Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna
    Viral

    ಲೈಂಗಿಕ ಕಿರುಕುಳ ಆರೋಪ: ತನಿಖೆ ಕೈಗೆತ್ತಿಕೊಂಡ ಎಸ್ಐಟಿ | Prajwal Revanna

    vartha chakraBy vartha chakraಏಪ್ರಿಲ್ 29, 202424 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಎ29: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಕಲೆಹಾಕುತ್ತಿದೆ.ಠಾಣೆಯಲ್ಲಿ ದೂರು ದಾಖಲಿಸಿದ ಸಂತ್ರಸ್ತ ಮಹಿಳೆಯಿಂದ ಎಸ್‌ಐಟಿ ತಂಡ ಹೇಳಿಕೆ ಪಡೆಯಲು ಮುಂದಾಗಿದೆ.
    ಇದರ ನಡುವೆ ಪ್ರಕರಣದ ಕುರಿತು ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

    ಸುದ್ದಿಗಾರರ ಜೊತೆ ಮಾತನಾಡಿದ ಅವರು,ಸಿಐಡಿ ಪೊಲೀಸ್ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ವಿಶೇಷ ತಂಡ ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಹಲವೆಡೆ ಹಂಚಿಕೆಯಾಗಿರು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕ ವರದಿಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ‌. ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಿದ್ದಾರೆ’ ಎಂದರು.
    ಎಸ್ಐಟಿ ತಂಡವು ಮುಕ್ತವಾಗಿ ಕೆಲಸ ಮಾಡಲಿದೆ. ಪ್ರಕರಣದ ವರದಿ ಸಲ್ಲಿಸಲು ಯಾವುದೇ ರೀತಿಯ ಸಮಯ ನಿಗದಿಪಡಿಸಿಲ್ಲ. ತನಿಖೆ ವಿಳಂಬ ಆಗಬಾರದು ಎಂಬ ದೃಷ್ಟಿಯಿಂದ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಮೌಖಿಕವಾಗಿ ತಿಳಿಸಲಾಗಿದೆ. ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗದಿಪಡಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.
    ಮಹಿಳಾ ಆಯೋಗವು ಬರೆದ ಪತ್ರದ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದೂರುಗಳನ್ನು ಎಸ್‌ಐಟಿ ಪಡೆಯಲಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ಕೆಲಸ ಮಾಡಲಿದೆ. ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ನೀಡಲಾಗುವುದು’ ಎಂದು ತಿಳಿಸಿದರು‌.

    ತನಿಖೆ ಚುರುಕು:
    ಮತ್ತೊಂದೆಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಬಿಕೆ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ಹಾಸನಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಮುಂದಾಗಿದೆ ದೂರು ದಾಖಲಾಗಿರುವ ಪೊಲೀಸ್ ಠಾಣೆಯಿಂದ ಎಫ್ಐಆರ್ ಪ್ರತಿಯನ್ನು ಪಡೆಯಲಿರುವ ತಂಡ ಆನಂತರ ಸ್ಥಳ ಪರಿಶೀಲನೆ ನಡೆಸಲಿದೆ.
    ಪ್ರಕರಣದಲ್ಲಿ ಬಹುಮುಖ್ಯ ಸಾಕ್ಷಿಯಾಗಿರುವ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ ಮೊಬೈಲ್ ಫೋನ್‌ನನ್ನು ಎಸ್ಐಟಿ ಪತ್ತೆ ಹಚ್ಚಲಿದೆ. ಮೊಬೈಲ್ ಫೋನ್ ಯಾರದ್ದು, ಯಾರ ಹೆಸರಲ್ಲಿದೆ. ಮೊಬೈಲ್ ನಲ್ಲಿ ಎಷ್ಟು ವಿಡಿಯೋ ಇವೆ..? ಎಷ್ಟು ದಿನಗಳಿಂದ ಇವೆ..? ಮೊಬೈಲ್ ನಲ್ಲಿರುವ ವಿಡಿಯೋಗಳು ಅಸಲಿನಾ..? ಎಡಿಟ್‌ ಮಾಡಲಾಗಿದೆಯಾ..? ಎಂಬ ಮಾಹಿತಿಯನ್ನು ಕಲೆ ಹಾಕಲಿದೆ.
    ಮೊಬೈಲ್ ನಲ್ಲಿರುವ ಮಾಹಿತಿಯ ಎಫ್ಎಸ್ಎಲ್ ವರದಿ ಬಂದ ಬಳಿಕ ಅಸಲಿ ತನಿಖೆಯ ವೇಗ ಹೆಚ್ಚಲಿದೆ ಎಂದು ಮೂಲಗಳು ತಿಳಿಸಿವೆ.

    ಹೆದರುವುದಿಲ್ಲ:
    ಪ್ರಕರಣ ಬೆಳಕಿಗೆ ಬಂದ ನಂತರ ಮೊಟ್ಟ ಮೊದಲ ಬಾರಿಗೆ ಮೌನ ಮುರಿದಿರುವ ಮಾಜಿ ಸಚಿವ ಹಾಗೂ ಸಂಸದ ಪ್ರಜ್ವಲ್ ಅವರ ತಂದೆ ಎಚ್ ಡಿ ರೇವಣ್ಣ,ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದ್ದು, ಇದಕ್ಕೆಲ್ಲಾ ಹೆದರುವುದಿಲ್ಲ. ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
    ಕಳೆದ 40 ವರ್ಷಗಳಿಂದಲೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸಿಓಡಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖೆಗಳು ನಡೆದಿವೆ.ತನಿಖೆಗಳನ್ನು ನಾವು ಎದುರಿಸಿದ್ದೇವೆ. ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು. ಅವರಿಗೆ ಎಸ್‌ಐಟಿಗೆ ವಹಿಸುವುದಾಗಲೀ, ಎಫ್‌ಐಆರ್‌ ದಾಖಲಿಸುವುದಾಗಲೀ ಗೊತ್ತಿರಲಿಲ್ಲ ಎಂದರು.
    ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಸ್ ಐ ಟಿ ಕರೆದರೆ ಪ್ರಜ್ವಲ್ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದ ಅವರು, ಈ ವಿಚಾರವನ್ನು ದೇವೇಗೌಡರ ಬಳಿ ತಾವು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.

    prajwal revanna revanna ಕಲೆ ಕಾನೂನು ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಗೆ ಶ್ವೇತ ಪತ್ರ ಬೇಕಂತೆ | BJP
    Next Article ರೇವಣ್ಣ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂದ್ರು ಕುಮಾರಸ್ವಾಮಿ | Kumaraswamy
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldMog ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • rylonnie shtori na plastikovie okna s elektroprivodom_hwSn ರಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    • elektricheskie jaluzi_myot ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe