Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೂಪಾ – ಸಿಂಧೂರಿಗೆ Show cause
    ಬೆಂಗಳೂರು

    ರೂಪಾ – ಸಿಂಧೂರಿಗೆ Show cause

    vartha chakraBy vartha chakraಫೆಬ್ರವರಿ 20, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.20-

    IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಮತ್ತು IPS ಅಧಿಕಾರಿ ಡಿ.ರೂಪಾ (D Roopa) ನಡುವಿನ ಸಂಘರ್ಷ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಈ ಇಬ್ಬರೂ ನಡೆಸುತ್ತಿರುವ ವಾಕ್ಸಮರ ಸರ್ಕಾರವನ್ನು ಮುಜುಗರಕ್ಕೆ ಸಿಲುಕುವಂತೆ ಮಾಡಿದೆ.

    ಕಳೆದೆರಡು‌ ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ (Basavaraj Bommai) ಇಬ್ಬರ‌ ವಿರುದ್ಧವೂ ಕ್ರಮ ಜರುಗಿಸುವಂತೆ‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

    ಇದರ ಬೆನ್ನಲ್ಲೇ ಶಿಸ್ತು ಉಲ್ಲಂಘನೆ, ದುರ್ನಡತೆ ಹಾಗೂ ಕರ್ನಾಟಕ ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನೋಟಿಸ್ ನೀಡಲಾಗಿದೆ. ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಕಾರಣ ಕೇಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ನೋಟಿಸ್ ನೀಡಿದ್ದಾರೆ.

    IPS ಅಧಿಕಾರಿ(IGP)ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರಿಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (Praveen Sood) ನೋಟೀಸ್ ನೀಡಿದ್ದಾರೆನ್ನಲಾಗಿದೆ.

    ಈ ನಡುವೆ ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra), IPS ಹಾಗೂ IAS ಅಧಿಕಾರಿಗಳು ತಮ್ಮನ್ನು ತಾವು ದೇವಮಾನವರು ಎಂದುಕೊಂಡಿದ್ದಾರಾ? ಇಲ್ಲಿ ಒಂದು ಆಡಳಿತ ವ್ಯವಸ್ಥೆಯೂ ಇದೆ. ಯಾವುದೇ ಅಧಿಕಾರಿಗಳು ಶಿಸ್ತು ಉಲ್ಲಂಘನೆ ಮಾಡಬಾರದೆಂಬ ನಿಯಮ ಇದ್ದರೂ ಇಬ್ಬರೂ ಜಿದ್ದಿಗೆ ಬಿದ್ದವರಂತೆ ಪರಸ್ಪರ ಆರೋಪ ಮಾಡಿದ್ದಾರೆ.

    ಈ ಇಬ್ಬರಿಗೂ ಕಾನೂನಿನ ಚೌಕಟ್ಟಿನಲ್ಲಿ ಏನು ಆಗಬೇಕೋ ಅದೇ ಆಗುತ್ತದೆ ಎಂದರು. ಮುಖ್ಯಮಂತ್ರಿಗಳು ಇದರ ಬಗ್ಗೆ ಈಗಾಗಲೇ ಗಮನಹರಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಸ್ವತಃ ನಾನೇ ಮಾತುಕತೆ ನಡೆಸಿದ್ದೇನೆ. ಯಾರೇ ಆಗಲಿ ಇತಿಮಿತಿ ಇರಬೇಕು ಎಂದು ಕಿಡಿಕಾರಿದರು.

    ಹಿರಿಯ ಅಧಿಕಾರಿಗಳು ಈ ರೀತಿಯಾಗಿ ಮಾಧ್ಯಮದ ಮುಂದೆ ಮಾತನಾಡುವುದು ಸರಿಯಲ್ಲ. ಶಿಸ್ತು ಉಲ್ಲಂಘನೆ ಮಾಡುವವರಿಗೆ ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮುಖ್ಯಮಂತ್ರಿಗಳು ಮಾಡಲಿದ್ದಾರೆ ಎಂದು ಉತ್ತರಿಸಿದರು.

    ಇಬ್ಬರ ನಡುವೆ ಯಾವುದೋ ಹಳೆಯ ವೈಯಕ್ತಿಕ ದ್ವೇಷ ಇಲ್ಲವೇ ಸಮಸ್ಯೆಗಳಿರಬಹುದು. ಪರಸ್ಪರ ಕುಳಿತು ಮಾತುಕತೆ ಮೂಲಕ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಬಹುದು. ಆದರೆ ಹಿರಿಯ ಅಧೊಕಾರಿಗಳಾಗಿ ಇವರೇ ಈ ರೀತಿ ವರ್ತಿಸಿರುವುದು ಸರಿಯಲ್ಲ. ಈ ಹಿಂದೆಯೂ ಕೂಡ ಇವರಿಬ್ಬರಿಗೆ ಎಚ್ಚರಿಕೆ ಕೊಡಲಾಗಿತ್ತು. ಆದರೂ ಈ ವರ್ತನೆ ಅತ್ಯಂತ ನೋವಿನ ಸಂಗತಿ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೊ ಅದು ಆಗೇ ಆಗುತ್ತದೆ. ಸರ್ಕಾರ ಕಣ್ಣುಮುಚ್ಚಿ ಕುಳಿತಿಲ್ಲ ಎಂದು ಎಚ್ಚರಿಸಿದರು.

    ಇಬ್ಬರೂ ಕೂಡ ಅತ್ಯಂತ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ವೈಯಕ್ತಿಕವಾಗಿ ಏನಾದರೂ ಮಾಡಿಕೊಳ್ಳಲಿ. ಅದು ನಮಗೆ ಸಂಬಂಧಿಸಿದ್ದಲ್ಲ.  ಆದರೆ ಮಾಧ್ಯಮಗಳ ಮುಂದೆ ಬಂದು ಈ ರೀತಿ ಆಪಾದನೆ ಮಾಡಿದ್ದು ಸರಿಯಲ್ಲ. ಇಲಾಖೆಗಳಲ್ಲಿ ಅವ್ಯವಹಾರ ನಡೆದಿದ್ದರೆ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಅಂಥವರ ಮೇಲೆ ತನಿಖೆ ನಡೆಸಿ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಹಾದಿಬೀದಿಯಲ್ಲಿ ಮಾತನಾಡಲು ಇವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು.

    ಸಿಂಧೂರಿ ಭೇಟಿ:

    ಇದರ ನಡುವೆ IAS ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರನ್ನು ಭೇಟಿಯಾಗಿ ಲಿಖಿತ ದೂರು ಸಲ್ಲಿಸಿದರು.

    ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ 3 ಪುಟಗಳ ಲಿಖಿತ ದೂರು ನೀಡಿದ ಅವರು ನಂತರ ಮಾತನಾಡಿದರು ಮಾಧ್ಯಮಗಳ ಮುಂದೆ ಬರಬಾರದೆಂಬ ನಿಯಮವಿದೆ ಹಾಗಾಗಿ ನಾನು ಮಾತನಾಡಲಿಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ ಹಿನ್ನೆಲೆ ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದೇನೆ ಎಂದರು.

    ನನ್ನ ಕಾರ್ಯವ್ಯಾಪ್ತಿ ಬೇರೆ ಅವರ ಕಾರ್ಯವ್ಯಾಪ್ತಿ ಬೇರೆ. ಅವರು ನನ್ನ ವೈಯಕ್ತಿಕ ವಿಚಾರಗಳನ್ನು ಮಾತನಾಡಿದ್ದಾರೆ. ಅವರ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಸ್ಪಷ್ಟ ಪಡಿಸಿದರು.

    Verbattle
    Verbattle
    Verbattle
    #aragajnanedra basavaraj bommai bommai d roopa IAS IAS - IPS IAS - IPS conflicts Karnataka m Politics praveen sood rohini sindhuri ಕಾನೂನು ಧಾರ್ಮಿಕ ನಿಯಮ ಉಲ್ಲಂಘನೆ ಬೊಮ್ಮಾಯಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನಗ್ನ ಚಿತ್ರ ಕಳುಹಿಸಿದ್ರಾ IAS ಅಧಿಕಾರಿ?
    Next Article ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 8:38 ಅಪರಾಹ್ನ

      Нужен трафик и лиды? https://avigroup.pro/kazan/sozdanie-sajtov/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Daviddek ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Jeffreymaf ರಲ್ಲಿ ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.