Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದು ಮುತ್ಯಾನ ಬೆಂಕಿಯಂತ ಭವಿಷ್ಯ
    ರಾಜ್ಯ

    ಸಿದ್ದು ಮುತ್ಯಾನ ಬೆಂಕಿಯಂತ ಭವಿಷ್ಯ

    vartha chakraBy vartha chakraಫೆಬ್ರವರಿ 23, 2023Updated:ಫೆಬ್ರವರಿ 23, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ : ರಾಜ್ಯದ ಕೆಲ ಧಾರ್ಮಿಕ ಕ್ಷೇತ್ರಗಳು, ಮಠಗಳಲ್ಲಿ‌ ನುಡಿಯಲಾಗುವ ಭವಿಷ್ಯಗಳಿಗೆ ಎಲ್ಲಿಲ್ಲದ ಮಾನ್ಯತೆ ಇದೆ. ಅದೇಷ್ಟೋ ಭಕ್ತರು ಇಲ್ಲಿ ನುಡಿಯುವ ಕಾರ್ಣಿಕಗಳನ್ನ ಕೇಳಲೆಂದೆ ತುದಿಗಾಲ ಮೇಲೆ ನಿಂತು ಜಾತಕ ಪಕ್ಷಿಯಂತೆ ಕಾಯುತ್ತಾರೆ.
    ಇಂತಹ ಸಾಲಿಗೆ ಸೇರುವುದು ವಿಜಯಪುರದ ಬಬಲಾದಿ ಮಠ.
    ಜನ ಸಾಮಾನ್ಯರ ಬಾಯಲ್ಲಿ ಕಾಲಜ್ಞಾನದ ಮಠ, ಬೆಂಕಿ ಮಠ ಎಂದು ಕರೆಯಿಸಿಕೊಳ್ಳುವ ಬಬಲಾದಿ ಮಠ ಈ ಬಾರಿಯೂ‌ ಭವಿಷ್ಯ ವಾಣಿ ನುಡಿದಿದ್ದು ರಾಜ್ಯದೆಲ್ಲೆಡೆ ವ್ಯಾಪಕ ಚರ್ಚೆಯಾಗುತ್ತಿದೆ.
    ಕಾಲಜ್ಞಾನದಿಂದಲೇ ಪ್ರಸಿದ್ಧಿ ಪಡೆದಿರುವ ಬಬಲಾದಿ ಮಠ ವಿಶೇಷ ಸಂಪ್ರದಾಯವನ್ನು ಹೊಂದಿದೆ. ಪ್ರತಿವರ್ಷ ಶಿವರಾತ್ರಿ ಅಮಾವಾಸ್ಯೆಯಂದು ಜರುಗುವ ಜಾತ್ರೆಗೆ ಚಂದ್ರಗಿರಿ ತಾಯಿಯ ಜಾತ್ರೆಯೆಂದು ಕರೆಯಲಾಗುತ್ತದೆ.
    ಇವರು ಹೇಳಿದ ಭವಿಷ್ಯಗಳು ಇಂದಿಗೂ ನಿಜವಾಗುತ್ತ ಬಂದಿವೆ. ಮಠದ ಗುರುವನ್ನು ಕೃಷ್ಣಾ ನದಿಯಿಂದ ಮಠವರೆಗೆ ಹೆಗಲ ಮೇಲೆ ಹೊತ್ತುಕೊಂಡು ಬರುತ್ತಾರೆ. ಕೃಷ್ಣಾ ನದಿಯಿಂದ ಮಠದ ವರೆಗೆ ನಾಲ್ಕು ಬಾರಿ ಭವಿಷ್ಯ ಹೇಳಲಾಗುತ್ತದೆ. ಐದನೇ ಬಾರಿ ಮಠದ ಗುರುಮಾತೆಯ ಎದುರು ಶಿಶುಮಗ ಭವಿಷ್ಯ ಹೇಳುತ್ತಾನೆ. ಜಗತ್ತಿನಲ್ಲಿ ಭವಿಷ್ಯದಲ್ಲಿ ನಡೆಯುವ, ಘಟಿಸಬಹುದಾದ ದುರಂತಗಳು, ಮಳೆ, ಬೆಳೆ, ಪ್ರಳಯ ಮತ್ತಿತರ ಸುಖ-ದುಃಖದ ಘಟನೆಗಳನ್ನು ಇಲ್ಲಿ ಹೇಳುವುದು ಗಮನಾರ್ಹವಾಗಿದೆ.
    ಈ ಬಾರಿ ಬಬಲಾದಿ ಮಠದಲ್ಲಿ ಕೆಂಡದಂತ ಭವಿಷ್ಯ ನುಡಿಯಲಾಗಿದೆ. ಈ ಬಾರಿ ನುಡಿದ ಸ್ಪೋಟಕ ಭವಿಷ್ಯವನ್ನ ಕೇಳಿ ಭಕ್ತರೆ ಥಂಡಾ ಹೊಡೆದಿದ್ದಾರೆ. ಸಿದ್ದು ಮುತ್ಯಾ ನುಡಿದ ಭವಿಷ್ಯ ಆಲಿಸಿದ ಜನರು ಈ ಬಾರಿ ಏನು ಕಾದಿದೆಯೋ ಎಂದು ಆತಂಕಗೊಂಡಿದ್ದಾರೆ.
    ಸಿದ್ದು‌ ಮುತ್ಯಾ ಸಜ್ಜನರು ಕೂಡ ದುರ್ಜನರಾಗುತ್ತಾರೆ, ಹಿಂಗಾರು ಮುಂಗಾರು ಮಳೆ ಉತ್ತಮವಾಗಲಿದೆ.ನಮ್ಮ ನಮ್ಮಲ್ಲಿ ಜಗಳ ಹೊಡೆದಾಟ ನಡೆಯುತ್ತದೆ, ರಾಜ್ಯದಲ್ಲಿ ಕೊಲೆ, ಸುಲಿಗೆ ಪ್ರಕರಣ ಹೆಚ್ಚಲಿದೆ, ವೈಶಾಖ, ಜ್ಯೇಷ್ಟ ಮಾಸದಲ್ಲಿ ಶುಭವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅಲ್ಲಲ್ಲಿ.. ಮೂಲೆಗಳಲ್ಲಿ ಭೂಮಿ ಕುಪ್ಪಳಿಸಿತೋ ಮಕ್ಕಳಿರ್ಯಾ ಎಂದು ಭವಿಷ್ಯ ನುಡಿದಿರುವ ಅವರು ಭೂಕಂಪನದ ಕುರಿತು ಎಚ್ಚರಿಕೆ ನೀಡಿದ್ದಾರೆ. ಸಜ್ಜನರು ಕೂಡ ದುರ್ಜನರು ಆಗುತ್ತಾರೆ, ನಮ್ಮ ನಮ್ಮಲ್ಲಿ ಜಗಳ ಹೊಡೆದಾಟಗಳೂ ಆಗಲಿವೆ ,ಜಲಪುಳಯದ ಎಚ್ಚರಿಕೆಯನ್ನೂ ನೀಡಿ ಇನ್ನೊಂದು ಸೂತಕದ ಛಾಯೆ ಐತಿ ಎಂದಿದ್ದಾರೆ. ಯಾವುದೋ ಒಂದು ದಿಕ್ಕಿನಲ್ಲಿ ಜಲ ಪುಳಯವಾಗಲಿದೆ ಎಂದ ಸಿದ್ದು‌ಮುತ್ಯಾ ಕೆಲವೊಂದು ಕಡೆ ಭೂಮಿ ಕುಪ್ಪಳಿಸಲಿದೆ ಎಂದಿದ್ದಾರೆ.
    ಮಕ್ಕಳಿಗೆ ತಂದೆ-ತಂದೆ ತಾಯಿ ಮೇಲೆ ಹೆಚ್ಚಿನ ಪ್ರೀತಿ ಉಂಟಾಗಲಿದೆ. ಇದರಿಂದ ವೃದ್ದಾಶ್ರಮ ಕಡಿಮೆಯಾಗಲಿದೆ. ಗಡಿಕಾಯುವ ಯೋಧರಿಗೆ ಜಯ ಉಂಟಾಗಲಿದೆ,
    ಮುಂಗಾರು ಮಳೆ 9 ಆಣೆ, ಹಿಂಗಾರು ಮಳೆ 10 ಆಣೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.ಈ ಮಠದ ಕಾರ್ಣಿಕರು ನುಡಿಯುವ ಭವಿಷ್ಯಗಳು ಈವರೆಗೂ ಸುಳ್ಳಾಗಿಲ್ಲ ಎಂಬುದು ಭಕ್ತರ ನಂಬಿಕೆ.
    ಹೀಗಾಗಿ ಸದಾಶಿವ ಮುತ್ಯಾನ ಮಠದ ಭಕ್ತರು ಕಾಪಾಡು ಸದಾಶಿವ ಎಂದು ಪ್ರಾರ್ಥನೆ ಸಲ್ಲಿಸತೊಡಗಿದ್ದಾರೆ.

    Verbattle
    Verbattle
    Verbattle
    ಕೊಲೆ ಧಾರ್ಮಿಕ ಭೂಕಂಪ
    Share. Facebook Twitter Pinterest LinkedIn Tumblr Email WhatsApp
    Previous Articleಕುಖ್ಯಾತ ದರೋಡೆಕೋರರ ಸಹಚರರ ಬಂಧನ
    Next Article ಯುವತಿ ಮೇಲಲ್ಲ, ಸೀಟಿನ ಮೇಲೆ ಮೂತ್ರ ವಿಸರ್ಜನೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • comparecarinsurancerfgj-660 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • LeonardReawn ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.