Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir
    Viral

    ರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir

    vartha chakraBy vartha chakraಜನವರಿ 24, 2024156 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಅಯೋಧ್ಯೆಯಲ್ಲಿ ರಾಮಮಂದಿರ (Ram Mandir) ಉದ್ಘಾಟನೆಯಾಗಿ ಬಾಲರಾಮನ ಪ್ರತಿಷ್ಠಾಪನೆ ಯಾಗುತ್ತಿದ್ದಂತೆ, ದೇಶಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಇದರ ಬೆನ್ನಲ್ಲೇ ಇದೀಗ ಕರ್ನಾಟಕ ಸರ್ಕಾರ ಕೂಡ ರಾಮ ನಾಮ ಜಪಿಸತೊಡಗಿದೆ.
    ಭಗವಾನ್ ಶ್ರೀರಾಮ ಎಲ್ಲರ ಆರಾಧ್ಯ ದೈವ ಈತ ಯಾವುದೋ ಪಕ್ಷ ಅಥವಾ ಸಂಘಟನೆಗೆ ಸೀಮಿತವಲ್ಲ ಎಂದು ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಸರ್ಕಾರ ರಾಮನ ಕುರಿತು ತನ್ನ ಪ್ರೀತಿಯನ್ನು ಬಹಿರಂಗಪಡಿಸಲು ಮುಂದಾಗಿದೆ.
    ಜನವರಿ 22 ರಂದು‌ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಉದ್ಘಾಟನೆ ಮತ್ತು ಬಾಲರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಸರ್ಕಾರದ ಪ್ರತಿನಿಧಿಗಳಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ,ಪಕ್ಷದ ನಾಯಕತ್ವ ಕೈಗೊಂಡ ತೀರ್ಮಾನದಂತೆ ಕಾರ್ಯಕ್ರಮದಿಂದ ದೂರ ಉಳಿದ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದೀಗ ರಾಜ್ಯಾದ್ಯಂತ ರಾಮನಾಮ ಜಪಿಸಲು ಹೊಸ ಸಿದ್ಧತೆ ಮಾಡಿದೆ.

    ರಾಜ್ಯದಲ್ಲಿರುವ ಎಲ್ಲಾ ರಾಮ ಮಂದಿರಗಳ ಪುನರುಜ್ಜೀವನ ಮತ್ತು ಪುನರ್ ನಿರ್ಮಾಣಕ್ಕೆ ಹೊಸದೊಂದು ಯೋಜನೆಯನ್ನು ಸಿದ್ಧಪಡಿಸಿರುವ ಮುಜರಾಯಿ ಇಲಾಖೆ ಇದಕ್ಕಾಗಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರಿಯಾಯೋಜನೆಯನ್ನು ರೂಪಿಸಿದೆ.
    ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ವಿಶೇಷ ಆಸಕ್ತಿ ವಹಿಸಿ ಈ ಯೋಜನೆಯನ್ನು ಸಿದ್ಧಪಡಿಸುತ್ತಿದ್ದು ಇಲಾಖೆಯ ಮೂಲಕ ರಾಜ್ಯದಲ್ಲಿರುವ ಎಲ್ಲಾ ರಾಮಮಂದಿರಗಳ ಕುರಿತಾದ ವಿವರಗಳನ್ನು ಸಂಗ್ರಹಿಸಿದ್ದಾರೆ. ಇದರ ಜೊತೆಗೆ ಖಾಸಗಿಯಾಗಿ ನಿರ್ಮಾಣಗೊಂಡು ನಿರ್ವಹಣೆಯಿಲ್ಲದಿರುವ ರಾಮಮಂದಿರಗಳಿಗೂ ಕೂಡ ಅನುದಾನ ಬಿಡುಗಡೆ ಮಾಡಿ ಅವುಗಳ ಪುನರ್ ನಿರ್ಮಾಣಕ್ಕೆ ಸಚಿವರು ತೀರ್ಮಾನಿಸಿದ್ದಾರೆ ಈ ಸಂಬಂಧ ಇಲಾಖೆಯಿಂದ ಪ್ರತ್ಯೇಕ ಪ್ರಸ್ತಾವನೆ ಸಿದ್ಧಗೊಂಡಿದ್ದು ಅನುಮೋದನೆಗಾಗಿ ಹಣಕಾಸು ಇಲಾಖೆಗೆ ಸಲ್ಲಸಿಲಾಗಿದೆ.
    ಮುಂಬರುವ ಬಜೆಟ್ ನಲ್ಲಿ ಈ ಕುರಿತಾದ ವಿಶೇಷ ಯೋಜನೆ ಪ್ರಕಟವಾಗಲಿದೆ ಎಂದು ಮುಜರಾಯಿ ಇಲಾಖೆ ಮೂಲಗಳು ತಿಳಿಸಿವೆ.ಇದರ ಜೊತೆಯಲ್ಲಿ ರಾಜ್ಯದ ಎಲ್ಲಾ ಮಠಗಳಿಗೂ ಅಭಿವೃದ್ಧಿ, ಶೈಕ್ಷಣಿಕ,ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲು ವಿಶೇಷ ಅನುದಾನ ಬಿಡುಗಡೆ ಮಾಡುವ ಪ್ರಸ್ತಾವನೆಯನ್ನು ಮುಜರಾಯಿ ಇಲಾಖೆ ಸಿದ್ಧಪಡಿಸಿದೆ.

    ರಾಜ್ಯದ ವಿವಿಧ ಸಮುದಾಯಗಳ ಮಠಗಳಿಗೆ ಜಾತಿವಾರು ಜನಸಂಖ್ಯೆಯನ್ನು ಆಧರಿಸಿ‌ ಆರ್ಥಿಕ ನೆರವು ನೀಡುವ ಯೋಜನೆ ಸಿದ್ಧಪಡಿಸಿದ್ದು,ಇದಕ್ಕಾಗಿ 200 ಕೋಟಿ ರೂಪಾಯಿ ನೆರವನ್ನು ಬಜೆಟ್ ನಲ್ಲಿ ಘೋಷಿಸುವಂತೆ ಮನವಿ ಸಲ್ಲಿಸಿದೆ.
    ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ವಿವಿಧ ಮಠಗಳಿಗೆ ಆರ್ಥಿಕ ನೆರವು ಘೋಷಿಸಿದ್ದರು.ಇದು ಅವರಿಗೆ ರಾಜಕೀಯವಾಗಿ ಸಾಕಷ್ಟು ಬಲ ತಂದುಕೊಟ್ಟಿತ್ತು. ಆದರೆ ನಂತರದಲ್ಲಿ ಅನುದಾನದ ಪ್ರಮಾಣ ಕಡಿತಗೊಂಡಿತ್ತು.ಇದೀಗ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅನುದಾನ ಬಿಡುಗಡೆ ಮಾಡಲು ಸಜ್ಜುಗೊಂಡಿದೆ ಎನ್ನಲಾಗಿದೆ.

    Karnataka m News Politics ram mandir Trending Varthachakra ಕಾಂಗ್ರೆಸ್ ಚುನಾವಣೆ ಧಾರ್ಮಿಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy
    Next Article ದಾವೋಸ್ ನಿಂದ ಹರಿದು ಬಂದ ಬಂಡವಾಳ | Davos
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyhaf ರಲ್ಲಿ ಚಿನ್ನದಂಗಡಿಗಳಿಗೆ IT shock!
    • double happiness cigarette australia ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • double happiness cigarette ರಲ್ಲಿ Crypto ವಂಚಕ Arrest.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ವರ್ಷದಲ್ಲಿ 3ನೇ ಗಂಡನನ್ನೂ ಬಿಟ್ಟನಟಿ#varthachakra #malayalamactresses #meeravasudevan #divorce #fact
    Subscribe