Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೀಗಾಯಿತು | Kumaraswamy
    Trending

    ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಹೀಗಾಯಿತು | Kumaraswamy

    vartha chakraBy vartha chakraನವೆಂಬರ್ 17, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.17- ದೀಪಾವಳಿ ಹಿನ್ನೆಲೆಯಲ್ಲಿ ತಮ್ಮ ಮನೆಯ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದದ್ದಕ್ಕೆ ಬೆಸ್ಕಾಂ ವಿಧಿಸಿದ್ದ 68,526 ರೂಪಾಯಿ ದಂಡವನ್ನು ಜೆಡಿಎಸ್‌ ನಾಯಕ ಕುಮಾರಸ್ವಾಮಿ (Kumaraswamy) ಪಾವತಿಸಿದ್ದಾರೆ.
    ದಂಡ ಪಾವತಿಯ ರಸೀದಿಗಳನ್ನು ಪ್ರದರ್ಶಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧದ ಕ್ರಮ. ಅನ್ಯಾಯ ಎಂದು ಹೇಳಿದರು. ದಂಡದ ಮೊತ್ತ ಲೆಕ್ಕ ಹಾಕಿದ ವಿಧಾನ ಹಾಗೂ ಎಫ್‌ಐಆರ್‌ನಲ್ಲಿರುವ ಲೋಪದೋಷಗಳ ಬಗ್ಗೆ ವಿವರಿಸಿದ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ, ನನ್ನನ್ನು ರಾಜಕೀಯವಾಗಿ ಬೇಟೆಯಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

    ಅನ್ಯಾಯ ಹಾಗೂ ಅತಿಯಾದ ದಂಡ ವಿಧಿಸಿದ್ದಕ್ಕಾಗಿ, ಓರ್ವ ಗ್ರಾಹಕನಾಗಿ ಇದರ ವಿರುದ್ಧ ಧ್ವನಿ ಎತ್ತುವುದು ನನ್ನ ಕರ್ತವ್ಯ.ಸಿಎಂ ಹಾಗೂ ಡಿಸಿಎಂ ನೇತೃತ್ವದ ಸರ್ಕಾರದಲ್ಲಿ ಅಧಿಕಾರದ ದುರುಪಯೋಗ ಆಗುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಕ್ಕಾಗಿ ನನ್ನ ವಿರುದ್ಧ ರಾಜಕೀಯ ಸಂಚು ನಡೆಸಲಾಗುತ್ತಿದೆ ಎಂದು ದೂರಿದರು.
    ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ.ಬಿಡದಿ ಬಳಿ ತಾವು ಖರೀದಿಸಿರುವ ಆಸ್ತಿ ಹಾಗೂ ಜಂತ್ಕಲ್ ಗಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆಯನ್ನು ಬೇಗ ಪೂರ್ಣಗೊಳಿಸಲಿ ಎಂದು ಸವಾಲು ಹಾಕಿದರು. ಬಿಡದಿ ಬಳಿ ಜಮೀನು ಖರೀದಿಸಿ 38 ವರ್ಷವಾಗಿದೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಕಾಲದಿಂದ ಇಲ್ಲಿಯವರೆಗೆ ಆಗಿರುವ ತನಿಖೆ ಬಗ್ಗೆ ಪುಸ್ತಕ ಬರೆಯಬಹುದು. ಲೋಕಾಯುಕ್ತ, ಸಿಐಡಿ ತನಿಖೆ ಎಲ್ಲವೂ ಆಗಿದೆ. ಇನ್ನೊಮ್ಮೆ ತನಿಖೆ ಮಾಡಿಸಿ ನನಗಿನ್ನೂ ಮೂರ್ನಾಲ್ಕು ಎಕರೆ ಜಮೀನು ಸಿಕ್ಕಿಲ್ಲ. ಅದನ್ನು ಹುಡುಕಿ ಕೊಡಲಿ ಎಂದು ಹೇಳಿದರು.

    ಮುಖ್ಯಮಂತ್ರಿ ಉಸ್ತುವಾರಿಯಲ್ಲೇ ಜಂತ್ಕಲ್ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ಜಂತ್ಕಲ್ ಪ್ರಕರಣ ಮುಗಿಸಲು ಮುಖ್ಯಮಂತ್ರಿಯಾಗಿದ್ದಾಗ ಒತ್ತಡವನ್ನೂ ಹೇರಿಲ್ಲ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿ ಮಾಲೀಕರಿಂದ 20 ಲಕ್ಷ ರೂ.ವನ್ನು ಪುತ್ರನ ಖಾತೆಗೆ ಪಡೆದುಕೊಂಡಿದ್ದ ಅಧಿಕಾರಿ ಜೈಲಿಗೆ ಹೋಗಿದ್ದಾರೆ. ಅದನ್ನು ನನ್ನ ತಲೆಗೆ ಕಟ್ಟಲು ಹುನ್ನಾರ ನಡೆಸಿದ್ದರು ಎಂದರು.
    ವಿರೋಧ ಪಕ್ಷದ ಸ್ಥಾನದಲ್ಲಿದ್ದು ಕಾನೂನು ಬಾಹಿರ ಕೃತ್ಯಗಳನ್ನು ಹೊರಗೆ ತರುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ಮಿನರ್ವ ಮಿಲ್‍ಗೆ ಸುಮಾರು 1934ರಲ್ಲಿ ಮಂಜೂರಾಗಿದ್ದ ಜಮೀನು 24 ಎಕರೆ ಕರಾಬ್ ಭೂಮಿಯಲ್ಲಿ ಲೂಲು ಮಾಲ್ ನಿರ್ಮಿಸಲಾಗಿದೆ. ಅಲ್ಲಿದ್ದ ಹೈಟೆನ್ಷನ್ ವೈರ್‍ಗಳನ್ನು ಅಂಡರ್‍ಗ್ರೌಂಡ್‍ನಲ್ಲಿ ತೆಗೆದುಕೊಂಡು ಹೋಗಲಾಗಿದೆ. ಇದಕ್ಕೆ ಕಂಪನಿಯಿಂದ ಹಣ ಕಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    Karnataka kumaraswamy m News Politics Trending ಕಾಂಗ್ರೆಸ್ ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Next Article ಭಜರಂಗದಳ ಕಾರ್ಯಕರ್ತರ ಗಡಿಪಾರಿಗೆ ನೋಟೀಸ್ | Bajrang Dal
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    1 ಟಿಪ್ಪಣಿ

    1. Omernm on ಫೆಬ್ರವರಿ 13, 2026 7:21 ಅಪರಾಹ್ನ

      betmgm NC betmgm HI betmgm South Dakota

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Hlbucm ರಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    • LinwoodGah ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.