Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero
    Viral

    ಸಿದ್ದರಾಮಯ್ಯ ನೀರೋ ಅಲ್ಲ ರಾಜ್ಯದ ಪಾಲಿನ ಝೀರೋ? | Nero

    vartha chakraBy vartha chakraಮಾರ್ಚ್ 10, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.10- ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಅದೇ ರೀತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನೀರೋ (Nero), ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
    ರಾಜ್ಯದೆಲ್ಲೆಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಉದ್ಯೋಗ ಅರಸಿ ಜನ ಗುಳೆ ಹೋಗುತ್ತಿದ್ದಾರೆ ಇದಾವುದರ ಪರಿವೇ ಇಲ್ಲದೆ ನೀರೋನಂತೆ ನಮ್ಮ ಮುಖ್ಯಮಂತ್ರಿ ಗ್ಯಾರಂಟಿ ಸಮಾವೇಶದಲ್ಲಿ ನಿರತರಾಗಿದ್ದಾರೆ ಎಂದು ದೂರಿದ್ದಾರೆ.
    ನೀವು ಮುಖ್ಯಮಂತ್ರಿ ಅಲ್ಲ.ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ.

    ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
    ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

    ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    Verbattle
    Verbattle
    Verbattle
    Bangalore Congress Government Karnataka Nero News Politics ಇಡಿ ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    Next Article ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣ ರಾಜ್ಯಗಳ ಸಂಕಲ್ಪ | Eshwar Khandre
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    2 ಪ್ರತಿಕ್ರಿಯೆಗಳು

    1. Gaxmbu on ಫೆಬ್ರವರಿ 19, 2026 7:41 ಅಪರಾಹ್ನ

      Embark on a journey through captivating casino classics and modern hits. what is crowncoins ensures fair play with certified RNG technology. Grab your free spins and hit the jackpot!

      Reply
    2. Jtdzqp on ಫೆಬ್ರವರಿ 23, 2026 4:40 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza play free no registration lucky spin can change everything. Dive into the sweetness!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rfsnbv ರಲ್ಲಿ ತುಮಕೂರಿನಲ್ಲಿ ಮುದ್ದಹನುಮೇಗೌಡ ಗೆಲುವು ಕಷ್ಟ | Tumkur
    • Huzoya ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    • Flbioc ರಲ್ಲಿ ಜೂನ್8 ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.