ಬೆಂಗಳೂರು, ಮಾ.30-ಕರ್ನಾಟಕ ಲೋಕಾಸೇವಾ ಆಯೋಗ (ಕೆಪಿಎಸ್ಸಿ-KPSC)ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದ್ದು ಈ ಸಂಬಂಧ ಆಯೋಗದ ಅಧಿಕಾರಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿರುವ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
2016 ರಲ್ಲಿ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನ ಪ್ರಶ್ನಿಸಿ ಎಚ್.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಕೆಪಿಎಸ್ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಿಸಲಾಗಿದೆ.
ಬಳಿಕ ಕೆಪಿಎಸ್ಸಿ ಯ (KPSC) ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ ಹಿಂದಿರುಗಿಸುವಂತೆ ಕೆಪಿಎಸ್ಸಿ ಜ್ಞಾಪನ ಹೊರಡಿಸಿತ್ತು. ಬಳಿಕ ಕೆಪಿಎಸ್ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆದಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಶೋಧ ನಡೆಸಿದ್ದಾರೆ. ಆದರೆ ಕಡೆತ ಎಲ್ಲೂ ಸಿಕ್ಕಿಲ್ಲ. ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡಿದ್ದು ಕಡತ ನಾಪತ್ತೆ ಬಗ್ಗೆ ಕೆಪಿಎಸ್ಸಿ ಸಹಾಯಕ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
4 ಪ್ರತಿಕ್ರಿಯೆಗಳು
More text pieces like this would create the интернет better.
This is a theme which is forthcoming to my verve… Many thanks! Exactly where can I lay one’s hands on the phone details due to the fact that questions?
buy propranolol medication – order plavix 150mg online cheap where to buy methotrexate without a prescription
cheap generic amoxicillin – diovan 160mg usa order combivent 100 mcg online