Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    Viral

    ಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ

    vartha chakraBy vartha chakraಫೆಬ್ರವರಿ 25, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾರವಾರ, ಫೆ.25- ಕಳ್ಳರು ಏನನ್ನೂ ಬಿಡುವುದಿಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಅಂದಹಾಗೆ ಕಳ್ಳರು ಕದ್ದಿರುವ ಈ ವಸ್ತು ಕೋಟ್ಯಾಂತರ ರೂಪಾಯಿ ಮೌಲ್ಯ ಹೊಂದಿದೆ. ಆದರೆ ಇದನ್ನು ನಿರ್ದಿಷ್ಟ ಉದ್ದೇಶಕ್ಕೆ ಮಾತ್ರ ಬಳಸಬೇಕು. ಇಲ್ಲವಾದರೆ ಈ ವಸ್ತು ಹಳೆಯ ಕಬ್ಬಿಣಕ್ಕೆ ಸಮಾನ. ಹೀಗಾಗಿ ಮೌಲ್ಯ ಕೆಲವೇ ನೂರು ರೂಪಾಯಿ ಮಾತ್ರ.
    ಸಮುದ್ರದಲ್ಲಿ ಕಾಲದಿಂದ ಕಾಲಕ್ಕೆ ಬದಲಾಗುವ ಹವಾಗುಣದ ಮನ್ಸೂಚನೆ ನೀಡುತ್ತಿದ್ದ ಡೈರಕ್ಷನಲ್ ವೇವ್ ರೈಡರ್ ಬಾಯ್‌ನನ್ನು ಉತ್ತರ ಕನ್ನಡ ಜಿಲ್ಲೆಯ ಅರಬ್ಬಿ ಸಮುದ್ರದ ಕದಂಬ ನೌಕಾ ನೆಲೆ ಪ್ರದೇಶದಲ್ಲಿ ಇದನ್ನು ಅಳವಡಿಸಲಾಗಿತ್ತು.
    ಚಂಡಮಾರುತ, ಗಾಳಿಯ ಪ್ರಮಾಣ,ದಿಕ್ಕು ಹಾಗೂ ಮಳೆಯ ಮುನ್ಸೂಚನೆಯನ್ನು ವೇವ್ ರೈಡರ್ ಬಾಯ್‌ ನೀಡುತ್ತಿತ್ತು.
    ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಕೇಂದ್ರವು ಅಧ್ಯಯನ ದೃಷ್ಟಿಯಿಂದ ಕಾರವಾರದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಕಡಲ ಜೀವಶಾಸ್ತ್ರ ಅಧ್ಯಯನ ಕೇಂದ್ರಕ್ಕೆ ನೀಡಿತ್ತು.

    ವೇವ್ ರೈಡರ್‌ ಬಾಯ್‌ಗೆ ನೆದರ್‌ಲ್ಯಾಂಡ್‌ನ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ ಕೋಟಿ ಬೆಲೆಯ ವಸ್ತುಗಳನ್ನು ಅಳವಡಿಸಿ ಕಾರವಾರದ ಕದಂಬ ನೌಕಾ ನೆಲೆ ಇರುವ ಅರಬ್ಬಿ ಸಮುದ್ರ ಭಾಗದಲ್ಲಿ ಇದನ್ನು ಅಳವಡಿಸಲಾಗಿತ್ತು.ಇಂತಹ ಉಪಕರಣವನ್ನು ಇದೀಗ ಕಳ್ಳರು ಕದ್ದೊಯ್ದಿದ್ದಾರೆ.
    ಒಂದು ವೇಳೆ ಇದನ್ನು ಕದ್ದಿಲ್ಲ,ಗಾಳಿಯ ರಭಸಕ್ಕೆ ಸಂಪರ್ಕದ ಹಗ್ಗ ತುಂಡಾಗಿದೆ ಎಂದರೂ ಅದು ಸಾಧ್ಯವಿಲ್ಲ. ಯಾಕೆಂದರೆ ಹಗ್ಗ ತುಂಡಾಗಿದ್ದರೆ ಅದು ಮಂಗಳೂರಿನ ಭಾಗಕ್ಕೆ ತೇಲಿಹೋಗಬೇಕಿತ್ತು.
    ಆದರೆ ಜಿಪಿಎಸ್‌ನಲ್ಲಿ ಮಹಾರಾಷ್ಟ್ರದ ರತ್ನಗಿರಿ ಪ್ರದೇಶದ ಹೊರಭಾಗದ ಜಾಗವನ್ನು ತೋರಿಸಿದೆ. ಹೀಗಾಗಿ ಇದನ್ನು ಕದ್ದಿರುವ ಸಾಧ್ಯತೆಯನ್ನು ಇದರ ಉಸ್ತುವಾರಿ ಹೊತ್ತಿರುವ ಜಗನ್ನಾಥ್ ರಾಥೋಡ್ ತಿಳಿಸಿದ್ದಾರೆ.
    ಈಗಾಗಲೇ ನೌಕಾದಳ, ಕರಾವಳಿ ಕಾವಲುಪಡೆ ಹಾಗೂ ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು ರಿಲಯನ್ಸ್ ಫೌಂಡೇಶನ್‌ ಸಂಸ್ಥೆ ಸಹ ಇದರ ಹುಡುಕಾಟಕ್ಕೆ ಕೈ ಜೋಡಿಸಿದೆ.
    ವೇವ್ ರೈಡರ್ ಬಾಯ್‌ ಕೋಟಿಗಟ್ಟಲೇ ಬೆಲೆ ಬಾಳಿದರೂ ಯಾರ ಉಪಯೋಗಕ್ಕೂ ಬಾರದು. ಇದರ ಕಬ್ಬಿಣದ ವಸ್ತುವನ್ನು ಮಾರಾಟ ಮಾಡಬೇಕಷ್ಟೇ. ಕದಂಬ ನೌಕಾದಳ ಭಾಗದಲ್ಲಿ ಅಳವಡಿಸಿದ್ದರೂ ನೌಕಾದಳದ ಭದ್ರತೆ ನಡುವೆ ಕಳವಾಗಿದ್ದು ಹೇಗೆ ಎಂಬ ಗಂಭೀರ ಭದ್ರತಾ ಲೋಪದ ಪ್ರಶ್ನೆ ಎದ್ದಿದೆ.

    ಉಪಯೋಗ ಏನು:
    ಕಳೆದ ಹಲವು ವರ್ಷಗಳಿಂದ ಹವಾಮಾನ ವೈಪರೀತ್ಯ ಸೇರಿದಂತೆ ದೇಶದ ಕಡಲಿನಲ್ಲಾಗುವ ಬದಲಾವಣೆಯನ್ನು ತಕ್ಷಣ ಗುರುತಿಸಿ ಮಾಹಿತಿ ರವಾನೆ ಮಾಡಲು ಹವಾಮಾನ ಇಲಾಖೆಗೆ ಕಷ್ಟಸಾಧ್ಯವಾಗುತಿತ್ತು. ಇದರಿಂದ ಮಳೆ, ಸಮುದ್ರದಲ್ಲಿ ವೈಪರಿತ್ಯ ಆಗುವ ಮೊದಲೇ ನಿಖರವಾಗಿ ಮಾಹಿತಿ ನೀಡಲಾಗುತ್ತಿರಲಿಲ್ಲ. ಆದರೆ ಕೇಂದ್ರ ಸರ್ಕಾರ ದೇಶದ ಕರಾವಳಿ ಭಾಗದಲ್ಲಿ ಹೊಸ ತಂತ್ರಜ್ಞಾನ ಹೊಂದಿದ ಎಂಕೆ-4 ಮಾದರಿಯ ಡೈರಕ್ಷನಲ್ ವೇವ್ ರೈಡರ್ ಬಾಯ್ ಅನ್ನು ಕಾರವಾರದ ಅರಬ್ಬಿ ಸಮುದ್ರ ಸೇರಿದಂತೆ ದೇಶದ 5 ಭಾಗಗಳಲ್ಲಿ ಅಳವಡಿಸಿತ್ತು.
    ಈ ಮೂಲಕ ಕರ್ನಾಟಕ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಆಗುವ ಪ್ರತಿ ಬದಲಾವಣೆ, ಹವಾಮಾನ, ಮೀನುಗಳ ಸಾಂದ್ರತೆಯ ಮಾಹಿತಿಯನ್ನು ಇದು ನೀಡುತ್ತಿತ್ತು. ಇದೇ ಮೊದಲ ಬಾರಿಗೆ ಬ್ಯಾಟರಿ ಜೊತೆಗೆ ಸೋಲಾರ್ ಶಕ್ತಿ ಬಳಸಿಕೊಂಡು ಈ ಬಾಯ್ ಕಾರ್ಯ ನಿರ್ವಹಿಸುತ್ತಿತ್ತು.

    ಪ್ರತಿ ಕ್ಷಣದ ಮಾಹಿತಿ:
    ಇದರಿಂದಾಗಿ ಮೀನುಗಾರರಿಗೆ ಯಾವ ಪ್ರದೇಶದಲ್ಲಿ ಎಷ್ಟು ಮೀನುಗಳಿವೆ ಎಂಬುದನ್ನು 24 ಗಂಟೆಗೆ ಮೊದಲೇ ಮಾಹಿತಿ ನೀಡಿ ಮತ್ಸ್ಯ ಬೇಟೆಗೆ ಸಹಕಾರಿಯಾಗುತ್ತಿತ್ತು. ಜೊತೆ ಹವಾಮಾನ ವೈಪರಿತ್ಯದಿಂದ ಹಿಡಿದು ಸಮುದ್ರದಲ್ಲಿ ಆಗುವ ಬದಲಾವಣೆಯ ಪ್ರತಿ ಕ್ಷಣದ ಮಾಹಿತಿಯನ್ನ ಈ ಬಾಯ್ ನೀಡುತ್ತಿತ್ತು.
    ಹಿಂದಿನ ಬಾಯ್‌ಗಿಂತ ದ್ವಿಗುಣ ಮಟ್ಟದಲ್ಲಿ ಕಾರ್ಯಕ್ಷಮತೆಯನ್ನ ಹೊಂದಿದೆ. ಹವಾಮಾನ ವೈಪರಿತ್ಯ, ಅಲೆಗಳ ಎತ್ತರ, ಅಲೆಗಳ ದಿಕ್ಕು, ಅಲೆಗಳ ಮಾದರಿ, ಸಮುದ್ರ ಮೇಲ್ಮೈ ಉಷ್ಣತೆ ಅಳತೆ, ಸಮುದ್ರಭಾಗದಲ್ಲಿ ಮೀನುಗಳ ಸಾಂದ್ರತೆಗಳ ಮಾಹಿತಿ ನೀಡುತ್ತಿತ್ತು.

    ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    Next Article ಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_zuPi ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • kypit kyrsovyu_hnOn ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • kypit kyrsovyu_ikPi ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe