ಚಿತ್ರದುರ್ಗ, ಡಿ.30- ಚಿತ್ರದುರ್ಗದ (Chitradurga) ಅತ್ಯಂತ ಜನನಿಬಿಡ ಪ್ರದೇಶದಲ್ಲಿನ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾದ ಬೆನ್ನಲ್ಲೇ ಇಡೀ ರಸ್ತೆಗೆ ಗರ ಬಡಿದಂತಾಗಿದೆ.
ಪಾಳು ಬಿದ್ದ ಮನೆಯ ಅಕ್ಕಪಕ್ಕದ ಮನೆಗಳ ನಿವಾಸಿಗಳು ಆತಂಕಗೊಂಡು ತಮ್ಮ ಮನೆಗಳಿಗೆ ಬೀಗ ಹಾಕಿ ನೆಂಟರ ಮನೆಗಳಿಗೆ ತೆರಳಿದ್ದಾರೆ.
ಜನನಿಬಿಡಪ್ರದೇಶವಾಗಿದ್ದ ಜಿಲ್ಲಾ ಕಾರಾಗೃಹ ರಸ್ತೆಯಲ್ಲಿ ಜನರ ಓಡಾಟ ವಿರಳವಾಗಿದ್ದು, ಇದೀಗ ಬಿಕೋ ಎನ್ನುತ್ತಿದೆ.
ಪ್ರತಿ ದಿನ ಚಿತ್ರದುರ್ಗದ ನಾಗರಿಕರು ಬೆಳಗ್ಗೆ ಮತ್ತು ಸಂಜೆ ಈ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದರು. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವಾಯುವಿಹಾರಿಗಳು ಕೂಡ ಭಯಗೊಂಡಿದ್ದಾರೆ. ಹೀಗಾಗಿ ಅವರು ರಸ್ತೆಗೆ ಬಂದಿಲ್ಲ.
ಇದೇ ರಸ್ತೆಯ ಕೊನೆಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳಿವೆ.ಘಟನೆಯ ವಿವರ ತಿಳಿದ ಗ್ರಾಹಕರು ಅಲ್ಲಿಗೂ ಬರುತ್ತಿಲ್ಲ .ಇದರಿಂದ ಬಾರ್ ಮಾಲೀಕರು ಆತಂಕಗೊಂಡಿದ್ದಾರೆ. ವಾಹನ ಸಂಚಾರ, ಜನದಟ್ಟಣೆ ಇಲ್ಲದೇ ಜೈಲು ರಸ್ತೆ ಬಿಕೋ ಎನ್ನುತ್ತಿದೆ.
ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆಯಲ್ಲಿ ಭಯಗೊಂಡಿರುವ ವಾಯುವಿಹಾರಿಗಳು ಕೂಡ ಇಂದು ರಸ್ತೆಯತ್ತ ಮುಖಮಾಡಿಲ್ಲ.
ಕಳೆದ 4 ವರ್ಷಗಳಿಂದ ಜೈಲ್ ರಸ್ತೆಯ ಈ ಮನೆ ಬಾಗಿಲು ಮುಚ್ಚಿತ್ತು.ಮನೆಯಲ್ಲಿ ಯಾರಾದರೂ ಇರಬಹುದು ಎಂದು ಅಕ್ಕಪಕ್ಕದವರು ಭಾವಿಸಿದ್ದರು.ಆದರೆ ಆ ಮನೆಯಲ್ಲಿದ್ದವರು ಮೃತಪಟ್ಟು ಅಸ್ಥಿಪಂಜರವಾಗಿದ್ದಾರೆ.
ಈ ಸಂಬಂಧ ಮನೆಯಲ್ಲಿದ್ದವರ ಸಂಬಂಧಿ
ಪವನ್ ಕುಮಾರ್ ಎಂಬವರು ಬಡಾವಣೆ ಠಾಣೆಗೆ ದೂರು ನೀಡಿದ್ದರು. ಈ ಮನೆಯಲ್ಲಿ ನಮ್ಮ ಸಂಬಂಧಿ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿತ್ತು. ಸುಮಾರು ವರ್ಷಗಳಿಂದ ಜಗನ್ನಾಥ ರೆಡ್ಡಿ ಕುಟುಂಬ ನಮ್ಮ ಸಂಪರ್ಕದಲ್ಲಿರಲಿಲ್ಲ. ನಮ್ಮ ಮನೆಗೆ ಅವರು ಬರುತ್ತಿರಲಿಲ್ಲ.ನಾವು ಅವರ ಮನೆಗೆ ನಾವು ಹೋಗುತ್ತಿರಲಿಲ್ಲ. ಕೆಲ ವರ್ಷಗಳಿಂದ ಜಗನ್ನಾಥ ರೆಡ್ಡಿ ಮತ್ತು ಕುಟುಂಬದವರು ಕಂಡಿಲ್ಲ. ಜಗನ್ನಾಥ ರೆಡ್ಡಿ ಮನೆಯಲ್ಲಿ ಪತ್ತೆ ಆಗಿರುವುದು ಅವರ ಅಸ್ಥಿಪಂಜರ ಆಗಿರಬಹುದೆಂಬ ಶಂಕೆ ಇದೆ. 3 ವರ್ಷದ ಹಿಂದೆಯೇ ಮನೆಯಲ್ಲಿ ಮೃತಪಟ್ಟಿರಬಹುದು ಎಂದು ಮೃತರ ಸಾವಿನ ಬಗ್ಗೆ ಅನುಮಾನ ಇದೆ ಎಂದು ದೂರಿನಲ್ಲಿ ತಿಳಿಸಿದ್ದರು.
ಈ ಸಂಬಂಧ ಎಸ್ಪಿ ಧರ್ಮೇಂದರ್ ಕುಮಾರ್, ಡಿವೈಎಸ್ಪಿ ಅನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ 4 ವರ್ಷದ ಹಿಂದಿನ ಡೆತ್ನೋಟ್ ಈ ಐವರ ಸಾವಿನ ಸುಳಿವನ್ನು ಕೊಟ್ಟಿದೆ.
ಸಾವಿಗೂ ಮುನ್ನ ಈ ಐವರು ಡೆತ್ನೋಡ್ ಬರೆದಿಟ್ಟಿದ್ದು, ಅದರಲ್ಲಿ ಕಾರಣವನ್ನು ತಿಳಿಸಿದ್ದಾರೆ.
ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಪ್ರಕರಣ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ಇದರಿಂದ ಅವರು ಕೆಲದಿನ ಜೈಲುವಾಸವನ್ನೂ ಅನುಭವಿಸಿದ್ದರು. ನರೇಂದ್ರರೆಡ್ಡಿ ವಿರುದ್ಧದ ಕೇಸಿನಿಂದ ಮನನೊಂದಿದ್ದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶರಣಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ.
ALSO READ | Latest Kannada News | Kannada News | Chitradurga News
3 ಪ್ರತಿಕ್ರಿಯೆಗಳು
can you buy generic clomiphene without a prescription cost cheap clomid without rx clomiphene price in usa where to get generic clomiphene price get generic clomiphene without insurance clomiphene reddit where can i buy clomid tablets
This website absolutely has all of the bumf and facts I needed to this participant and didn’t know who to ask.
More posts like this would bring about the blogosphere more useful.