Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    Trending

    ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero

    vartha chakraBy vartha chakraಅಕ್ಟೋಬರ್ 22, 20234 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.22 – ನಾವು ವೆಸ್ಟಂಡ್ ಹೋಟೆಲ್ ನಲ್ಲಿ ಕೂತು ಸರಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರನ್ನು ಕರ್ನಾಟಕದ ʼನೀರೋʼ (Nero) ಎಂದು ಕುಟುಕಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ನೇರವಾಗಿ ಟಾಂಗ್ ನೀಡಿದ್ದಾರೆ.
    ವೆಸ್ಟ್ʼಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? ಐದು ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಬಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; ಒಂದು:ವೆಸ್ಟ್ ಎಂಡ್ ಎರಡು: ಬಿಜೆಪಿ ಬಿ ಟೀಂ ಎಂದು ಕಿಡಿಕಾರಿದ್ದಾರೆ.

    ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
    ಆಧುನಿಕ ಭಾರತದ ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್ʼಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ ಅಲಿಯಾಸ್ ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ!

    ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಜಲ ವಿದ್ಯುತ್ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ? ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ ಎಂದು ಅವರು ಒತ್ತಾಯ ಮಾಡಿದ್ದಾರೆ.
    ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ’ಧನ’ ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಆರೋಪಿಸಿದ್ದಾರೆ.

    Verbattle
    Verbattle
    Verbattle
    Government Karnataka Nero News Politics Trending Varthachakra ಕಲೆ ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Next Article ಬಿಜೆಪಿ ಟಿಕೆಟ್ ವಂಚನೆಯ ಮತ್ತೊಂದು ಪ್ರಕರಣ | BJP
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    4 ಪ್ರತಿಕ್ರಿಯೆಗಳು

    1. 1win_imet on ಫೆಬ್ರವರಿ 12, 2026 3:24 ಫೂರ್ವಾಹ್ನ

      1win служба поддержки Бишкек http://1win17384.help

      Reply
    2. 1win_yxSi on ಫೆಬ್ರವರಿ 13, 2026 9:18 ಅಪರಾಹ್ನ

      1win как вывести бонусные деньги 1win как вывести бонусные деньги

      Reply
    3. mostbet_wgEa on ಫೆಬ್ರವರಿ 14, 2026 1:14 ಅಪರಾಹ್ನ

      mostbet xizmatlar http://mostbet69573.help

      Reply
    4. jaluzi s elektroprivodom_efpr on ಫೆಬ್ರವರಿ 16, 2026 7:23 ಫೂರ್ವಾಹ್ನ

      электрожалюзи купить zhalyuzi-s-elektroprivodom7.ru .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tbykoy ರಲ್ಲಿ ಕಬಿನಿ ಅರಣ್ಯ ಪ್ರದೇಶದಲ್ಲಿ ಈಶ್ವರ್ ಖಂಡ್ರೆಗೆ ಸಿಕ್ಕ ಹುಲಿರಾಯ
    • Laurentgop ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Fflpns ರಲ್ಲಿ ದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.