Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    ಸುದ್ದಿ

    ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh

    vartha chakraBy vartha chakraಡಿಸೆಂಬರ್ 29, 2023588 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.29- ವೃದ್ದೆಯೊಬ್ಬರ ಮನೆ ಮಾರಾಟ ಮಾಡಿಸಲು ಸಹಾಯ ಮಾಡುವ ನೆಪದಲ್ಲಿ ಅವರ ಆಸ್ತಿಯ ದಾಖಲೆ ಪತ್ರಗಳನ್ನು ಪಡೆದು ಅವುಗಳನ್ನು ಬ್ಯಾಂಕ್ ಗೆ ಅಡಮಾನವಿರಿಸಿ ಮೂರು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಸುಳಿಗೆ ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rockline Venkatesh) ಅವರ ಪುತ್ರ ಅಭಿಲಾಷ್ ಸಿಲುಕಿದ್ದಾರೆ.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್ ಅರುಣ್, ಟಿ.ಪಿ ಶಿವಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ.

    ಜೆ.ಪಿ.ನಗರದಲ್ಲಿರುವ ವೃದ್ಧೆ ಅಂಬುಜಾಕ್ಷಿ ನಾಗರಕಟ್ಟಿ ಎಂಬುವರು ತಮ್ಮ (75) ಹೆಸರಿನಲ್ಲಿರುವ ಮನೆ‌ ಮಾರಾಟ ಮಾಡಲು ಯತ್ನಿಸುತ್ತಿದ್ದರು.ಈ ಮಾಹಿತಿ ಪಡೆದ ತಂಡ, ವೃದ್ಧೆಗೆ ತಮ್ಮ ಆಸ್ತಿ ಮಾರಾಟ ಮಾಡಲು ಸಹಾಯ ಮಾಡುವುದಾಗಿ ನಂಬಿಸಿದೆ.ನಂತರ ಆಸ್ತಿಗೆ ಸಂಬಂಧಪಟ್ಟಂತೆ ದಾಖಲೆಗಳನ್ನು ಪಡೆದು ಅವುಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿದೆ ನಂತರ ಮೂರು ಬ್ಯಾಂಕ್‌ಗಳಿಂದ 3.85 ಕೋಟಿ ರೂ. ಸಾಲ ಪಡೆದು ವಂಚಿಸಿದೆ.
    ಈ ಕುರಿತಂತೆ ಪ್ರಕರಣ ದಾಖಲಿಸಿದ ಪೊಲೀಸರು ಮಹೇಶ್‌ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸಾಲ ಪಡೆದು ವಂಚಿಸಿದ ಹಣದ ವರ್ಗಾವಣೆ ಕುರಿತಂತೆ ಪರಿಶೀಲಿಸಿದಾಗ, ‘ಗೋ ಗ್ರೀನ್‌’ ಹೆಸರಿನ ಚಾರ್ಟೆಡ್‌ ಅಕೌಂಟೆಂಟ್‌ ಕಂಪನಿಯ ಬ್ಯಾಂಕ್‌ ಖಾತೆಗೆ ಆಗಸ್ಟ್‌ ಹಾಗೂ ಸೆಪ್ಟೆಂಬರ್‌ನಲ್ಲಿ ಹಂತ ಹಂತವಾಗಿ ಸುಮಾರು 65 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಲು ಕಂಪೆನಿಯ ನಿರ್ದೇಶಕರಾದ ವೆಂಕಟೇಶ್‌, ಮಿಥುನ್‌ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

    ಈ‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕ್ ಲೈನ್ ವೆಂಕಟೇಶ್ ಅವರ ಪುತ್ರ ಅಭಿಲಾಷ್‌ರನ್ನು ವಿಚಾರಣೆ ನಡೆಸಲಾಗಿದೆ.ಇದೀಗ ಅವರಿಗೆ  ಸಿಸಿಬಿ ಮತ್ತೊಮ್ಮೆ ನೋಟೀಸ್  ನೀಡಿದ್ದು ಅವರಿಗೆ ಬಂಧನ ಭೀತಿ ಎದುರಾಗಿದೆ.
    ವೃದ್ಧೆಯ ಆಸ್ತಿಯ ನಕಲಿ ದಾಖಲೆ ಸೃಷ್ಟಿಸಿ ಪಡೆದ ಸಾಲದ ಮೂರು ಕೋಟಿ ರೂಪಾಯಿ ಪೈಕಿ ಒಂದು ಕೋಟಿ ಮಿಥುನ್‌ ಎಂಬ ಓರ್ವ ಪಾಲುದಾರನ ಮೂಲಕ ಅಭಿಲಾಷ್ ಪಾಲುದಾರನಾಗಿರುವ ಕಂಪನಿಗೆ ಬಂದಿದೆ. ಬಳಿಕ ನಲವತ್ತು ಲಕ್ಷ ಹಣವನ್ನು ಮಿಥುನ್‌ ಪಡೆದಿದ್ದಾನೆ. ಉಳಿದ ಅರವತ್ತು ಲಕ್ಷ ಕಂಪನಿಯ ಅಕೌಂಟ್ ನಲ್ಲಿಯೇ ಇದೆ. ಇದು ಕಂಪನಿಯ ಪಾಲುದಾರನಾಗಿರುವ ಅಭಿಲಾಷ್ ಗೆ ಸೇರಿದ್ದು ಈ ಬಗ್ಗೆ ಮಾಹಿತಿ ಪಡೆಯಲು ಸಿಸಿಬಿ ವಿಚಾರಣೆಗೆ ಕರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
    ಆದರೆ ಅಭಿಲಾಷ್ ಮೊದಲ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡಿಲ್ಲ. ಹೀಗಾಗಿ ಮತ್ತೆ ವಿಚಾರಣೆಗೆ ಕರೆಯಲಾಗಿದೆ ಎಂದು ಹೇಳಿದ್ದಾರೆ. ಮತ್ತೊಂದೆಡೆ ಅಭಿಷೇಕ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

    ALSO READ | Latest Kannada News

    ಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap

    Verbattle
    Verbattle
    Verbattle
    #kannada art kannada news Karnataka KAT m News rockline venkatesh Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಇದು ಖತರ್ನಾಕ್ ಹನಿಟ್ರ್ಯಾಪ್ ತಂಡ | Honey Trap
    Next Article Guest Lectures ಗೆ ಇದೆಲ್ಲಾ ಸಿಗುತ್ತೆ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts ರಲ್ಲಿ ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    • RicardoCor ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • aviator_ulkr ರಲ್ಲಿ ಜೈಲಿನ ಮುಂದೆ ಮಹಿಳೆ ಮಾಡಿದ್ದೇನು..? .
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.