ಬೆಂಗಳೂರು, ಫೆ.2: ಈ ದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವು ಕೇಳಿ ಬಂದಿದೆ.
ಒಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದರೆ ಈಗಿನ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ಬಿ ಶಿವರಾಂ ಕಮಿಷನ್ ಆರೋಪ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಕಮಿಷನ್ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಮುಖ್ಯಮಂತ್ರಿ ಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ಶಿವರಾಂ ಅವರ ಈ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಂ ಅವರ ಈ ಹೇಳಿಕೆಯ ಬೆನ್ನಲ್ಲೇ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರೆ ಮಾಜಿ ಸಚಿವ ಶಿವರಾಂ ಅವರಿಗೆ ಪ್ರದೇಶ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಇದರ ನಡುವೆಯೂ ತಮ್ಮ ಹೇಳಿಕೆ ಸಮರ್ಥಿಸಿರುವ ಶಿವರಾಂ ಅವರು ಕೆಪಿಸಿಸಿ ಅಧ್ಯಕ್ಷರು ತಮಗೆ ಎಚ್ಚರಿಕೆ ನೀಡಿದ್ದಾರೆ.ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಶಿವರಾಂ ಅವರು ‘ಹಾಸನ ಜಿಲ್ಲಾ ಪಂಚಾಯಿತಿಗೆ ₹ 13 ಕೋಟಿ ಅನುದಾನ ಬಂದಿದ್ದು, ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಆ ಅನುದಾನವು ಉಸ್ತುವಾರಿ ಸಚಿವರ ವಿವೇಚನಾಧಿಕಾರದ ಕೋಟಾ ಅಂತೆ. ಕೇವಲ 50 ಸಾವಿರ ಜನಸಂಖ್ಯೆಯುಳ್ಳ ಸಚಿವರ ಸಮುದಾಯಕ್ಕೆ ₹ 2.5 ಕೋಟಿ ಅನುದಾನ ನೀಡಿದ್ದು, 4 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಪರಿಶಿಷ್ಟ ಸಮುದಾಯಕ್ಕೆ ₹ 1 ಅನುದಾನವನ್ನು ಕೊಟ್ಟಿಲ್ಲ. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ₹ 3 ಕೋಟಿ ಅನುದಾನ ಕೊಟ್ಟಿದ್ದಾರೆ’ ಎಂದು ದೂರಿದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಕಮಿಷನ್ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದು, ಏನೇ ಇದ್ದರೂ ಪಕ್ಷದ ಒಳಗೆ ಮಾತನಾಡಬೇಕು. ಹೀಗೆ ಹೊರಗೆ ಮಾಧ್ಯಮದ ಮುಂದೆ ಹೋಗಿ ಮಾತನಾಡಿದರೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬೇಕಾದೀತು. ನಾನು ಈ ಬಗ್ಗೆ ಶಿವರಾಂಗೆ ವಾರ್ನ್ ಮಾಡುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.
ಭ್ರಷ್ಟಾಚಾರ ಬೆಳಕಿಗೆ:
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಹೇಳಿದ್ದಾರೆ
ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪವನ್ನು ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಬಿ. ಶಿವರಾಂ ಅವರು ಮಾಧ್ಯಮಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದು ಟೀಕಿಸಿದ್ದಾರೆ ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ (ATM) ಮಾದರಿ ಕಮಿಷನ್ ಕೌಂಟರ್ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.


6 ಪ್ರತಿಕ್ರಿಯೆಗಳು
mgm poker download betmgm NV online mgm casino
Experience the ultimate candy adventure in Sweet Bonanza, where wins pay anywhere on the grid! Bomb sweet bonanza multipliers multipliers can turn small bets into life-changing hauls. Join the fun right now!
Fuel your fortune with prairie thunder and lightning spins. bull and games unleashes free games with rising multipliers and huge buffalo jackpots. Get in the game!
Ready for non-stop slot action? Chumba Casino gives you free chumba casino free play to begin your winning journey. Real cash prizes are just spins away!
Fastest growing. Most trusted. stake plinko Best rewards. Stake.
Unlock non-stop thrills at DraftKings online gambling Casino! Bet $5 to grab 500 free spins on Cash Eruption and enjoy up to $1,000 lossback protection in your first 24 hours. From classic blackjack to explosive slots—your next big win starts here.