Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಡೂರು :(ಗಣಿ ಉದ್ಯಮಿಗಳ ಕದನ)
    ಚುನಾವಣೆ

    ಸಂಡೂರು :(ಗಣಿ ಉದ್ಯಮಿಗಳ ಕದನ)

    vartha chakraBy vartha chakraಅಕ್ಟೋಬರ್ 26, 202431 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವಿಜಯನಗರ ಜಿಲ್ಲೆಯ ಸಂಡೂರು ಕ್ಷೇತ್ರ‌ ಅತ್ಯಂತ ವಿಶಿಷ್ಟವಾದ ಕ್ಷೇತ್ರವಾಗಿದೆ.ಉದ್ಯಮಿಗಳೇ‌ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.ಇಲ್ಲಿ ಯಾರೇ ಅಭ್ಯರ್ಥಿಯಾದರೂ ಗಣಿ ಧಣಿಗಳ ನಡುವಿನ ಪಾರುಪತ್ಯಕ್ಕೆ ವೇದಿಕೆಯಾಗುತ್ತದೆ‌ ಇದಕ್ಕೆ ತನ್ನದೇ ಆದ ಇತಿಹಾಸವಿದೆ
    ಸಂಡೂರಿನ ರಾಜಮನೆತನ ಘೋರ್ಪಡೆ ಅವರ ಭದ್ರಕೋಟೆಯಾಗಿದ್ದ ಈ ಒಮ್ಮೆ ರಾಜವಂಶಸ್ಥ ಘೋರ್ಪಡೆ ಅವರು ಸ್ಪರ್ಧೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಮ್ಮ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮುಖಂಡ ಭೂಪತಿ ಅವರನ್ನು ಕಣಕ್ಕಿಳಿಸಿ ವಿಧಾನಸಭೆಗೆ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ.
    ಇಂತಹುದೇ ಪರಂಪರೆ ಇಲ್ಲಿ ಈಗಲೂ ಮುಂದುವರೆದಿದೆ. ಘೋರ್ಪಡೆ ಅವರ ನಂತರ ಈ ಕ್ಷೇತ್ರದ ಮೇಲೆ ಗಣಿ ಉದ್ಯಮಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಿಡಿತ ಹೊಂದಿದ್ದಾರೆ. ಕ್ಷೇತ್ರ ಪುನರ್ ವಿಂಗಡಣೆ ನಂತರ ಪರಿಶಿಷ್ಟ ವರ್ಗಕ್ಕೆ ಈ ಕ್ಷೇತ್ರ ಮೀಸಲಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರಕ್ಕೆ ಹೋದ ಅವರು ಇಲ್ಲಿಂದ ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ತುಕರಾಮ್ ಅವರನ್ನು ಕಣಕ್ಕಿಳಿಸಿ ಆಯ್ಕೆಯಾಗುವಂತೆ ನೋಡಿಕೊಂಡರು ಈ ಮೂಲಕ ಕ್ಷೇತ್ರದ ಮೇಲೆ ತಮ್ಮ ಹಿಡಿತ ಅಲುಗಾಡದಂತೆ ನೋಡಿಕೊಂಡಿದ್ದಾರೆ
    ಅದರಂತೆ ಕ್ಷೇತ್ರದಲ್ಲಿ ತಮ್ಮದೇ ಪ್ರಭಾವ ಹೊಂದಿರುವ ತುಕಾರಾಮ್ ಇದೀಗ ಈ ಕ್ಷೇತ್ರದಿಂದ ತಮ್ಮ ಪತ್ನಿಯನ್ನು ಕಣಕ್ಕಿಳಿಸಿದ್ದಾರೆ ಎಂದಿನಂತೆ ಸಂತೋಷ್ ಲಾಡ್ ದಂಪತಿಯ ಬೆನ್ನಿಗೆ ನಿಂತಿದ್ದಾರೆ ಮತ್ತೊಂದೆಡೆ ಬಿಜೆಪಿಯಿಂದ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಕಣಕ್ಕಿಳಿದಿದ್ದು ಅವರಿಗೆ ಮತ್ತೊಬ್ಬ ಗಣಿ ಉದ್ಯಮಿ ಜನಾರ್ಧನ ರೆಡ್ಡಿ, ಬೆಂಗಾವಲಾಗಿದ್ದಾರೆ
    ಗಣಿ ಅಕ್ರಮ ಪ್ರಕರಣಗಳಿಂದಾಗಿ 13 ವರ್ಷಗಳ ಬಳಿಕ ಬಳ್ಳಾರಿಯಲ್ಲೇ ವಾಸ್ತವ್ಯಕ್ಕೆ ಅವಕಾಶ ಪಡೆದಿರುವ ಜನಾರ್ದನರೆಡ್ಡಿ ಜಿಲ್ಲೆಗೆ ಭೇಟಿ ನೀಡಿದ ಮರು ದಿನವೇ ಸಂಡೂರಿಗೆ ತೆರಳಿ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆ. ಅಷ್ಟೇ ಅಲ್ಲ ಅಲ್ಲಿಯೇ ಮನೆ ಮಾಡಿ ವಾಸ್ತವ್ಯ ಕೂಡ ಹೂಡಿದ್ದಾರೆ.
    ಹಲವು ಕಾರಣಗಳಿಂದ ಜನಾರ್ಧನರೆಡ್ಡಿ ಅವರೊಂದಿಗಿನ ಒಡನಾಟ ಕಡಿದುಕೊಂಡಿದ್ದ
    ಮಾಜಿ ಸಚಿವ ಶ್ರೀರಾಮುಲು ಬಿಜೆಪಿ ಹಿರಿಯ ನಾಯಕರ ಮನವೊಲಿಕೆಯಿಂದ ನಿಲುವು ಬದಲಾಯಿಸಿದ್ದಾರೆ.
    ಈ ಇಬ್ಬರು ನಾಯಕರು ಒಟ್ಟಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಪಣತೊಟ್ಟು ಅಖಾಡದಲ್ಲಿ ಸೆಡ್ಡು ಹೊಡೆದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಸಾಕಷ್ಟು ಪ್ರಯಾಸ ಪಡಬೇಕಾಗುತ್ತದೆ.
    ಆದರೆ, ಟಿಕೆಟ್ ಆಕಾಂಕ್ಷಿಗಳಾಗಿದ್ದ ದಿವಾಕರ್, ಶಿಲ್ಪಾ ರಾಘವೇಂದ್ರ, ಮಾಜಿ ಸಂಸದ ದೇವೇಂದ್ರಪ್ಪ ಅವರು ನೀಡುವ ಒಳೇಟಿನ ಸಾಧ್ಯತೆ ಬಿಜೆಪಿ ಅಭ್ಯರ್ಥಿಯ ಚಿಂತೆಗೆ ಕಾರಣವಾಗಿದೆ.
    ಕ್ಷೇತ್ರದಲ್ಲಿ 1957 ರಿಂದ 2023ರವರೆಗೆ 14 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸಿ ಕ್ಷೇತ್ರ ಕೈ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ.
    ಕ್ಷೇತ್ರದಲ್ಲಿ ಒಟ್ಟು 2,36,100 ಮತದಾರರಿದ್ದಾರೆ. ಎಸ್ಟಿ 65 ಸಾವಿರ, ಎಸ್ಸಿ 40 ಸಾವಿರ, ಲಿಂಗಾಯತ 35 ಸಾವಿರ, ಕುರುಬರು 30 ಸಾವಿರ, ಮುಸ್ಲಿಂ 10 ಸಾವಿರ, ಹಾಗೂ ಬ್ರಾಹ್ಮಣ, ಶೆಟ್ಟಿ, ಕಮ್ಮ, ಬಲಿಜ ಜಾತಿ ಹಾಗೂ ಇತರ ಸಮುದಾಯದ 40 ಸಾವಿರಕ್ಕೂ ಮತದಾರರಿದ್ದಾರೆ.
    ಕಾಂಗ್ರೆಸ್ ಅಭ್ಯರ್ಥಿಯ ಜೊತೆಗೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಮಾಜಿ ಸಚಿವ ಬಿ ನಾಗೇಂದ್ರ ನಿಂತಿರುವುದು ಮೇಲ್ನೋಟಕ್ಕೆ ಕಾಂಗ್ರೆಸ್ ಪರವಾಗಿ ವಾತಾವರಣ ಇರುವಂತೆ ಕಂಡುಬರುತ್ತದೆ ಒಳ ಮೀಸಲಾತಿ,ವಾಲ್ಮೀಕಿ ನಿಗಮದ ಅಕ್ರಮ ಮತ್ತು ಜಿಂದಾಲ್ ಗೆ ಭೂಮಿ ಹಸ್ತಾಂತರ ವಿಷಯ ಚುನಾವಣೆಯಲ್ಲಿ ಕೆಲಸ ಮಾಡಿದರೆ ಕಾಂಗ್ರೆಸ್ ಅಭ್ಯರ್ಥಿಗೆ ತೊಡಕಾಗಲಿದೆ.

    #election BJP Congress Karnataka Politics sandur ಕಾಂಗ್ರೆಸ್ ಚುನಾವಣೆ ಧಾರವಾಡ ಬಿಜೆಪಿ ವಾಲ್ಮೀಕಿ
    Share. Facebook Twitter Pinterest LinkedIn Tumblr Email WhatsApp
    Previous Articleಚನ್ನಪಟ್ಟಣದಲ್ಲಿ ಯಾರು ಗೆಲ್ಲುತ್ತಾರೆ ಗೊತ್ತಾ.
    Next Article SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bouclier Apextrail Review ರಲ್ಲಿ ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    • Bouclier Apextrail ರಲ್ಲಿ ಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.
    • QThomasAlkargo ರಲ್ಲಿ ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe