Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಗುಂಡಿನ‌ ಸದ್ದಿಗೆ ಬೆಚ್ಚಿದ ಜನತೆ | Bengaluru
    Trending

    ಬೆಂಗಳೂರಲ್ಲಿ ಗುಂಡಿನ‌ ಸದ್ದಿಗೆ ಬೆಚ್ಚಿದ ಜನತೆ | Bengaluru

    vartha chakraBy vartha chakraಮಾರ್ಚ್ 14, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.14- ಅತ್ಯಂತ ಜನ‌ ನಿಬಿಡ ಪ್ರದೇಶದಲ್ಲಿನ ಜುವೆಲ್ಲರಿ ಅಂಗಡಿಗೆ ಹಾಡಹಗಲೇ ನುಗ್ಗಿದ ಇಬ್ಬರು ದರೋಡೆಕೋರರು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ದುರ್ಘಟನೆ ಕೊಡಿಗೆಹಳ್ಳಿಯ ದೇವಿನಗರದಲ್ಲಿ ನಡೆದಿದೆ.
    ಈ ಘಟನೆ ಸಿಲಿಕಾನ್‌ ಸಿಟಿಯ ಜನರನ್ನು ಜನತೆ ಬೆಚ್ಚಿ ಬೀಳುವಂತೆ ಮಾಡಿದೆ.ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಜುವೆಲ್ಲರಿ ಅಂಗಡಿ ಮಾಲೀಕ ಅಂದಾರಾಮ್‌ ಹಾಗು ಆಪುರಾಮ್ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ರಕ್ತದ ಮಡುವಿನಲ್ಲಿ ಬಿದ್ದ ಅವರನ್ನು ಕೊಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ಪಡೆಯುತ್ತಿರುವ ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ ದೇವಿನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್‌ ಬಳಿ ಬೆಳಿಗ್ಗೆ 11ರ ವೇಳೆ ಬೈಕ್ ಗಳಲ್ಲಿ ಬಂದ ನಾಲ್ವರಲ್ಲಿ ಇಬ್ಬರು ಬೈಕ್‌ ನಿಲ್ಲಿಸಿ ನೇರವಾಗಿ ಅಂಗಡಿಯೊಳಗೆ ನುಗ್ಗಿದ್ದಾರೆ.
    ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಪಿಸ್ತೂಲು ತೋರಿಸಿಯೇ ಹಣ ಕೇಳಿದ್ದಾರೆ. ಆದರೆ, ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.

    ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಆ ಪರಿಸರದಲ್ಲಿದ್ದ ಜನರು ಓಡಿ ಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ.
    ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜುವೆಲ್ಲರಿಯ ಸಿಸಿ ಟಿವಿ ಫೂಟೇಜ್‌ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿ ಟಿವಿ ಫೂಜೇಜ್‌ನ್ನು ಪರಿಶೀಲಿಸಲಾಗುತ್ತಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
    ಸ್ಥಳದಲ್ಲಿ‌ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
    ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ದಯಾನಂದ, ಹೆಚ್ಚುವರಿ ರಮಣ್ ಗುಪ್ತ ,ಡಿಸಿಪಿ ಲಕ್ಷ್ಮೀ ಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    Bangalore Bengaluru News Trending Varthachakra ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna
    Next Article ಪ್ರೀತ್ಸೇ..ಪ್ರೀತ್ಸೆ ಅಂತಾ‌ ದುಂಬಾಲು ಬಿದ್ದು ಜೈಲುಪಾಲಾದ ಪೊಲೀಸ್
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dpd8u ರಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಲೂಟಿ ಜಾತ್ರೆ | Congress Guarantees
    • EdwardNor ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • Williamreosy ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe