ಬೆಂಗಳೂರು, ಸೆ.7 – ಕಳೆದ ಜನವರಿ 10ರಂದು ಎಚ್ಆರ್ ಬಿಆರ್. ಲೇಔಟ್ ನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ (Metro) ಪಿಲ್ಲರ್ ಚೌಕಟ್ಟು ಕುಸಿದು ತಾಯಿ- ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಮೆಟ್ರೊ ಯೋಜನೆಯ ಕಾಮಗಾರಿ ನಿರ್ವಹಿಸುತ್ತಿರುವ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ (ಎನ್ಸಿಸಿ) ನೌಕರರು ಕಾರಣವಾಗಿದ್ದಾರೆ.!
ಮೆಟ್ರೋ ಅಪಘಾತದ ಕುರಿತು ವಿಚಾರಣೆ ನಡೆಸಿದ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್ಎಸ್) ಆಗಸ್ಟ್ ಮೊದಲ ವಾರದಲ್ಲಿ ಸಲ್ಲಿಸಿದ ವರದಿಯಲ್ಲಿ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ (ಎನ್ಸಿಸಿ) ನೌಕರರು ಕಾರಣರಾಗಿರುವುದನ್ನು ಉಲ್ಲೇಖಿಸಲಾಗಿದೆ.
ವರದಿ ಸಲ್ಲಿಸಿದ ನಂತರ ಆರು ತಿಂಗಳ ಕಾಲ ಅಮಾನತುಗೊಂಡಿದ್ದ ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಅಧಿಕಾರಿಗಳನ್ನು ಮರುಸೇರ್ಪಡೆ ಮಾಡಲಾಗಿದೆ. ತಮ್ಮ ವರದಿಯಲ್ಲಿ, ಆಯುಕ್ತರು ಸುರಕ್ಷತಾ ಅಂಶಗಳ ಬಗ್ಗೆ ಬಿಎಂಆರ್ ಸಿಎಲ್ ಅನ್ನು ಎಳೆದು ತಂದಿದ್ದಾರೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಲು, ದೇಶಾದ್ಯಂತ ಮೆಟ್ರೋ ನೆಟ್ ವರ್ಕ್ ಗಳಿಗೆ ಸಲಹೆಯನ್ನು ನೀಡಲಾಗಿದೆ.
ಘಟನೆಯಲ್ಲಿ ತಾಯಿ ತೇಜಸ್ವಿನಿ ಸುಲಾಖೆ ಹಾಗೂ ಮಗ ವಿಹಾನ್ ಸುಲಾಖೆ ಮೃತಪಟ್ಟರೆ, ತಂದೆ ಲೋಹಿತ್ ಕುಮಾರ್ ಸುಲಾಖೆ ಮತ್ತು ಮಗಳು ವಿಸ್ಮಿತಾ ಬದುಕುಳಿದರು. ಲೋಹಿತ್ ಅವರು ಜುಲೈನಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ತಮ್ಮ ಕುಟುಂಬ ಅನುಭವಿಸಿದ ನಷ್ಟಕ್ಕೆ 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದಾರೆ.
ಅಪಘಾತದ ನಂತರ, ಪ್ರಕರಣದ ತನಿಖೆ ಕೈಗೊಂಡಿದ್ದ ಗೋವಿಂದಪುರ ಪೊಲೀಸರು ಘಟನೆ ನಡೆದು ಐದು ತಿಂಗಳುಗಳ ಬಳಿಕ ಕನ್ಸ್ ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್ಸಿಎಲ್ ಇಂಜಿನಿಯರ್ಸ್ ಸೇರಿದಂತೆ ಹನ್ನೊಂದು ಜನರ ವಿರುದ್ಧ ನ್ಯಾಯಾಲಯಕ್ಕೆ ಬರೋಬ್ಬರಿ 1,100 ಪುಟಗಳ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.
ಅಪಘಾತ ಸಂಭವಿಸಿದ (ಕೆಆರ್ ಪುರಂ-ವಿಮಾನ ನಿಲ್ದಾಣ ಮಾರ್ಗದ ಪ್ಯಾಕೇಜ್ 1) ಜ್ಯೂನಿಯರ್ ಎಂಜಿನಿಯರ್ ಜೀವನ್ ಕುಮಾರ್ ಅವರನ್ನು ಸೇವೆಯಿಂದ ಬಿಎಂಆರ್ಸಿಎಲ್ ವಜಾಗೊಳಿಸಿದೆ ಮತ್ತು ಎನ್ಸಿಸಿಗೆ ದಂಡವಾಗಿ 10 ಲಕ್ಷ ರೂ.ವಿಧಿಸಿದೆ.
ಉಪ ಮುಖ್ಯ ಎಂಜಿನಿಯರ್ ವೆಂಕಟೇಶ್ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ, ಸೆಕ್ಷನ್ ಎಂಜಿನಿಯರ್ ಜಾಫರ್ ಸಾದಿಕ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರನ್ನು ಕಳೆದ ತಿಂಗಳು ಸಿಎಂಆರ್ಎಸ್ ತಪ್ಪಿತಸ್ಥರಲ್ಲ ಎಂದು ತಿಳಿಸಿದ ನಂತರ ಅವರನ್ನು ಮರುನೇಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಂಆರ್ಸಿಎಲ್ (BMRCL) ಸುಖಾಲೆ ಕುಟುಂಬ ಸದಸ್ಯರಿಗೆ 20 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ ಮತ್ತು ಹಣವನ್ನು ಠೇವಣಿ ಮಾಡಲು ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಕೋರಿ ಹಲವು ಮನವಿ ಕಳುಹಿಸಿದೆ, ಆದರೆ ಅವರು ಇಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಮತ್ತೊಬ್ಬ ಉನ್ನತ ಅಧಿಕಾರಿ ತಿಳಿಸಿದ್ದಾರೆ, “ಕುಟುಂಬವು ಗುತ್ತಿಗೆದಾರರಿಂದ ಸುಮಾರು 1 ಕೋಟಿ ರೂಪಾಯಿಗಳ ವಿಮೆ ಪರಿಹಾರಕ್ಕೆ ಅರ್ಹವಾಗಿದೆ” ಎಂದು ಇನ್ನೊಬ್ಬ ಅಧಿಕಾರಿ ಹೇಳಿದ್ದಾರೆ.


1 ಟಿಪ್ಪಣಿ
Une pharmacie oГ№ professionnalisme rime avec humanitГ© – https://www.keskeces.com/pharmacie-de-garde/58470-magny-cours.html , La pharmacie qui vous Г©coute et vous propose les meilleures solutions .