ಬೆಂಗಳೂರು – ಕೆಲವು ಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ (BR Patil) ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರಿಗೆ ಉನ್ನತ ಹುದ್ದೆ ನೀಡಿ ಆದೇಶ ಹೊರಡಿಸಲಾಗಿದೆ.
ಬಸವರಾಜ ರಾಯರೆಡ್ಡಿ ಅವರನ್ನು ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ಹಾಗೂ ಬಿ.ಆರ್.ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಈ ಮೂಲಕ ಸಿ.ಎಂ. ಅವರು ಬಿ.ಆರ್ ಪಾಟೀಲ್ ಮತ್ತು ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.
ಈ ಇಬ್ಬರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಇವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆಯುತ್ತಲೇ ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸಚಿವರು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.
ಇವರೊಂದಿಗೆ ಮತ್ತೊಬ್ಬ ಹಿರಿಯ ಶಾಸಕ ಹಾಗೂ ಮಾಜಿ ಮಂತ್ರಿ ಆರ್.ವಿ.ದೇಶಪಾಂಡೆ ಅವರಿಗೂ ಉನ್ನತ ಹುದ್ದೆ ನೀಡಲಾಗುತ್ತಿದ್ದು,ಅವರನ್ನು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ನೇಮಕ ಮಾಡಲು ನಿರ್ಧರಿಸಿದ್ದು,ಯಾವುದೇ ಕ್ಷಣದಲ್ಲಿ ಆದೇಶ ಹೊರಬೀಳಲಿದೆ ಎನ್ನಲಾಗಿದೆ.


1 ಟಿಪ್ಪಣಿ
The night you remember forever starts right now – https://atamsulosin.com/mostbet-casino-bonus-2026-recenzia-250-free-spins/ , The casino that turns moments into memories .