಗಿನ ಬೆಳವಣಿಗೆ ನಡೆದಿದೆ.

    ಯಾವಾಗ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಷಯ ಪ್ರಸ್ತಾಪ ಮಾಡಿತೋ ಆ ಕ್ಷಣವೇ ಬಿಜೆಪಿಯ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದು ಪ್ರಣಾಳಿಕೆಯಲ್ಲಿ ಈ ಅಂಶ ಸೇರುವಂತೆ ಮಾಡಿದ ಸುರ್ಜೇವಾಲಾ (Randeep Singh Surjewala) ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಿ ಎಫ್ ಐ ಅನ್ನು ನಿಷೇಧಿಸುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಇದೇ ಆಧಾರದಲ್ಲಿ ಕಾಂಗ್ರೆಸ್ ಭಜರಂಗದಳವನ್ನು ನಿಷೇಧಿಸಿದರೆ, ನಮಗೆ ಅನುಕೂಲವಾಗಲಿದೆ ಎನ್ನುವುದು ಸುರ್ಜೇವಾಲ ಅವರ ಲೆಕ್ಕಾಚಾರ ಆದರೆ ಅದೇ ಇದೀಗ ತಿರುಗುಬಾಣವಾದಂತಾಗಿದೆ. (Randeep Singh Surjewala)

    ಯಾವಾಗ ಕಾಂಗ್ರೆಸ್ಸಿನ ಘೋಷಣೆ ಹೊರ ಬಿತ್ತೋ ಮರುಕ್ಷಣವೇ ಎದ್ದು ನಿಂತ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ. ಭಜರಂಗಿಗಳು ಸಿಡಿದೆದ್ದರೆ ಕಾಂಗ್ರೆಸ್ ದೇಶ ಬಿಟ್ಟು ಹೋಗಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದರೆ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರು “ನಾನೊಬ್ಬ ಕನ್ನಡಿಗ,ನನ್ನ ನಾಡು ಹನುಮ ಜನಿಸಿದ ನಾಡು ನಾನೊಬ್ಬ ಬಜರಂಗಿ” ಎಂದು ಹೇಳುತ್ತಾ ಇದನ್ನು ತಮ್ಮ ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿಕೊಂಡು ಪ್ರಚಾರ ಮಾಡುತ್ತಿದ್ದಾರೆ. (Randeep Singh Surjewala)

    ಈ ಪ್ರಚಾರ ತಂತ್ರ ಕಾಂಗ್ರೆಸ್ ಪಾಲಿಗೆ‌ ದುಬಾರಿಯಾಗಲಿದೆ ಎನ್ನಲಾಗಿತ್ತಿದ್ದು,ಇದಕ್ಕೆ ಕಾರಣರಾದ ಸುರ್ಜೇವಾಲಾ‌ ತಮ್ಮ ಪಕ್ಷದ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣರಾಗಿದ್ದಾರೆ. (Randeep Singh Surjewala)

    Also read.

    ದೊಡ್ಡ ಅಪಾಯದಿಂದ ಬಚಾವಾದ DK Shivakumar

    Verbattle
    Verbattle
    Verbattle
    art ED lic m shiva Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleದೊಡ್ಡ ಅಪಾಯದಿಂದ ಬಚಾವಾದ DK Shivakumar
    Next Article ಬೆಂಗಳೂರಿನಲ್ಲಿ ಬಿಜೆಪಿ ಪ್ರಚಾರ ಮಾತ್ರ! BJP
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Daviddek ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    • http://fuzzopoly.com/openx/www/delivery/ck.php?ct=1&oaparams=2__bannerid537__zoneid70__cb658e881d7e__oadesthttpswww.dagashi.websozai.jpkeijikakikomitai.cgi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.