Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Software ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್
    ಸುದ್ದಿ

    Software ಉದ್ಯೋಗದ ಆಸೆ ಹುಟ್ಟಿಸಿ ವಂಚಿಸುತ್ತಿದ್ದ ಗ್ಯಾಂಗ್

    vartha chakraBy vartha chakraಫೆಬ್ರವರಿ 3, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.3-

    Software Company ಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್​ನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ನಲ್ಲಿದ್ದ ಆಂದ್ರಪ್ರದೇಶದ ವಿಜಯವಾಡ ಕೃಷ್ಣಜಿಲ್ಲೆಯ ಮಲ್ಲು ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26), ಗುಂಜ ಮಂಗರಾವ್(35), ಇಬ್ರಾಹಿಂ ಪಟ್ಟಣಂನ ಶೇಖ್ ಶಹಬಾಷಿ(30), ಎನ್ ಟಿ ಆರ್ ಜಿಲ್ಲೆಯ ಮಹೇಶ್( 21) ಬಂಧಿತ ಆರೋಪಿಗಳಾಗಿದ್ದಾರೆ.

    ‘ಆರೋಪಿಗಳು ಹಣ ವರ್ಗಾವಣೆ ಮಾಡಿಕೊಳ್ಳಲು ಬಳಸಿಕೊಂಡಿದ್ದ ಹಲವು ಬ್ಯಾಂಕ್ ಖಾತೆಗಳಲ್ಲಿನ 5,95,585 ರೂ ಹಣವನ್ನು ಫ್ರೀಜ್ ಮಾಡಲಾಗಿದೆ’ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ. ಬಂಧಿತರ ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡುತ್ತಿತ್ತು. ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್​​ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ಬುಕ್​ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಆಂಧ್ರದಿಂದ ಬೆಂಗಳೂರಿಗೆ ಬರುವಂತೆ ಹೇಳಿದ್ದನು.

    ಅದರಂತೆ ಪ್ರದೀಪ್ ಅಸಾಮ್ವರ್ ಕಳೆದ ಜ. 11 ರಂದು ಬೆಳಗ್ಗೆ 5.30 ಕ್ಕೆ ಹೆಬ್ಬಾಳ ಬಳಿ ಬಂದು ಇಳಿದಿದ್ದನು. ಅಲ್ಲಿಂದ ಪ್ರದೀಪ್ ಅಸಾಮ್ವರ್​​ನನ್ನು ಸ್ವಿಫ್ಟ್ ಕಾರಿನಲ್ಲಿ ಬಂದು ನಾಲ್ವರು ಕರೆದುಕೊಂಡು ಹೊರಟಿದ್ದು, ಈ ವೇಳೆ ಪ್ರದೀಪ್ ಅಸಾಮ್ವರ್ ಕಾರಿನ ಫೋಟೊ ತೆಗೆದುಕೊಂಡಿದ್ದನು. ಪ್ರದೀಪ್​​ನ​ನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದ ಗ್ಯಾಂಗ್​ ಮ್ಯಾನೇಜರ್ ಭೇಟಿ ಮಾಡಿಸುತ್ತೇವೆ ಎಂದಿದ್ದರು.

    ಕಾರಿನಲ್ಲಿ ಹೋಗುವಾಗ ಪ್ರದೀಪ್, ಶಿವಶಂಕರ್ ರೆಡ್ಡಿ ಜೊತೆಗೆ ಬಂದಿದ್ದವರ ಹೆಸರು ಕೇಳಿದ್ದಾನೆ. ಆಗ ಆರೋಪಿ ಶಿವಶಂಕರ್​ ರೆಡ್ಡಿ ಹೆಸರು ಹೇಳದಿದ್ದಾಗ ಆತನಿಗೆ ಅನುಮಾನ ಬಂದಿದೆ. ಬಳಿಕ ಗ್ಯಾಂಗ್ ಡಾಕ್ಯುಮೆಂಟ್ ಚಾರ್ಜ್ ಎಂದು 30 ಸಾವಿರ ಹಣ ಹಾಕಲು ಪ್ರದೀಪ್​​ಗೆ ಹೇಳಿದೆ. ಗೂಗಲ್​​ ಪೇ ವರ್ಕ್ ಆಗದಿದ್ದಾಗ ಮೊಬೈಲ್ ಕಸಿದು ಪರಿಶೀಲನೆ ಮಾಡಿದ್ದಾರೆ. ಆಗ ಕಾರಿನ ಫೋಟೊ ಲೈವ್ ಲೊಕೇಶನ್ ನೋಡಿ ಪ್ರದೀಪ್​ಗೆ ಥಳಿಸಿದ್ದಾರೆ. ನಂತರ ‘ನಿನಗೆ ಕೆಲಸ ಸಿಕ್ಕಿದೆ ಎಂದು ಸ್ನೇಹಿತರ ಬಳಿ ಹಣ ಹಾಕಿಸಿಕೊ’ ಎಂದು ಪ್ರದೀಪ್​ಗೆ ಬೆದರಿಸಿದ್ದಾರೆ. ಹೀಗೆ ಆರೋಪಿಗಳು ಒಟ್ಟು 6 ಲಕ್ಷ ಹಣವನ್ನು ಅಕೌಂಟ್ ಮೂಲಕ ಪಾವತಿ ಮಾಡಿಸಿಕೊಂಡಿದ್ದಾರೆ. ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ಆ್ಯಪ್​ನಲ್ಲೂ ಹಣ ಹಾಕಿಸಿಕೊಂಡಿದ್ದಾರೆ. ನಂತರ ಯಲಹಂಕ ಸಮೀಪದ ಡೆಕಾತ್ಲ್ಯಾನ್ (Decathlon) ಬಳಿ ಬಿಟ್ಟು ಪರಾರಿಯಾಗಿದ್ದಾರೆ.

    ಬಳಿಕ ಪ್ರದೀಪ್ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಟೆಕ್ಕಿಯಾಗಿದ್ದ ಮಲ್ಲು:

    ಕೊಡಿಗೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಭಯಾನಕ ವಿಚಾರ ಹೊರಬಂದಿದ್ದು ಆರೋಪಿ ಮಲ್ಲು ಅಲಿಯಾಸ್​ ಗೋಪಿಚಂದ್ ಕೂಡ ಟೆಕ್ಕಿಯಾಗಿದ್ದಾನೆ. ಮಾನ್ಯತಾ ಟೆಕ್ ಪಾರ್ಕ್ (Manyata Tech Park) ​​ನಲ್ಲಿ ನಕಲಿ ದಾಖಲಾತಿ‌ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದನು. ವಿಷಯ ಗೊತ್ತಾದ ಬಳಿಕ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಆಗಿನಿಂದ ಕೆಲಸ ಇಲ್ಲದೆ ಫೇಸ್ಬುಕ್ ನಲ್ಲಿ ಶಿವಶಂಕರ್ ಎನ್ನುವ ಹೆಸರಲ್ಲಿ‌ ನಕಲಿ‌ ಖಾತೆ ತೆರೆದಿದ್ದನು. ನಂತರ ನಮ್ಮಲ್ಲಿ ಕನ್ಸಲ್ಟೆನ್ಸಿ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡಲಾಗಿತ್ತು.

    ಆಸಕ್ತಿ ಇರುವವರು ಸಂಪರ್ಕಿಸಿದಾಗ ಬಲೆ ಹಾಕುತ್ತಿದ್ದನು. ಆರೋಪಿ ಕೇವಲ‌ ಮೆಸೆಂಜರ್​ನಲ್ಲಿ ಮಾತ್ರ ಸಂಪರ್ಕ ಮಾಡುತ್ತಿದ್ದನು. ಕೆಲಸ ಕೊಡಿಸಲು 4-5 ಲಕ್ಷಕ್ಕೆ ಡಿಮ್ಯಾಂಡ್ ಮಾಡುತ್ತಿದ್ದನು. ಹಣ ಇದೆಯೋ ಇಲ್ಲವೋ ಎನ್ನುವುದನ್ನು ತಿಳಿಯಲು ಅಕೌಂಟ್ ಬ್ಯಾಲೆನ್ಸ್ ಸ್ಕ್ರೀನ್ ಶಾಟ್ ಕಳುಹಿಸಿಕೊಳ್ಳುತ್ತಿದ್ದನು ಎಂದು ಗ್ಯಾಂಗ್ ಬಂಧಿಸಿದ ಕೊಡಿಗೆಹಳ್ಳಿ‌ ಇನ್ಸ್‌ಪೆಕ್ಟರ್  ಎನ್.ರಾಜಣ್ಣ ತಿಳಿಸಿದ್ದಾರೆ.

    Bangalore crime m manyata tech park software company Tech war ಅಪರಾಧ ಸುದ್ದಿ ಫೇಸ್ಬುಕ್
    Share. Facebook Twitter Pinterest LinkedIn Tumblr Email WhatsApp
    Previous ArticleMetro ಪಿಲ್ಲರ್ ದುರಂತಕ್ಕೆ ಯಾರು ಹೊಣೆ?
    Next Article ಸಂಚಾರ ನಿಯಮ ಉಲ್ಲಂಘನೆ ಶೇ.50ರ ರಿಯಾಯಿತಿ ದಂಡ ಪಾವತಿಗೆ ಅವಕಾಶ!
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. 055my on ಜೂನ್ 3, 2025 5:34 ಅಪರಾಹ್ನ

      clomiphene for sale uk how to get clomiphene without prescription where to get generic clomid no prescription where to get clomid without dr prescription how to buy cheap clomiphene can i order generic clomiphene pills clomid price uk

      Reply
    2. splitting cialis pills on ಜೂನ್ 9, 2025 10:51 ಫೂರ್ವಾಹ್ನ

      Good blog you be undergoing here.. It’s intricate to espy strong quality belles-lettres like yours these days. I honestly recognize individuals like you! Withstand mindfulness!!

      Reply
    3. order flagyl on ಜೂನ್ 11, 2025 5:08 ಫೂರ್ವಾಹ್ನ

      This website really has all of the information and facts I needed about this subject and didn’t comprehend who to ask.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo ರಲ್ಲಿ Crypto ವಂಚಕ Arrest.
    • RobertBag ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • bitcoin atm georgia ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe