Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಆಡಳಿತದಲ್ಲಿ ಏನೆಲ್ಲಾ ಕಷ್ಟ | Modi
    ರಾಜಕೀಯ

    ಮೋದಿ ಆಡಳಿತದಲ್ಲಿ ಏನೆಲ್ಲಾ ಕಷ್ಟ | Modi

    vartha chakraBy vartha chakraಏಪ್ರಿಲ್ 24, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.24: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಮಾತ್ರವಲ್ಲ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದೆ. ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
    ಪಕ್ಷದ ಕಚೇರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಶ್ವಕರ್ಮ ಸಮುದಾಯದ ಪ್ರಮುಖ ನಾಯಕ ಕೆ.ಪಿ.ನಂಜುಂಡಿ ಹಾಗೂ ಇತರೆ ನಾಯಕರನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 2014 ರಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 2800 ರೂ.ಗಳಿತ್ತು. ಈಗ 7,500 ರೂ. ಗಳಾಗಿವೆ. ಕನಿಷ್ಟ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದೆ ಬಡವರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.

    ವಿಶ್ವಕರ್ಮ ಸಮುದಾಯದ ನಾಯಕ ನಂಜುಂಡಿಯವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಕುರಿತು ತಮ್ಮಲ್ಲಿ ಹೇಳಿಕೊಂಡಿದ್ದು, ನಮ್ಮ ಸಮುದಾಯಕ್ಕೆ ಮಾಂಗಲ್ಯ, ಮಾಂಗಲ್ಯ ಸರ ಮಾಡಿಕೊಡುವ ಅವಕಾಶವನ್ನು ದೇವರು ಕೊಟ್ಟಿದ್ದಾರೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಮಾಂಗಲ್ಯ ಸರ ಮಾಡಿಸಿಕೊಳ್ಳಲಾಗದೆ ಸಂಕಟ ಪಡುತ್ತಿರುವ ತಾಯಂದಿರ ಗೋಳು ನೋಡಲಾಗುತ್ತಿಲ್ಲ. ಈ ವಿಷಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದ ತಾವು ಪಕ್ಷದಲ್ಲಿ ಉಳಿಯಬಾರದು ಎಂದು ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರು.

    ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳಿಂದ ತಿಂಗಳಿಗೆ 2 ಸಾವಿರ ರೂ. ಉಳಿತಾಯವಾಗುತ್ತಿದೆ. ಈಗ ತಾಯಂದಿರು ಸಣ್ಣಪುಟ್ಟ ಒಡವೆ ಖರೀದಿಗಳಿಗೆ ಮುಂದಾಗುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇಂತಹ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲಿಲ್ಲ ಎಂದು ಕೆ.ಪಿ.ನಂಜುಂಡಿ ಹೇಳಿದ್ದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು ನಂಜುಂಡಿ ಅವರು ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಹಿಂದುಳಿದ ವರ್ಗದಲ್ಲಿ ಅತ್ಯಂತ ಉತ್ತಮ ಸಂಘಟಕರಾಗಿದ್ದಾರೆ. ಅವರನ್ನು ಕಾಂಗ್ರೆಸ್‍ಗೆ ಮರಳಿ ಕರೆತರಬೇಕೆಂಬುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಒತ್ತಾಸೆಯಾಗಿತ್ತು. ಹೈಕಮಾಂಡ್‍ನ ಸೂಚನೆ ಮೇರೆಗೆ ತಾವು ಆರಂಭದಿಂದಲೂ ನಂಜುಂಡಿ ಅವರನ್ನು ಕಾಂಗ್ರೆಸ್‍ಗೆ ಬರುವಂತೆ ಆಹ್ವಾನ ನೀಡಿದ್ದಾಗಿ ಹೇಳಿದರು.

    m modi ಕಾಂಗ್ರೆಸ್ ಚಿನ್ನ ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha
    Next Article ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • promokxsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • promogmsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • JeremyPah ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe