Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ
    ರಾಜ್ಯ

    ಕಬ್ಬಿನ ಬೆಲೆ ನಿರ್ಧಾರದ ಅಧಿಕಾರ CMಗೆ

    vartha chakraBy vartha chakraಅಕ್ಟೋಬರ್ 15, 2022Updated:ಅಕ್ಟೋಬರ್ 15, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಪ್ರಸಕ್ತ ಹಂಗಾಮಿಗೆ ಕಬ್ಬಿನ ದರ ನಿಗದಿ ಸಂಬಂಧ ರಾಜ್ಯ ಸರ್ಕಾರ ಕರೆಯಲಾಗಿದ್ದ ಕಬ್ಬು ಬೆಳೆಗಾರರ ಪ್ರತಿನಿಧಿಗಳು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಒಮ್ಮತಕ್ಕೆ ಬರಲು ವಿಫಲವಾಗಿದ್ದು ಅಂತಿಮ ನಿರ್ಧಾರದ ಜವಾಬ್ದಾರಿ ಮುಖ್ಯಮಂತ್ರಿ ಹೆಗಲೇರಿದೆ.
    ಕಬ್ಬು ದರ ನಿಗದಿ ಸಂಬಂಧಿಸಿದಂತೆ ಸಕ್ಕರೆ ಸಚಿವ ಶಂಕರ ಪಾಟೀಲ ಮುನ್ನೇನಕೊಪ್ಪ ಸಭೆ ನಡೆಸಿದರು ಇದರಲ್ಲಿ ರೈತರು ಪ್ರತಿ ಟನ್ ಕಬ್ಬಿಗೆ ₹5,500 ದರ ನಿಗದಿಪಡಿಸಬೇಕು. ಕಟಾವು ಮತ್ತು ಸಾಗಣೆ ವೆಚ್ಚವನ್ನು ರೈತರಿಗೆ ಹೊರೆಯಾಗದಂತೆ ನಿದಿ ಮಾಡಬೇಕು ಎಂದು ಪಟ್ಟು ಹಿಡಿದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3,500ಕ್ಕಿಂತ ಹೆಚ್ಚು ದರ ನೀಡುವುದು ಅಸಾಧ್ಯ ಎಂದರು.
    ಸಕ್ಕರೆ ಕಾರ್ಖಾನೆಯ ಮಾಲೀಕರ ಪ್ರತಿನಿಧಿ ಹೇಳಿಕೆಗೆ ರೈತ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
    ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆಸಿದ ಸಚಿವರು, ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳ ಅಭಿಪ್ರಾಯ ಆಲಿಸಿ,ಒಮ್ಮತ ಮೂಡಿಸುವ ಪ್ರಯತ್ನ ನಡೆಸಿದರೂ ಸಾಧ್ಯವಾಗಲಿಲ್ಲ ‌.
    ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ‘ಶನಿವಾರದ ಸಭೆಯ ವಿವರಗಳನ್ನು ಮುಖ್ಯಮಂತ್ರಿಯವರಿಗೆ ನೀಡಲಾಗುವುದು. ಅವರ ನೇತೃತ್ವದಲ್ಲಿ ಸಭೆ ನಡೆಸಿ ದರ ನಿಗದಿಪಡಿಸಲಾಗುವುದು’ ಎಂದರು.
    ಕೋಡಿಹಳ್ಳಿ ಫೈಟ್:
    ಇದಕ್ಕೂ ಮುನ್ನ ಸಭೆಯಲ್ಲಿ ರೈತ‌ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗವಹಿಸಿರುವುದಕ್ಕೆ ರೈತ ಸಂಘದ ಮತ್ತೊಂದು ಬಣ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕೆಲಕಾಲ‌ ಗದ್ದಲ‌ ನಡೆಯಿತು.
    ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗುರುತರವಾದ ಆರೋಪಗಳಿವೆ. ಅವರಿಂದಾಗಿ ರೈತ ಮುಖಂಡರನ್ನು ಅನುಮಾನದಿಂದ ನೋಡುವ ಸನ್ನಿವೇಶ ನಿರ್ಮಾಣವಾಗಿದೆ. ಆದ್ದರಿಂದ ಅವರನ್ನು ಹೊರಗಿಟ್ಟು ಸಭೆ ನಡೆಸಬೇಕು. ಇಲ್ಲವಾದರೆ ನಾವು ಸಭೆಯಿಂದ ಹೊರ ಹೋಗುತ್ತೇವೆ’ ಎಂದರು.
    ಗುರುತರ ಆರೋಪ ಎದುರಿಸುತ್ತಿರುವವರು, ಕ್ರಿಮಿನಲ್ ಪ್ರಕರಣ ಹೊಂದಿರುವವರನ್ನೂ ಸಭೆಗೆ ಆಹ್ವಾನಿಸಲಾಗಿದೆ. ಇದು ಸರಿಯಲ್ಲ’ ಎಂದು ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಹೇಳಿದರು.
    ತಮ್ಮ ವಿರುದ್ಧದ ಆರೋಪಕ್ಕೆ ಉತ್ತರಿಸಿದ ಚಂದ್ರಶೇಖರ್, ‘ವೈಯಕ್ತಿಕವಾದ ಆರೋಪಗಳನ್ನು ಸಭೆಯಲ್ಲಿ ಬಳಸಬೇಡಿ. ನನ್ನ ವಿರುದ್ಧದ ಆರೋಪಗಳು ಸಾಬೀತಾದರೆ ಶಿಕ್ಷೆ ಅನುಭವಿಸಲು ಸಿದ್ಧ ಎಂದು ಮುಖ್ಯಮಂತ್ರಿಯವರಿಗೆ ಈಗಾಗಲೇ ಪತ್ರ ನೀಡಿದ್ದೇನೆ. ವೈಯಕ್ತಿಕ ಆರೋಪ ಎಳೆದು ತಂದು ಸಭೆಗೆ ಅಡ್ಡಿಪಡಿಸಬಾರದು’ ಎಂದರು.
    ಚಂದ್ರಶೇಖರ್ ಬೆಂಬಲಿಗರು ಇನ್ನೊಂದು ಗುಂಪಿನ‌ ವಿರುದ್ಧ ವಾಗ್ದಾಳಿ ಆರಂಭಿಸಿತು. ಮತ್ತೊಂದು ಗುಂಪು ಕೂಡ ವಾಕ್ಸಮರ ನಡೆಸಿತು.
    ಸಭೆಯನ್ನು ನಡೆಸಲು ಅವಕಾಶ ನೀಡುವಂತೆ ಸಚಿವರು ಪದೇ ಪದೇ ಮನವಿ ಮಾಡಿದರು.
    ಈ ವೇಳೆ ಮಧ್ಯ ಪ್ರವೇಶಿಸಿದ ರೈತ ನಾಯಕಿ ಸುನಂದಾ ಜಯರಾಂ, ‘ಕಬ್ಬಿನ ದರ ನಿಗದಿ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಸಭೆಯ ಪ್ರಮುಖ ಕಾರ್ಯಸೂಚಿ‌. ಆ ಕುರಿತು ಮೊದಲು ಚರ್ಚೆ ನಡೆಯಲಿ. ಉಳಿದ ವಿಷಯವನ್ನು ರೈತ ಸಂಘದ ಮುಖಂಡರು ಸೇರಿ ಚರ್ಚಿಸೋಣ’ ಎಂದು ಹೇಳಿದರು.ಸುನಂದಾ ಅವರ ಮಾತನ್ನು ಸಭೆಯಲ್ಲಿದ್ದ ಎಲ್ಲರೂ ಒಪ್ಪಿಕೊಂಡರು. ನಂತರ ಸಭೆ ಮುಂದುವರಿಯಿತು

    m
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಹೈಕೋರ್ಟ್ ಗೆ ಹೊಸ CJ
    Next Article ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ
    vartha chakra
    • Website

    Related Posts

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !

    ಜೂನ್ 5, 2025

    ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?

    ಜೂನ್ 3, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aoc1m ರಲ್ಲಿ ಯದುವೀರ್ ಅವಿರೋಧವಾಗಿ ಆಯ್ಕೆಯಾಗಬೇಕಂತೆ | Yaduveer
    • AlbertDuabe ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • beudj ರಲ್ಲಿ BBC ಕಚೇರಿ ಮೇಲೆ IT ದಾಳಿ!
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe