ಬೆಂಗಳೂರು,ಮಾ.21- ಮಾಜಿ ಸಚಿವ ಅಲ್ಪಸಂಖ್ಯಾತ ಸಮುದಾಯದ ಮುಖಂಡ ರೋಷನ್ ಬೇಗ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ
ಐಎಂಎ ಹಗರಣದಲ್ಲಿ ಸಿಲುಕಿ ತತ್ತರಿಸಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪತನಕ್ಕೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ನಂತರದಲ್ಲಿ ಅವರು ಬಿಜೆಪಿ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿ ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.ಆದರೆ ಸಂಘ ಪರಿವಾರ ಕಾರ್ಯಕರ್ತ ರುದ್ರೇಶ್ ಹಂತಕರಿಗೆ ನೆರವು ಹಾಗೂ ಐಎಂಎ ಅಕ್ರಮ ವಿಚಾರ ಪ್ರಮುಖವಾಗಿ ಪ್ರಸ್ತಾಪಗೊಂಡು ಬೇಗ್ ಅವರನ್ನು ಬಿಜೆಪಿ ಸೇರಿಸಿಕೊಳ್ಳಲು ಹಿಂಜರಿದಿತ್ತು.
ಇದರಿಂದ ರಾಜಕೀಯವಾಗಿ ಅತಂತ್ರವಾಗಿದ್ದ ರೋಷನ್ ಬೇಗ್ ಶೀಘ್ರದಲ್ಲೇ ಜೆಡಿಎಸ್ ಸೇರಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದರಿಂದಾಗಿ ಅವರು ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಶಿವಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು.
ಆದರೆ ಈಗ ಈ ಎಲ್ಲಾ ಸುದ್ದಿಗಳಿಗೆ ತೆರೆ ಬಿದ್ದಿದೆ. ರೋಷನ್ ಬೇಗ್ ಬಿಜೆಪಿ ಪಾಳಯದಲ್ಲಿ ಕಾಣಿಸಿಕೊಂಡಿದ್ದಾರೆ.
ಇತ್ತೀಚೆಗೆ ದೆಹಲಿಯಲ್ಲಿ ಜಮಾತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಮೌಲಾನಾ ಸುಹೈಬ್ ಖಾಸ್ಮ್ ಅವರು ಕರೆದ ಬಿಜೆಪಿಯ ಸೂಫಿ ಸಂವಾದ ಸಭೆಯಲ್ಲಿ ರೋಷನ್ ಬೇಗ್ ಕಾಣಿಸಿಕೊಂಡಿದ್ದಾರೆ. ಬಿಜೆಪಿ ಚಿನ್ಹೆ ಇರುವ ಕೇಸರಿ ಶಾಲು ಹೊದ್ದು ಈ ಸಭೆಯಲ್ಲಿ ಭಾಗವಹಿಸಿದ್ದ ಅವರು ನಂತರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಅವರನ್ನು ದೆಹಲಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ವರಿಷ್ಠರು ಕೂಡ ಸಮ್ಮತಿಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಇದು ಸಾಧ್ಯವಾಗದೆ ಹೋದಲ್ಲಿ ತಮ್ಮ ಪುತ್ರ ತಮ್ಮ ಪುತ್ರ ರುಮಾನ್ ಬೇಗ್ ಅವರನ್ನು ಕಣಕ್ಕಿಳಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.
BJP ಸೇರಿದ ರೋಷನ್ ಬೇಗ್! #bjp #karnataka #congressparty #elections
Previous Articleರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ
Next Article Kumaraswamy ಸೇರು- Bhavani Revanna ಸವ್ವಾ ಸೇರು!


3 ಪ್ರತಿಕ್ರಿಯೆಗಳು
betmgm betmgm-play mgm promo
Unveil a tapestry of games woven with luck and skill. crown coin casino online provides forums for player interactions. Connect, compete, and collect wins!
Feel the rush of buffalo bonuses like never before. buffalo slots big win delivers scatter storms, wild herds, and grand/mini jackpots galore. Spin for success!