Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro
    ಅಪರಾಧ

    Metro ಪಿಲ್ಲರ್ ದುರಂತಕ್ಕೆ ಕಾರಣ ಇವರಂತೆ | Bangalore Metro

    vartha chakraBy vartha chakraಸೆಪ್ಟೆಂಬರ್ 7, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.7 – ಕಳೆದ ಜನವರಿ 10ರಂದು ಎಚ್ಆರ್ ಬಿಆರ್. ಲೇಔಟ್ ನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ (Metro) ಪಿಲ್ಲರ್ ಚೌಕಟ್ಟು ಕುಸಿದು ತಾಯಿ- ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಮೆಟ್ರೊ ಯೋಜನೆಯ ಕಾಮಗಾರಿ ನಿರ್ವಹಿಸುತ್ತಿರುವ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣವಾಗಿದ್ದಾರೆ.!
    ಮೆಟ್ರೋ ಅಪಘಾತದ ಕುರಿತು ವಿಚಾರಣೆ ನಡೆಸಿದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಆಗಸ್ಟ್ ಮೊದಲ ವಾರದಲ್ಲಿ ಸಲ್ಲಿಸಿದ ವರದಿಯಲ್ಲಿ ನಾಗಾರ್ಜುನ ಕನ್‌ಸ್ಟ್ರಕ್ಷನ್ ಕಂಪನಿ (ಎನ್‌ಸಿಸಿ) ನೌಕರರು ಕಾರಣರಾಗಿರುವುದನ್ನು ಉಲ್ಲೇಖಿಸಲಾಗಿದೆ.

    ವರದಿ ಸಲ್ಲಿಸಿದ ನಂತರ ಆರು ತಿಂಗಳ ಕಾಲ ಅಮಾನತುಗೊಂಡಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಅಧಿಕಾರಿಗಳನ್ನು ಮರುಸೇರ್ಪಡೆ ಮಾಡಲಾಗಿದೆ. ತಮ್ಮ ವರದಿಯಲ್ಲಿ, ಆಯುಕ್ತರು ಸುರಕ್ಷತಾ ಅಂಶಗಳ ಬಗ್ಗೆ ಬಿಎಂಆರ್ ಸಿಎಲ್ ಅನ್ನು ಎಳೆದು ತಂದಿದ್ದಾರೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಲು, ದೇಶಾದ್ಯಂತ ಮೆಟ್ರೋ ನೆಟ್ ವರ್ಕ್ ಗಳಿಗೆ ಸಲಹೆಯನ್ನು ನೀಡಲಾಗಿದೆ.
    ಘಟನೆಯಲ್ಲಿ ತಾಯಿ ತೇಜಸ್ವಿನಿ ಸುಲಾಖೆ ಹಾಗೂ ಮಗ ವಿಹಾನ್ ಸುಲಾಖೆ ಮೃತಪಟ್ಟರೆ, ತಂದೆ ಲೋಹಿತ್ ಕುಮಾರ್ ಸುಲಾಖೆ ಮತ್ತು ಮಗಳು ವಿಸ್ಮಿತಾ ಬದುಕುಳಿದರು. ಲೋಹಿತ್ ಅವರು ಜುಲೈನಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ತಮ್ಮ ಕುಟುಂಬ ಅನುಭವಿಸಿದ ನಷ್ಟಕ್ಕೆ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ.

    ಅಪಘಾತದ ನಂತರ, ಪ್ರಕರಣದ ತನಿಖೆ ಕೈಗೊಂಡಿದ್ದ ಗೋವಿಂದಪುರ ಪೊಲೀಸರು ಘಟನೆ ನಡೆದು ಐದು ತಿಂಗಳುಗಳ ಬಳಿಕ ಕನ್ಸ್ ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​​​ಸಿಎಲ್ ಇಂಜಿನಿಯರ್ಸ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ನ್ಯಾಯಾಲಯಕ್ಕೆ ಬರೋಬ್ಬರಿ 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
    ಅಪಘಾತ ಸಂಭವಿಸಿದ (ಕೆಆರ್ ಪುರಂ-ವಿಮಾನ ನಿಲ್ದಾಣ ಮಾರ್ಗದ ಪ್ಯಾಕೇಜ್ 1) ಜ್ಯೂನಿಯರ್ ಎಂಜಿನಿಯರ್ ಜೀವನ್ ಕುಮಾರ್ ಅವರನ್ನು ಸೇವೆಯಿಂದ ಬಿಎಂಆರ್‌ಸಿಎಲ್ ವಜಾಗೊಳಿಸಿದೆ ಮತ್ತು ಎನ್‌ಸಿಸಿಗೆ ದಂಡವಾಗಿ 10 ಲಕ್ಷ ರೂ.ವಿಧಿಸಿದೆ.
    ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಕಳೆದ ತಿಂಗಳು ಸಿಎಂಆರ್‌ಎಸ್ ತಪ್ಪಿತಸ್ಥರಲ್ಲ ಎಂದು ತಿಳಿಸಿದ ನಂತರ ಅವರನ್ನು ಮರುನೇಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬಿಎಂಆರ್‌ಸಿಎಲ್ (BMRCL) ಸುಖಾಲೆ ಕುಟುಂಬ ಸದಸ್ಯರಿಗೆ 20 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ ಮತ್ತು ಹಣವನ್ನು ಠೇವಣಿ ಮಾಡಲು ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಕೋರಿ ಹಲವು ಮನವಿ ಕಳುಹಿಸಿದೆ, ಆದರೆ ಅವರು ಇಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಮತ್ತೊಬ್ಬ ಉನ್ನತ ಅಧಿಕಾರಿ ತಿಳಿಸಿದ್ದಾರೆ, “ಕುಟುಂಬವು ಗುತ್ತಿಗೆದಾರರಿಂದ ಸುಮಾರು 1 ಕೋಟಿ ರೂಪಾಯಿಗಳ ವಿಮೆ ಪರಿಹಾರಕ್ಕೆ ಅರ್ಹವಾಗಿದೆ” ಎಂದು ಇನ್ನೊಬ್ಬ ಅಧಿಕಾರಿ ಹೇಳಿದ್ದಾರೆ.

    Bangalore bangalore metro bmrcl hbr layouit kalyan nagar m metro metro accident ಅಪಘಾತ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    Next Article ತಿಲಕ್ ನಗರ ಪೊಲೀಸರ ಗೋಳು ಕೇಳೋರು ಯಾರು? | Tilak Nagar
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JerryWax ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • promokodegPl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • rylonnie shtori na plastikovie okna s elektroprivodom_knSn ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe