Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK Shivakumar ಯಶಸ್ಸಿನ ಹಿಂದೆ ಇರುವ ಮಹಿಳೆ | DK Shivakumar
    ಚುನಾವಣೆ 2024

    DK Shivakumar ಯಶಸ್ಸಿನ ಹಿಂದೆ ಇರುವ ಮಹಿಳೆ | DK Shivakumar

    vartha chakraBy vartha chakraಏಪ್ರಿಲ್ 25, 2023Updated:ಏಪ್ರಿಲ್ 26, 202326 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾರೆ ಎನ್ನುವುದು ನಾಣ್ನುಡಿ. ಇದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಅವರ ಪಾಲಿಗಂತೂ ಅಕ್ಷರಶಃ ನಿಜವಾಗಿದೆ.
    ಶಿವಕುಮಾರ್ ಅವರ ಪ್ರತಿಯೊಂದೂ ಯಶಸ್ಸಿನ ಹಿಂದೆ ಅವರ ಪತ್ನಿ ಉಷಾ ಶಿವಕುಮಾರ್ ಅವರ ಛಾಯೆ ಎದ್ದು ಕಾಣುತ್ತಿದೆ. ಎಲ್ಲಿಯೂ ಅಷ್ಟೊಂದು ಬಹಿರಂಗವಾಗಿ ಕಾಣಿಸಿಕೊಳ್ಳದ ಶ್ರೀಮತಿ ಉಷಾ ಶಿವಕುಮಾರ್ ಅವರು ತಮ್ಮ ಪತಿ ವ್ಯವಹಾರಿಕವಾಗಿರಲಿ ರಾಜಕೀಯವಾಗಿರಲಿ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರದ ಹಿಂದೆ ಅವರ ಸಮಯೋಚಿತ ಸಲಹೆ ಸೂಚನೆ ಇದ್ದೇ ಇರುತ್ತದೆ ಎನ್ನುವುದು ಈ ಕುಟುಂಬವನ್ನು ಅತ್ಯಂತ ಹತ್ತಿರದಿಂದ ಬಲ್ಲವರ ಮಾತು.

    DK Shivakumar
    ಈ ಮಾತಿಗೆ ಪೂರಕವೆಂಬಂತೆ ಇದೀಗ ಶ್ರೀಮತಿ ಉಷಾ ಶಿವಕುಮಾರ್ ಅವರು ತಮ್ಮ ಪತಿಯ ಯಶಸ್ಸಿಗಾಗಿ ಬೀದಿಗಿಳಿದಿದ್ದಾರೆ.
    ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ (DK Shivakumar), ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಮೂಲಕ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರಲು ಪಣತೊಟ್ಟು ಹಗಲಿರುಳು ಶ್ರಮಿಸುತ್ತಿದ್ದಾರೆ.
    ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇಡೀ ರಾಜ್ಯವನ್ನು ಸುತ್ತುತ್ತಿರುವ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಭರಾಟೆಯ ಪ್ರಚಾರದಲ್ಲಿ ತೊಡಗಿದ್ದಾರೆ.
    ತಮ್ಮ ಸ್ವಕ್ಷೇತ್ರ ಕನಕಪುರದಲ್ಲಿ ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶನ ನಡೆಸಿ ಹೊರಬಂದ ಅವರು ಇಲ್ಲಿಯವರೆಗೆ ಕನಕಪುರ ಕಡೆ ತಲೆ ಹಾಕಿಲ್ಲ. ಕ್ಷೇತ್ರದ ಮತದಾರರು ತಮ್ಮ ಕೈ ಬಿಡುವುದಿಲ್ಲ ಎಂಬ ಅದಮ್ಯ ವಿಶ್ವಾಸ ಅವರದ್ದು.

    ಆದರೆ, ಬಿಜೆಪಿಯ ಒಳಸುಳಿಗಳು ಆಂತರಿಕ ಲೆಕ್ಕಾಚಾರ, ಕಾರ್ಯತಂತ್ರಗಳೇ ಬೇರೆ ಎಂಬುದನ್ನು ಬಲ್ಲ ಶ್ರೀಮತಿ ಉಷಾ ಶಿವಕುಮಾರ್ ಇದೀಗ ನಮ್ಮ ಪತಿಯ ಪರವಾಗಿ ಅಖಾಡಕ್ಕೆ ಧುಮುಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಶಿವಕುಮಾರ್ ಬೆಂಬಲಿಗರು, ಹಿತೈಷಿಗಳೊಂದಿಗೆ ತಮ್ಮ ಪತಿಯ ಪರವಾಗಿ ಕನಕಪುರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. (DK Shivakumar)
    ಕನಕಪುರ ನಗರದ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿದ ಶ್ರೀಮತಿ ಉಷಾ ಶಿವಕುಮಾರ್ ಅವರಿಗೆ ಕ್ಷೇತ್ರದ ಮಹಿಳೆಯರು ಆರತಿ ಎತ್ತಿ ಸ್ವಾಗತ ಕೋರಿದರು. ಕೆಲವರಂತೂ ತಮ್ಮ ಮನೆಗೆ ಮಗಳೇ ಬಂದಿದ್ದಾಳೆನೋ ಎಂಬಂತೆ ಸಂಭ್ರಮಿಸಿ ಸ್ವಾಗತ ಕೋರಿದರು.
    ಹೀಗಾಗಿ ಇದೀಗ ಇಡೀ ಕ್ಷೇತ್ರದಲ್ಲಿ ಶ್ರೀಮತಿ ಉಷಾ ಶಿವಕುಮಾರ್ ಅವರದೇ ಹವಾ..

     

    Also read

    ಮತ್ತೊಂದು ಚಿರತೆಯ ಸಾವು | Cheetah | Kuno National Park

    art cheetah DK. Shivakumar m shiva Varthachakra ಕಾಂಗ್ರೆಸ್ ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೊಂದು ಚಿರತೆಯ ಸಾವು | Cheetah | Kuno National Park
    Next Article ಅತ್ಯುನ್ನತ ಹುದ್ದೆಗೇರಿದ ಕನ್ನಡಿಗ | Kempareddy Govindaraju
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe