Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RCB ಮ್ಯಾನೇಜರ್ ಅರೆಸ್ಟ್ !
    Viral

    RCB ಮ್ಯಾನೇಜರ್ ಅರೆಸ್ಟ್ !

    vartha chakraBy vartha chakraಜೂನ್ 6, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.6-
    ಆರ್ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರು ಕಾರ್ಯಕ್ರಮ ಆಯೋಜಕರನ್ನು ಸಿಸಿಬಿ ಪೊಲೀಸರು ಹಾಗೂ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
    ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಜೊತೆ ಡಿಎನ್ಎ ಮ್ಯಾನೇಜ್ಮೆಂಟ್ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ನನ್ನು ಬಂಧಿಸಲಾಗಿದೆ.
    ನಾಲ್ವರು ಮುಂಬೈಗೆ ತೆರಳುತ್ತಿದ್ದಾಗ ಖಚಿತವಾದ ಮಾಹಿತಿಯನ್ನು ಆಧರಿಸಿ  ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
    ಅಲ್ಲಿಂದ ಅವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆ ತರಲಾಗಿದೆ. ಇಲ್ಲಿ ಖುದ್ದು ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ ನಾಲ್ವರ ವಿಚಾರಣೆ ನಡೆಸಲಾಗುತ್ತಿದೆ.
    ಈ ವೇಳೆ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ ಉಚಿತ ಪಾಸ್ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದು ಏಕೆ?
    ನಿಮಗೆ ಬೇರೆ ಯಾರಾದರೂ ಆ ರೀತಿಯ ಪೋಸ್ಟ್ ಹಾಕಲು ಹೇಳಿದ್ದರೇ? ಸ್ಟೇಡಿಯಂ ಕಾರ್ಯಕ್ರಮ ನಿಗದಿ ಮಾಡಿಕೊಂಡಿದ್ದು ಯಾವಾಗ?ವಿಕ್ಟರಿ ಪರೇಡ್ ಬಗ್ಗೆ ಹೇಗೆ ನಿರ್ಧಾರ ಕೈಗೊಂಡಿರಿ? ಟಿಕೆಟ್ ವಿಚಾರದಲ್ಲಿ ಗೊಂದಲ ಆಗಿದ್ದು ಏಕೆ?
    ಕಾಲ್ತುಳಿತ ಪ್ರಕರಣದ ಬಗ್ಗೆ ನಿಮಗೆ ಗೊತ್ತಿರುವುದು ಏನು? ಇಷ್ಟೇ ಅಲ್ಲದೆ, ಇನ್ನೂ ಅನೇಕ ಪ್ರಶ್ನೆಗಳನ್ನು ಬಂಧಿತರಿಗೆ ಕೇಳಲಾಗಿದ್ದು, ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
    ವಿಧಾನ ಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೂ ವಿಕ್ಟರಿ ಪರೇಡ್ ಎಂದು, ಪೊಲೀಸರು ಅನುಮತಿ ನಿರಾಕರಿಸಿದ ನಂತರವೂ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ನಂತರ ಡಿಲೀಟ್ ಮಾಡಿದ ಆರೋಪ ನಿಖಿಲ್ ಸೋಸಲೆ ಮೇಲಿದೆ. ಅಲ್ಲದೆ, ಸ್ಟೇಡಿಯಂಗೆ ಉಚಿತ ಪಾಸ್ ಸಂಬಂಧ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ ಆರೋಪವಿದೆ.
    ಕಾರ್ಯದರ್ಶಿ ಮನೆ ಮೇಲೆ ದಾಳಿ:
    ಅನುಮತಿ ಪಡೆಯದಿದ್ದರೂ ಆರ್ಸಿಬಿ ವಿಜಯೋತ್ಸವಕ್ಕೆ ಮುಂದಾಗಿದ್ದ ಕೆಎಸ್ಸಿಎ ಕಾರ್ಯದರ್ಶಿ ಶಂಕರ್, ಖಜಾಂಜಿ ಜಯರಾಮ್ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ‌‌. ಅಷ್ಟೊತ್ತಿಗಾಗಲೇ ಬಂಧನ ಭೀತಿಯಿಂದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
    ವೆಂಕಟ್‌ ವರ್ಧನ್‌ ನಾಪತ್ತೆ:
    ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಡಿಎನ್‌ಎ  ಮಾಲೀಕ ನಾಪತ್ತೆಯಾಗಿದ್ದಾರೆ.
    ರಾಜ್ಯದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಮೊಮ್ಮಗ ವೆಂಕಟ್‌ ವರ್ಧನ್‌  ಡಿಎನ್‌ಎ ಕಂಪನಿಯ ಮುಖ್ಯಸ್ಥರಾಗಿದ್ದಾರೆ. ಸಿಎಂ ಸೂಚನೆಯ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗುತ್ತಿದ್ದಂತೆ ವೆಂಕಟ್‌ ವರ್ಧನ್‌ ನಾಪತ್ತೆಯಾಗಿದ್ದಾರೆ.
    ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಮತ್ತು ಕಾರ್ಯಕ್ರಮ ನಿರ್ವಹಣೆ ಮಾಡಿದ್ದ ಡಿಎನ್‌ಎ ಮೇಲೆ ಎಫ್‌ಐಆರ್‌ ದಾಖಲಾಗಿದೆ.
    ರಿಟ್ ಅರ್ಜಿ ಸಲ್ಲಿಕೆ:
    ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕೆಎಸ್ ಸಿಎ ಅಡಳಿತ ಮಂಡಳಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದೆ.
    ಕೆಎಸ್ ಸಿಎ ಆಡಳಿತ ಮಂಡಳಿ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್. ಜೈರಾಮ್ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಫ್ ಐಆರ್ ರದ್ದು ಮಾಡುವಂತೆ ಕೊರಿ ಕೆಎಸ್ ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

    ಕರ್ನಾಟಕ ಕಲೆ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್
    Next Article ರಮೇಶ್ ಬಾಬು ಗೆ ಬಂಪರ್
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StephenZef ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • StephenZef ರಲ್ಲಿ ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    • купить гашиш ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe