Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನವರಿ 6ಕ್ಕೆ ಥಗ್ಸ್‌ ಆಫ್ ರಾಮಘಡ
    ಸಿನೆಮ

    ಜನವರಿ 6ಕ್ಕೆ ಥಗ್ಸ್‌ ಆಫ್ ರಾಮಘಡ

    vartha chakraBy vartha chakraಡಿಸೆಂಬರ್ 22, 2022Updated:ಡಿಸೆಂಬರ್ 22, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೊಸಬರ “ಥಗ್ಸ್‌ ಆಫ್ ರಾಮಘಡ’ ಚಿತ್ರವು‌ ಬರುವ ಜನವರಿ 6ರಂದು ತೆರೆಕಾಣುತ್ತಿದೆ.
    ಈಗಾಗಲೇ ಬಿಡುಗಡೆಯಾಗಿರುವ ಥಗ್ಸ್‌ ಆಫ್ ರಾಮಘಡ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
    ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್‌ ರಾಜ್‌, ಅಶ್ವಿ‌ನ್‌ ಹಾಸನ್‌, ಮಹಾಲಕ್ಷ್ಮೀ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸೂರ್ಯ ಕಿರಣ್‌, ಪ್ರಭು ಹೊಸದುರ್ಗ, ಟೈಗರ್‌ ಗಂಗ, ಜಗದೀಶ್‌, ರಾಘವೇಂದ್ರ, ವಿಶಾಲ್‌ ಪಾಟೀಲ್, ರವಿ ಸಾಲಿಯನ್‌, ಲೋಕೇಶ್‌ ಗೌಡ, ಭೀಷ್ಮ, ಸುಧೀನ್‌ ನಾಯರ್‌ ಸೇರಿದಂತೆ ಹಲವು ರಂಗಭೂಮಿ ಕಲಾವಿದರು ತಾರಾಬಳಗದಲ್ಲಿದ್ದಾರೆ.
    ಚಿತ್ರದ ಟ್ರೇಲರ್‌ಗೆ ನಟ ಧನಂಜಯ್‌ ಸಾಥ್‌ ನೀಡಿದ್ದಾರೆ.ಈ ಚಿತ್ರವನ್ನು ಕಾರ್ತಿಕ್‌ ಮಾರಲಭಾವಿ ನಿರ್ದೇಶನ ಮಾಡಿದ್ದಾರೆ.
    ಚಿತ್ರದ ಬಗ್ಗೆ ಮಾತನಾಡುವ ಅವರು, “ಚಿತ್ರಕ್ಕಾಗಿ ಒಂದೂವರೆ ವರ್ಷದಿಂದ ಇಡೀ ತಂಡ ಕಷ್ಟ ಪಟ್ಟಿದ್ದೀವಿ. ಸಿನಿಮಾ ಜನವರಿ 6ಕ್ಕೆ ಬಿಡುಗಡೆಯಾಗುತ್ತಿದೆ, ಟ್ರೇಲರ್‌ ನೋಡಿ ಯಾಕಿಷ್ಟು ವೈಲೆನ್ಸ್‌ ಅನ್ನೋರಿಗೆ ಸಿನಿಮಾ ನೋಡಿದ ಮೇಲೆ ವೈಲೆನ್ಸ್‌ ಯಾಕೆ ಎಂದು ಅರ್ಥವಾಗುತ್ತೆ. ನಾನು ಯಾದಗಿರಿಯ ಪುಟ್ಟ ಹಳ್ಳಿಯಿಂದ ಬಂದವನು. ಧನಂಜಯ್‌ ಅವರ ಜಯನಗರ 4ನೇ ಬ್ಲಾಕ್‌ ಕಿರುಚಿತ್ರ ನೋಡಿ ಸ್ಫೂರ್ತಿ ಪಡೆದು ಚಿತ್ರರಂಗಕ್ಕೆ ಬಂದೆ. ನಾನು ಕಿರುಚಿತ್ರ ನಿರ್ದೇಶನ ಮಾಡೋಕೆ ಆರಂಭಿಸಿದೆ. ಇದು ನನ್ನ ಮೊದಲ ನಿರ್ದೇಶನದ ಸಿನಿಮಾ. ಊರಿನಲ್ಲಿ ನಮ್ಮ ಹಿರಿಯರು ಹಿಂದೆ ನಡೆದ ಘಟನೆ ಬಗ್ಗೆ ಕಥೆ ಹೇಳುತ್ತಿದ್ದರು. ಆ ಘಟನೆ ಆಧಾರವಾಗಿಟ್ಟುಕೊಂಡು ಕಥೆ ಹೆಣೆದು ಅದಕ್ಕೊಂದಿಷ್ಟು ಸಿನಿಮೇಟಿಕ್‌ ಟಚ್‌ ಕೊಟ್ಟಿದ್ದೇನೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ.
    ಚಿತ್ರದಲ್ಲಿ ಚಂದನ್‌ ರಾಜ್‌ ನಾಯಕರಾಗಿ ನಟಿಸಿದ್ದಾರೆ. “ಈ ಚಿತ್ರದ ಹಿಂದೆ ಇಡೀ ಚಿತ್ರತಂಡದ ಪರಿಶ್ರಮವಿದೆ. ನೈಜ ಘಟನೆ ಆಧರಿಸಿದ ಸಿನಿಮಾವಿದು. ಹಾಗಾಗಿ, ವೈಲೆನ್ಸ್‌ ಇದೆ. ಜನವರಿ 6ಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದೆ ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ. ಸಿನಿಮಾ ಗೆದ್ದರೆ ನಮ್ಮೆಲ್ಲರ ಕನಸು ನನಸಾಗುತ್ತದೆ’ ಎನ್ನುವುದು ಅವರ ಮಾತು.
    ಇನ್ನೊಬ್ಬ ನಾಯಕ ನಟ ಅಶ್ವಿ‌ನ್‌ ಹಾಸನ್‌ ಮಾತನಾಡಿ ಲಾಕ್‌ಡೌನ್‌ ನಲ್ಲಿ ಕೇಳಿದ ಕಥೆ ಇದು. ಯಾವುದೇ ಸಿನಿಮಾವಿರಲಿ, ಪುಟ್ಟ ಪಾತ್ರವಿರಲಿ ದೊಡ್ಡದಿರಲಿ ಎಲ್ಲಾ ಪಾತ್ರಗಳನ್ನು ಇಲ್ಲಿವರೆಗೆ ಮಾಡಿಕೊಂಡು ಬಂದಿದ್ದೇನೆ. ಇದರಲ್ಲಿ ಲೀಡ್‌ರೋಲ್‌ ನಲ್ಲಿ ನಟಿಸಿದ್ದೇನೆ. ಸ್ಯಾಮ್ಯುಯಲ್‌ ಪಾತ್ರಕ್ಕೆ ಬಣ್ಣ ಹಚ್ಚಿದ್ದೇನೆ. ಲೀಡ್‌ರೋಲ್‌ ಅಷ್ಟು ಸುಲಭವಲ್ಲ. ನಿರ್ದೇಶಕರು ನನ್ನ ಮೇಲೆ ನಂಬಿಕೆ ಇಟ್ಟು ಪಾತ್ರ ನೀಡಿದ್ದಾರೆ ಅವರಿಗೆ ತೃಪ್ತಿ ಆಗೋ ಹಾಗೆ ನಟಿಸಿದ್ದೇನೆ. ಈ ಸಿನಿಮಾ ನಮ್ಮೆಲ್ಲರ ಕನಸು, ಗೆಲ್ಲಲೇಬೇಕು ಎಂದು ಚಿತ್ರವನ್ನು ಮಾಡಿದ್ದೀವಿ ಎಂದು ಭರವಸೆಯ ಮಾತುಗಳನ್ನಾಡುತ್ತಾರೆ.
    ಈ ಚಿತ್ರವನ್ನು ಭಾರತ್‌ ಟಾಕೀಸ್‌ನಡಿ ಜೈ ಕುಮಾರ್‌, ಕೀರ್ತಿ ರಾಜ್‌ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ರಾಜೇಶ್‌ ಕೃಷ್ಣನ್‌, ಶಶಾಂಕ್‌ ಶೇಷಗಿರಿ, ಅನುರಾಧ ಭಟ್‌ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್‌ ಸಂಕಲನ, ವಿವೇಕ್‌ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

    Verbattle
    Verbattle
    Verbattle
    ಚಂದನ್ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ಗೆ 5 ನಿಮಿಷಕ್ಕೆ 5 ಕೋಟಿ!
    Next Article ಛಲವಿದ್ದರೆ ಏನು ಬೇಕಾದರೂ ಮಾಡಬಹುದು-ದೀಪಕ್ ತಿಮ್ಮಯ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಫೆಬ್ರವರಿ 4, 2026

    ಶಬರಿಮಲೈ ಚಿನ್ನ ಕಳವಿನಲ್ಲಿ ಖ್ಯಾತ ನಟನ ನಂಟು..?

    ಫೆಬ್ರವರಿ 1, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Tracymix ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.