Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ – ಆರ್.ಅಶೋಕ | R Ashoka
    Trending

    ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ – ಆರ್.ಅಶೋಕ | R Ashoka

    vartha chakraBy vartha chakraಮಾರ್ಚ್ 2, 2024Updated:ಮಾರ್ಚ್ 2, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ. 1 – ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ (R Ashoka) ಖಂಡಿಸಿದರು.

    ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

    ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು.

    ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು ಯೋಜಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದಾಗಲೆಲ್ಲ ಪುಂಡು ಪೋಕರಿಗಳಿಗೆ ರೆಕ್ಕೆ ಬರುತ್ತದೆ. ಮುಸ್ಲಿಂ ಸಂಘಟನೆಗಳ ಪ್ರಕರಣ ಹಿಂಪಡೆಯುವಿಕೆ, ಶಿವಮೊಗ್ಗ ಹಾಗೂ ಕೋಲಾರದ ಘಟನೆಗೆ ಕ್ರಮ ವಹಿಸದಿರುವುದು ಮೊದಲಾದವುಗಳಿಂದಾಗಿಯೇ ಇಂತಹ ಅನಾಹುತ ನಡೆಯುತ್ತಿದೆ ಎಂದರು.

    ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ನಾನು ವಿಧಾನಸಭೆಯಲ್ಲಿ ಮಾತನಾಡಿದ್ದೆ. ಪಾಕಿಸ್ತಾನ ಜಿಂದಾಬಾದ್ ಎಂದರೂ ಕಾಂಗ್ರೆಸ್ ಶಾಸಕರು ಅವರ ಪರವಾಗಿ ನಿಂತರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಂತೂ ಇದು ತಿರುಚಿದ ವೀಡಿಯೋ ಎಂದಿದ್ದಾರೆ. ಕುಕ್ಕರ್ ಬಾಂಬ್ ಸ್ಫೋಟಿಸಿದವರನ್ನು ಬ್ರದರ್ ಎನ್ನುವ ಇವರು, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಮಾಡಿದವರನ್ನು ಅಂಕಲ್ ಎನ್ನಬಹುದು.‌ ದಯವಿಟ್ಟು ರಾಜ್ಯದ ಘನತೆಗೆ ಧಕ್ಕೆ ತರದೆ ಭದ್ರತೆ ಬಗ್ಗೆ ಗಮನಹರಿಸಿ ಎಂದರು‌.

    ಆಡಳಿತ ಪಕ್ಷದ ಮೇಲೆ ದೊಡ್ಡ ಜವಾಬ್ದಾರಿ ಇದೆ. ಪದೇ ಪದೆ ಇಂತಹ ಘಟನೆ ನಡೆದಾಗ ಶಾಂತಿ‌ ಕದಡುತ್ತದೆ. ಕೂಡಲೇ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಗುಪ್ತಚರ ದಳ ಬದುಕಿದ್ದರೆ, ಸರ್ಕಾರ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ. ಮತ ರಾಜಕಾರಣ ಬಿಟ್ಟು ಕ್ರಮ ವಹಿಸಿ. ದೇಶದ್ರೋಹದ ಸಂದರ್ಭದಲ್ಲೂ ಎಚ್ಚರವಾಗದಿದ್ದರೆ ಜನರು ಕ್ಷಮಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಓಲೈಕೆ ರಾಜಕಾರಣ – ಈ ಘಟನೆ ನಡೆಯಲು ಓಲೈಕೆ ರಾಜಕಾರಣವೇ ಕಾರಣ. ಸರ್ಕಾರ ಕ್ರಮ ಕೈಗೊಳ್ಳಲು ನಾವೆಲ್ಲರೂ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಆರ್.ಅಶೋಕ ತಿಳಿಸಿದರು.

    Verbattle
    Verbattle
    Verbattle
    Bangalore crime Government Karnataka News Politics ಕಾಂಗ್ರೆಸ್ ಕಾನೂನು ಭಯೋತ್ಪಾದಕರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಮೇಶ್ವರಂ ಕೆಫೆಯಲ್ಲಿ ಸ್ಪೋಟ- ಬೆಚ್ಚಿದ ಬೆಂಗಳೂರು ಜನತೆ | Rameshwaram Cafe
    Next Article ರಾಮೇಶ್ವರಂ ಸ್ಪೋಟಕ್ಕೆ ಮಂಗಳೂರು ನಂಟು | Rameshwaram Cafe
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Vleffi on ಫೆಬ್ರವರಿ 13, 2026 6:39 ಅಪರಾಹ್ನ

      betmgm MD betmgm-play betmgm ND

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • LinwoodGah ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • Kgqnbk ರಲ್ಲಿ ಒಳ ಮೀಸಲಾತಿ ಕೇಂದ್ರದ ಹೆಗಲಿಗೆ | Internal Reservation
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.