Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    ಅಪರಾಧ

    ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 202324 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ.
    ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ
    ಹೊರಟು 14 ಗಂಟೆ 26 ನಿಮಿಷಗಳ ಹಾರಾಟ ನಡೆಸಿ, ನಿನ್ನೆ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಇಳಿದ ಎಎ292 ಸಂಖ್ಯೆಯ ವಿಮಾನದಲ್ಲಿ ಈ‌ ಘಟನೆ ನಡೆದಿದೆ.
    ಆರೋಪಿಯು ಯುಎಸ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು,ಆತ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದು, ಇದು ಸಹ ಪ್ರಯಾಣಿಕರ ಮೈಮೇಲೆ ಬಿದ್ದಿದೆ. ಕೂಡಲೇ ಎಚ್ಚೆತ್ತ ಪ್ರಯಾಣಿಕ ವಿಮಾನ ಸಿಬ್ಬಂದಿಗೆ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿ ಸಹ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದಾನೆ. ಇದರಿಂದಾಗಿ ಸಂತ್ರಸ್ತ ಪ್ರಯಾಣಿಕ ಪೊಲೀಸರಿಗೆ ದೂರು ನೀಡಲು ಮುಂದಾಗಿಲ್ಲ. ಆತನ ವೃತ್ತಿಜೀವನಕ್ಕೆ ತೊಡಕಾಗಬಹುದೆಂದು ಸುಮ್ಮನಾಗಿದ್ದಾರೆ. ಆದರೆ, ವಿಮಾನಯಾನ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ವರದಿ ನೀಡಿದೆ.
    ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸಿಐಎಸ್‌ಎಫ್‌ನೊಂದಿಗೆ ಏರ್‌ಲೈನ್ಸ್‌ನ ಭದ್ರತಾ ತಂಡವು ಸ್ಥಳಕ್ಕೆ ಆಗಮಿಸಿ, ಆರೋಪಿ ವಿಮಾನದಿಂದ ಇಳಿದ ತಕ್ಷಣ ಬಂಧಿಸಿದೆ. ಪೊಲೀಸರೂ ಸಹ ಸಂಬಂಧಪಟ್ಟ ವ್ಯಕ್ತಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ” ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.
    ನಾಗರಿಕ ವಿಮಾನಯಾನ ನಿಯಮಗಳ ಪ್ರಕಾರ ಪ್ರಯಾಣಿಕರು ಅಶಿಸ್ತಿನ ವರ್ತನೆಗೆ ತೋರಿರುವುದು ಕಂಡುಬಂದರೆ ಅವರ ವಿರುದ್ಧ ಕ್ರಿಮಿನಲ್ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ ನಿರ್ದಿಷ್ಟ ಅವಧಿಗೆ ವಿಮಾನಯಾನ ಮಾಡುವುದನ್ನು ಕೂಡ ನಿಷೇಧಿಸಲಾಗುತ್ತದೆ.
    ಕಳೆದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿಯೂ ಸಹ ಇಂತಹದ್ದೇ ಘಟನೆ ನಡೆದಿತ್ತು. ಶಂಕರ್ ಮಿಶ್ರಾ ಎಂಬಾತ ಕುಡಿದ ಅಮಲಿನಲ್ಲಿ ವೃದ್ಧೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಸುಮಾರು ಒಂದು ತಿಂಗಳ ನಂತರ ಬೆಳಕಿಗೆ ಬಂದಿತ್ತು. ಬಳಿಕ ಈ ಕುರಿತು ಎಫ್‌ಐಆರ್ ದಾಖಲಿಸಿ, ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸುಮಾರು ಒಂದು ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
    ಅಷ್ಟೇ ಅಲ್ಲದೇ, ಘಟನೆ ನಡೆದ 12 ಗಂಟೆಯೊಳಗೆ ನಿಯಮಾನುಸಾರ ವರದಿ ನೀಡದ ಏರ್ ಇಂಡಿಯಾಕ್ಕೆ ಡಿಜಿಸಿಎ 30 ಲಕ್ಷ ರೂ ದಂಡ ವಿಧಿಸಿತ್ತು. ದೆಹಲಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗಲೇ ಮಿಶ್ರಾಗೆ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿ ಆದೇಶ ಹೊರಡಿಸಿದ್ದರು.

    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    Next Article March 9ಕ್ಕೆ ಕರ್ನಾಟಕ ಬಂದ್ #bundh
    vartha chakra
    • Website

    Related Posts

    ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!

    ಜನವರಿ 4, 2026

    ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ

    ಜನವರಿ 3, 2026

    CET ವೇಳಾಪಟ್ಟಿ ಪ್ರಕಟ

    ಜನವರಿ 3, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RandomNameCal ರಲ್ಲಿ ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
    • fen daison kypit_pgst ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • esporte da sorte casino ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

    ಜನವರಿ 8, 2026

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.