Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge
    ರಾಜಕೀಯ

    ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge

    vartha chakraBy vartha chakraಮಾರ್ಚ್ 18, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.18- ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣತೊಟ್ಟು ಶ್ರಮಿಸುತ್ತಿರುವ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳುತ್ತಿರುವಂತೆ ಮುಖ್ಯಮಂತ್ರಿ ಹುದ್ದೆಯ ಕನಸು‌ ಕಾಣುತ್ತಿರುವ ಪ್ರತಿಪಕ್ಷವನಾಯಕ ಸಿದ್ದರಾಮಯ್ಯ ಅವರ ಸ್ಥಿತಿ ಅತಂತ್ರವಾಗಿದೆ.
    ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರಾ ಅಥವಾ ಇಲ್ಲವಾ..ಸ್ಪರ್ಧಿಸಿದರೂ ಎಲ್ಲಿಂದ ಸ್ಪರ್ಧೆ ಎಂಬ ಬಗ್ಗೆ ಖಚಿತತೆ‌ ಇಲ್ಲದೆ ಎಲ್ಲವೂ ಗೊಂದಲ, ಗೋಜಲಾಗಿ ಪರಿಣಮಿಸಿದೆ.
    ತಮ್ಮ ಸ್ವ ಕ್ಷೇತ್ರ ವರುಣಾ ಬಿಟ್ಟು ಬೇರೆ ಕಡೆ ಸ್ಪರ್ಧಿಸಿದರೆ ಅವರ ಗೆಲುವು ಕಷ್ಟ ಎಂಬ ‌ವರದಿಗಳು ಹೈಕಮಾಂಡ್ ಅನ್ನು ತಲುಪಿವೆ
    ಈ ಬಾರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಆದರೆ ಅಲ್ಲಿ ಗೆಲುವಿನ ಸಾಧ್ಯತೆಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಖುದ್ದು ಹೈಕಮಾಂಡ್ ಸುರಕ್ಷಿತ ಕ್ಷೇತ್ರ ಆಯ್ದುಕೊಳ್ಳುವಂತೆ ಸಲಹೆ ನೀಡಿದೆ ಎನ್ನಲಾಗಿದೆ.
    ಕಾಂಗ್ರೆಸ್ ವತಿಯಿಂದ ನಡೆಸಿರುವ ಎರಡು ಬಾರಿಯ ಸಮೀಕ್ಷೆ ಮತ್ತು ಹೈಕಮಾಂಡ್ ಸಂಗ್ರಹಿಸಿರುವ ಮಾಹಿತಿ ಪ್ರಕಾರ ಕೋಲಾರ ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರವಲ್ಲ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರ ಆರಿಸಿಕೊಳ್ಳುವಂತೆ ಅಥವಾ ಈ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸದೆ ಹಿಂದೆ ಸರಿಯುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
    ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಬಹುದು. ಒಂದು ವೇಳೆ ಸ್ಪರ್ಧೆ ಮಾಡಲೇಬೇಕು ಎಂದಾದರೆ ಸುರಕ್ಷಿತ ಕ್ಷೇತ್ರ ಆರಿಸಿಕೊಳ್ಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
    ರಾಹುಲ್ ಗಾಂಧಿ ಇಂತಹ ಸಲಹೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಬೆಂಬಲಿಗರು ಮತ್ತು ಪ್ರಮುಖರೊಂದಿಗೆ ಸಭೆ ನಡೆಸಿದರು. ಹೈಕಮಾಂಡ್ ನೀಡಿರುವ ಸಲಹೆಯ ಬಗ್ಗೆ ಮಾಹಿತಿ ನೀಡಿದರು.ಈ ಸಭೆಯಲ್ಲಿ ಕೆಲವರು ಸ್ಪರ್ಧೆ ಮಾಡುವ ಬದಲಿಗೆ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಸೂಕ್ತ ಎಂದು ಹೇಳಿದರೆ ಮತ್ತೆ ಕೆಲವರು ಸ್ಪರ್ಧೆ ಮಾಡದೆ ಹೋದರೆ, ಪಕ್ಷ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಹುದ್ದೆಗೆ ಬಾರಿ ಪೈಪೋಟಿ ಮಾಡಬೇಕಾಗುತ್ತದೆ. ಜೊತೆಗೆ ಸ್ಪರ್ಧೆ ಇಲ್ಲ ಎಂದರೆ‌ ಸಿದ್ದರಾಮಯ್ಯ ಸಿಎಂ ಆಗುವುದಿಲ್ಲ ಎಂದು ಅಪ ಪ್ರಚಾರ ಮಾಡಲಾಗುತ್ತದೆ ಇದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಹೀಗಾಗಿ ಸ್ಪರ್ಧೆ ಮಾಡಲೇಬೇಕು ಎಂದು ಪ್ರಬಲವಾಗಿ ವಾದ ಮಂಡಿಸಿದರೆನ್ನಲಾಗಿದೆ
    ಇದರಿಂದಾಗಿ ಸಿದ್ದರಾಮಯ್ಯ ಮತ್ತೆ ವರುಣಾದಿಂದಲೇ ಸ್ರ್ಪಧಿಸುವ ಚಿಂತನೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಮುಂದಿನ ವಾತ ದೆಹಲಿಯಲ್ಲಿ ಚುನಾವಣೆ ಸಮಿತಿ ಸಭೆ ನಡೆಯುತ್ತಿದ್ದು ಅದರಲ್ಲಿ ಈ ಕುರಿತು ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎನ್ನಲಾಗಿದೆ.

    Verbattle
    Verbattle
    Verbattle
    #siddaramaiah Congress m ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleOla ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    Next Article ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Klulfi ರಲ್ಲಿ ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.
    • StellaHewly ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.