Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    Trending

    ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain

    vartha chakraBy vartha chakraಮಾರ್ಚ್ 7, 202444 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಣೆ ವೇಳೆ ನಡೆದ ವಿಜಯೋತ್ಸವ ಸಂದರ್ಭದಲ್ಲಿ ಕೇಳಿ ಬಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ರಾಜ್ಯಸಭೆ ಸದಸ್ಯರಾಗುವ ನಾಸಿರ್ ಹುಸೇನ್ ಅವರ ಕನಸಿಗೆ ಅಡ್ಡಿಯಾಗತೊಡಗಿದೆ.
    ಚುನಾವಣೆಯ ಫಲಿತಾಂಶ ಪ್ರಕಟಣೆಯ ನಂತರ ವಿಧಾನಸೌಧದ ಆವರಣದಲ್ಲಿ ನಡೆದ ವಿಜಯೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿ, ಪೊಲೀಸರ ಅತಿಥಿಗಳಾಗಿದ್ದಾರೆ.

    ಭಂದಿತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಪಟ್ಟು ಹಿಡಿದಿರುವ ಬಿಜೆಪಿ ಇದೀಗ ಈ ಪ್ರಕಾರ ಇತ್ಯರ್ಥವಾಗುವವರೆಗೆ ನಾಸಿರ್ ಹುಸೇನ್ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಬಾರದು ಎಂದು ಆಗ್ರಹಿಸಿದೆ.
    ಇದರ ಬೆನ್ನಲ್ಲೇ ರಾಜ್ಯಸಭೆಯ ಸಭಾಪತಿ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ರಾಜ್ಯದ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು, ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಮತ್ತು ಪ್ರತಿಜ್ಞಾವಿಧಿ ಬೋಧಿಸದಂತೆ ಮನವಿ ಮಾಡಿದ್ದಾರೆ.
    ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲೇ ನಾಸೇ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕುವ ಮೂಲಕ ಉದ್ದಟತನ ಮೆರೆದಿದ್ದಾರೆ. ಬಂದಿತರಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ ನಾಸಿರ್ ಹುಸೇನ್ ಅವರ ಸಂಬಂಧಿಕರು ಆಗಿದ್ದಾರೆ ಈ ಹಿನ್ನಲೆಯಲ್ಲಿ ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕ್ರಮ ಜರುಗಿಸಬೇಕು ಎಂದು ತಮ್ಮ ಪತ್ರದಲ್ಲಿ ಒತ್ತಾಯಿಸಲಾಗಿದೆ.

    ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ ಮದನ್ ಗೋಪಾಲ್, ಎಂ ಲಕ್ಷ್ಮೀನಾರಾಯಣ, ಅನಿಲ್ ಕುಮಾರ್, ಮುದ್ದುಮೋಹನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಗೋಪಾಲ್ ಹೊಸೂರ್ ಸೇರಿದಂತೆ 22 ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಪ್ರಕರಣ ಇತ್ಯರ್ಥವಾಗುವರೆಗೂ ಪ್ರಮಾಣ ವಚನ ಬೋಧಿಸದಂತೆ ಮನವಿ ಮಾಡಿದ್ದಾರೆ.
    ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ.

    ಪೊಲೀಸರು ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇವರೆಲ್ಲರೂ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿರುವುದರಿಂದ ಉಪರಾಷ್ಟ್ರಪತಿಗಳು ದೇಶ ವಿರೋಧಿ ಘೋಷಣೆ ಕೂಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಧಿಕಾರ ಗೌಪ್ಯತೆ ಬೋಧಿಸಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
    ಸುಮಾರು ಮೂರು ಪುಟಗಳ ಪತ್ರ ಬರೆದಿರುವ ಅಧಿಕಾರಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶವಿರೋಧಿ ಚಟುವಟಿಕೆಗೆ ಸಮ. ಇದನ್ನು ಗಂಭೀರವಾಗಿ ಪರಿಗಣಿಸಿ ನಾಸೀರ್ ಹುಸೇನ್‍ಗೆ ಅಧಿಕಾರ ಗೌಪ್ಯತೆ ಬೋಧಿಸಬಾರದು. ನಿಮಗಿರುವ ಅಧಿಕಾರವನ್ನು ಚಲಾಯಿಸಿ ಎಂದು ಕೋರಿದ್ದಾರೆ.

    AI ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ವಿಧಾನಸೌಧ ಪ್ರವೇಶ ಕಷ್ಟ | Vidhana Soudha
    Next Article ಇವರೆಲ್ಲಾ ಕಾಂಗ್ರೆಸ್ ಸೇರುತ್ತಾರಂತೆ! | Congress
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить шишки ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Scotthem ರಲ್ಲಿ ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    • beste online casinos mit echtgeld ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe