Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Rebel ಭವಾನಿ! – ಹೇಗಿರಬಹುದು ಈ ಹಾಸನದ ಕದನ? | JDS | Hassan
    ರಾಜ್ಯ

    Rebel ಭವಾನಿ! – ಹೇಗಿರಬಹುದು ಈ ಹಾಸನದ ಕದನ? | JDS | Hassan

    vartha chakraBy vartha chakraಏಪ್ರಿಲ್ 1, 2023Updated:ಏಪ್ರಿಲ್ 3, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Pic Courtesy - Hindustan Times
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಜಾತ್ಯತೀತ ಜನತಾದಳದ ಭದ್ರಕೋಟೆ ಹಾಸನದ ರಾಜಕಾರಣ ಕುತೂಹಲಕರ ಘಟ್ಟ ತಲುಪಿದೆ.ಹಾಸನ ಕ್ಷೇತ್ರದ BJP ಶಾಸಕ‌ ಪ್ರೀತಂಗೌಡ ಒಡ್ಡಿರುವ ಸವಾಲು ಸ್ವೀಕರಿಸಿರುವ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಇದನ್ನು ವೈಯಕ್ತಿಕ ಪ್ರತಿಷ್ಠೆಯಾಗಿ ಪರಿಗಣಿಸಿದ್ದಾರೆ ಅದರಲ್ಲೂ ಶಾಸಕ ಪ್ರೀತಂಗೌಡ ಅವರ ಮಾತು ಹಾಗೂ ಕೃತಿ ರೇವಣ್ಣ ಅವರ ಪತ್ನಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಭವಾನಿ ಅವರನ್ನು ಕೆರಳುವಂತೆ ಮಾಡಿದೆ.ತಮ್ಮ ತಾಯಿಯ ಬೆಂಬಲಕ್ಕೆ ಪುತ್ರರಾದ ಸಂಸದ ಪ್ರಜ್ವಲ್,ವಿಧಾನ ಪರಿಷತ್ ಸದಸ್ಯ ಸೂರಜ್ ನಿಂತಿದ್ದಾರೆ.

    ಶಾಸಕರ ಸವಾಲು ಸ್ವೀಕರಿಸಿರುವ ತಮ್ಮ ಪತಿಯ ಬೆಂಬಲಕ್ಕೆ ಧಾವಿಸಿರುವ ಭವಾನಿ ಹಾಸನ ವಿಧಾನಸಭಾ ಕ್ಷೇತ್ರದಿಂದ ತಾವೇ ಕಣಕ್ಕಿಳಿಯುವುದಾಗಿ ಘೋಷಿಸಿ,ಬೆಂಬಲಿಗರು,ಪಕ್ಷದ ಕಾರ್ಯಕರ್ತರೊಂದಿಗೆ ಹಲವು ಸುತ್ತಿನ ಸಭೆ ನಡೆಸಿದ್ದಾರೆ.
    ಇದರ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಲ್ಲಿನ ಆಂತರಿಕ ಕಲಹ ಬೆಳಕಿಗೆ ಬಂದಿದೆ. ಹಿಂದಿನಿಂದಲೂ ಭವಾನಿ ರೇವಣ್ಣ ಅವರ ರಾಜಕೀಯ ನಡೆಯನ್ನು ವಿರೋಧಿಸುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಲೂ ಅವರ ಸ್ಪರ್ಧೆ ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

    ಈ ಕ್ಷೇತ್ರದಲ್ಲಿ ‌ಮಾಜಿ ಶಾಸಕ ದಿವಂಗತ ಎಚ್.ಎಸ್.ಪ್ರಕಾಶ್ ಅವರ ಪುತ್ರ ಎಚ್.ಪಿ.ಸ್ವರೂಪ್ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.ಈ ವಿಷಯ ದೇವೇಗೌಡರ ಸಮ್ಮುಖದಲ್ಲಿ ಹಲವು ಬಾರಿ ಚರ್ಚೆಗೆ ಬಂದಿದೆ. ಆದರೆ ಯಾವುದೇ ಒಮ್ಮತದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.ಈ ನಡುವೆ ಸಾಮಾನ್ಯ ಕಾರ್ಯಕರ್ತ ಈ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದು ದೇವೇಗೌಡ ಮತ್ತು ಕುಮಾರಸ್ವಾಮಿ ಪ್ರಕಟಿಸಿದ್ದು ರೇವಣ್ಣ ಕುಟುಂಬವನ್ನು ಕೆರಳುವಂತೆ ಮಾಡಿದೆ.
    ಇದರ ಪರಿಣಾಮವಾಗಿ ಹಾಸನ ಕ್ಷೇತ್ರದಿಂದ ತಮ್ಮ ಪತ್ನಿ ಭವಾನಿ ರೇವಣ್ಣ ಅವರಿಗೆ ಜೆಡಿಎಸ್ ಟಿಕೆಟ್ ಸಿಗದಿದ್ದರೆ ಅವರನ್ನು ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ.
    ಹಾಸನ ಜೆಡಿಎಸ್‌ನ ಭದ್ರಕೋಟೆಯಾಗಿದೆ. ಅಲ್ಲಿ Bjpಯ ಪ್ರೀತಂಗೌಡ ಅವರನ್ನು ಸೋಲಿಸಲೇಬೇಕು. ಹಾಗಾಗಿ, ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
    ಒಂದು ವೇಳೆ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದರೆ ಸ್ವತಂತ್ರವಾಗಿ ಕಣಕ್ಕಿಳಿಸುವುದಾಗಿ ರೇವಣ್ಣ, ಕುಮಾರಸ್ವಾಮಿಯವರಿಗೆ ನೇರವಾಗಿಯೇ ಹೇಳಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಹಾಸನ ಅಭ್ಯರ್ಥಿ ಆಯ್ಕೆ ಜೆಡಿಎಸ್‌ಗೆ ತಲೆನೋವು ತಂದಿದೆ.
    ಇದರ ಬೆನ್ನಲ್ಲೇ ಭವಾನಿ ಅವರು ಕ್ಷೇತ್ರದ ಹಲವು ಮುಖಂಡರೊಂದಿಗೆ ಸಭೆ ನಡೆಸುತ್ತಿದ್ದು ವಿದ್ಯಮಾನಗಳು ಕುತೂಹಲಕಾರಿ ತಿರುವು ಪಡೆದುಕೊಂಡಿವೆ.

    bhavani BJP hassan JDS Karnataka revanna ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮೃಗೀಯ ರೇಪಿಸ್ಟ್ ಗಳು ಅರೆಸ್ಟ್ | Bengaluru Rape Incident
    Next Article ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardWrege ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • QVLeroy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe