Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ
    ಅಪರಾಧ

    ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವಿದ್ಯಾರ್ಥಿ

    vartha chakraBy vartha chakraಮಾರ್ಚ್ 5, 2023Updated:ಮಾರ್ಚ್ 5, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ನವದೆಹಲಿ,ಮಾ.5-ನ್ಯೂಯಾರ್ಕ್‌ನಿಂದ ನವದೆಹಲಿಗೆ ನಿನ್ನೆ ಬರುತ್ತಿದ್ದ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ.
    ನ್ಯೂಯಾರ್ಕ್‌ನಿಂದ ಮಾ.3 ರಾತ್ರಿ 9:16ಕ್ಕೆ
    ಹೊರಟು 14 ಗಂಟೆ 26 ನಿಮಿಷಗಳ ಹಾರಾಟ ನಡೆಸಿ, ನಿನ್ನೆ ರಾತ್ರಿ 10:12 ಕ್ಕೆ ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಇಳಿದ ಎಎ292 ಸಂಖ್ಯೆಯ ವಿಮಾನದಲ್ಲಿ ಈ‌ ಘಟನೆ ನಡೆದಿದೆ.
    ಆರೋಪಿಯು ಯುಎಸ್ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದು,ಆತ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದು, ಇದು ಸಹ ಪ್ರಯಾಣಿಕರ ಮೈಮೇಲೆ ಬಿದ್ದಿದೆ. ಕೂಡಲೇ ಎಚ್ಚೆತ್ತ ಪ್ರಯಾಣಿಕ ವಿಮಾನ ಸಿಬ್ಬಂದಿಗೆ ದೂರು ನೀಡಿದ್ದಾರೆ. ಕೂಡಲೇ ವಿದ್ಯಾರ್ಥಿ ಸಹ ಪ್ರಯಾಣಿಕರಲ್ಲಿ ಕ್ಷಮೆ ಯಾಚಿಸಿದ್ದಾನೆ. ಇದರಿಂದಾಗಿ ಸಂತ್ರಸ್ತ ಪ್ರಯಾಣಿಕ ಪೊಲೀಸರಿಗೆ ದೂರು ನೀಡಲು ಮುಂದಾಗಿಲ್ಲ. ಆತನ ವೃತ್ತಿಜೀವನಕ್ಕೆ ತೊಡಕಾಗಬಹುದೆಂದು ಸುಮ್ಮನಾಗಿದ್ದಾರೆ. ಆದರೆ, ವಿಮಾನಯಾನ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಐಜಿಐ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ಗೆ ವರದಿ ನೀಡಿದೆ.
    ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸಿಐಎಸ್‌ಎಫ್‌ನೊಂದಿಗೆ ಏರ್‌ಲೈನ್ಸ್‌ನ ಭದ್ರತಾ ತಂಡವು ಸ್ಥಳಕ್ಕೆ ಆಗಮಿಸಿ, ಆರೋಪಿ ವಿಮಾನದಿಂದ ಇಳಿದ ತಕ್ಷಣ ಬಂಧಿಸಿದೆ. ಪೊಲೀಸರೂ ಸಹ ಸಂಬಂಧಪಟ್ಟ ವ್ಯಕ್ತಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ” ಎಂದು ವಿಮಾನ ನಿಲ್ದಾಣದ ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಿವೆ.
    ನಾಗರಿಕ ವಿಮಾನಯಾನ ನಿಯಮಗಳ ಪ್ರಕಾರ ಪ್ರಯಾಣಿಕರು ಅಶಿಸ್ತಿನ ವರ್ತನೆಗೆ ತೋರಿರುವುದು ಕಂಡುಬಂದರೆ ಅವರ ವಿರುದ್ಧ ಕ್ರಿಮಿನಲ್ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳುವುದರ ಜೊತೆಗೆ ನಿರ್ದಿಷ್ಟ ಅವಧಿಗೆ ವಿಮಾನಯಾನ ಮಾಡುವುದನ್ನು ಕೂಡ ನಿಷೇಧಿಸಲಾಗುತ್ತದೆ.
    ಕಳೆದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿಯೂ ಸಹ ಇಂತಹದ್ದೇ ಘಟನೆ ನಡೆದಿತ್ತು. ಶಂಕರ್ ಮಿಶ್ರಾ ಎಂಬಾತ ಕುಡಿದ ಅಮಲಿನಲ್ಲಿ ವೃದ್ಧೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಸುಮಾರು ಒಂದು ತಿಂಗಳ ನಂತರ ಬೆಳಕಿಗೆ ಬಂದಿತ್ತು. ಬಳಿಕ ಈ ಕುರಿತು ಎಫ್‌ಐಆರ್ ದಾಖಲಿಸಿ, ಮಿಶ್ರಾನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಆರೋಪಿಯು ಸುಮಾರು ಒಂದು ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
    ಅಷ್ಟೇ ಅಲ್ಲದೇ, ಘಟನೆ ನಡೆದ 12 ಗಂಟೆಯೊಳಗೆ ನಿಯಮಾನುಸಾರ ವರದಿ ನೀಡದ ಏರ್ ಇಂಡಿಯಾಕ್ಕೆ ಡಿಜಿಸಿಎ 30 ಲಕ್ಷ ರೂ ದಂಡ ವಿಧಿಸಿತ್ತು. ದೆಹಲಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗಲೇ ಮಿಶ್ರಾಗೆ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿ ಆದೇಶ ಹೊರಡಿಸಿದ್ದರು.

    ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email
    Previous Articleಪ್ರವೀಣ್ ನೆಟ್ಟಾರು‌ ಹಂತಕ ಬೆಂಗಳೂರಲ್ಲಿ ಸೆರೆಸಿಕ್ಕ
    Next Article March 9ಕ್ಕೆ ಕರ್ನಾಟಕ ಬಂದ್ #bundh
    vartha chakra
    • Website

    Related Posts

    ರಾಹುಲ್ ಗಾಂಧಿ Disqualified

    ಮಾರ್ಚ್ 24, 2023

    Royal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್

    ಮಾರ್ಚ್ 11, 2023

    Oyo ಸಂಸ್ಥಾಪಕನ ತಂದೆ ಅನುಮಾನಾಸ್ಪದ ಸಾವು #oyo #startup

    ಮಾರ್ಚ್ 10, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe