Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    Viral

    ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank

    vartha chakraBy vartha chakraಏಪ್ರಿಲ್ 24, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.24: ಲೋಕಸಭೆ ಚುನಾವಣೆಯ ಪ್ರಚಾರದ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ (Raghvendra Bank) ಮತ್ತು ವಸಿಷ್ಠ ಬ್ಯಾಂಕ್ ಹಗರಣದ ಬಗ್ಗೆ ಸಿಬಿಐ ಅಥವಾ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
    ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆಗೆ ಬಂದಿರುವ ಅವರನ್ನು ಭೇಟಿ ಮಾಡಿದ ಎರಡು ಬ್ಯಾಂಕುಗಳ ಠೇವಣಿದಾರರು ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಸಲ್ಲಿಸಿದರು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಸಲಹೆ ನೀಡಿದ್ದಾರೆ.

    ಪ್ರಿಯಾಂಕಾ ಅವರ ಸೂಚನೆಯ ಹಿನ್ನೆಲೆಯಲ್ಲಿ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುರಾಘವೇಂದ್ರ ಸಹಕಾರ ಬ್ಯಾಂಕ್‍ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ತಮ್ಮ ಖಾತೆಯಲ್ಲಿ ಉಳಿತಾಯಕ್ಕೆ ಹಣವನ್ನಿಟ್ಟಿದ್ದರು. ಅದು ಬಿಜೆಪಿ ನಾಯಕರ ಪಾಲಾಗಿದೆ. ಹೀಗಾಗಿ ತೊಂದರೆಗೆ ಸಿಲುಕಿದ ಬಹಳಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 300 ಕ್ಕೂ ಹೆಚ್ಚು ಪ್ರಾಣಹಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಹಗರಣವನ್ನು ರಾಜ್ಯಸರ್ಕಾರ ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ಹಗರಣದಲ್ಲಿ ಬಿಜೆಪಿ ನಾಯಕರೇ ಹೆಚ್ಚು ಭಾಗಿಯಾಗಿರುವುದರಿಂದಾಗಿ ಸಿಬಿಐ ಈವರೆಗೂ ತನಿಖೆ ಕೈಗೆತ್ತಿಕೊಂಡಿಲ್ಲ. ಬೇರೆಬೇರೆ ಪ್ರಕರಣಗಳಲ್ಲಿ ನಮ್ಮಂಥವರಿಗೆ ಕಿರುಕುಳ ಕೊಡುವುದರಲ್ಲಿ ಸಿಬಿಐ ತೊಡಗಿದೆ ಎಂದು ಆರೋಪಿಸಿದರು.
    ಬ್ಯಾಂಕ್ ಠೇವಣಿದಾರರು ಇಂದು ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.ಈ ವೇಳೆ ಠೇವಣಿದಾರರಿಗೆ ಭರವಸೆ ನೀಡಿರುವ ಪ್ರಿಯಾಂಕ ಗಾಂ ಸಿಬಿಐ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವುದಾದರೆ ಕೊಡಿಸಿ. ಇಲ್ಲವಾದರೆ, ರಾಜ್ಯಸರ್ಕಾರವೇ ವಿಶೇಷ ತನಿಖಾ ದಳ ರಚನೆ ಮಾಡಿ ಸಂತ್ರಸ್ತರ ನೆರವಿಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ.
    ಈ ವಿಷಯವಾಗಿ ತಮ್ಮೊಂದಿಗೂ ಚರ್ಚಿಸಿದ್ದು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಪ್ರಿಯಾಂಕ ಗಾಂಧಿ ಹೇಳಿರುವುದಾಗಿ ಡಿ.ಕೆ.ಶಿವಕುಮಾರ್ ವಿವರಿಸಿದರು.ಲೋಕಸಭಾ ಚುನಾವಣೆ ಬಳಿಕ ಕಾನೂನು ರೀತಿಯಲ್ಲಿ ಎಸ್‍ಐಟಿ ರಚಿಸಿ ನ್ಯಾಯ ಕೊಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೇಯಸಿ ಜೊತೆ ಥೈಲ್ಯಾಂಡ್ ನಲ್ಲಿ ಸಿಕ್ಕಿಬಿದ್ದ ಗ್ಯಾಂಗ್ ಸ್ಟರ್ | Ravi Kana
    Next Article ಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    3 ಪ್ರತಿಕ್ರಿಯೆಗಳು

    1. Pcdpzg on ಫೆಬ್ರವರಿ 16, 2026 7:41 ಫೂರ್ವಾಹ್ನ

      mcluck Georgia mcluckcasinogm mcluck IN

      Reply
    2. Tcempx on ಫೆಬ್ರವರಿ 17, 2026 4:18 ಅಪರಾಹ್ನ

      As undivided of the top-rated sweepstakes casinos, wow vegas casino delivers thousands of high-quality slots from pre-eminent providers without any real-money deposits required. Contemporary players make a massive offer hospitality to package of WOW Coins and unshackled Sweepstakes Coins to start spinning right away.

      Reply
    3. Qvhtbk on ಫೆಬ್ರವರಿ 18, 2026 10:41 ಅಪರಾಹ್ನ

      Immerse yourself in the world of virtual excitement. crowncoinscasino offers a user-friendly interface and mobile app. Get your first win today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_jssl ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • online casino 18 ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Neiroset dlya ychebi_edsl ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.