Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಷ್ಟೆಗಾಗಿ ರಸ್ತೆಯ ಮೇಲೆ ನಡೆದ ರಾದ್ಧಾಂತ
    ಅಪರಾಧ

    ಪ್ರತಿಷ್ಟೆಗಾಗಿ ರಸ್ತೆಯ ಮೇಲೆ ನಡೆದ ರಾದ್ಧಾಂತ

    vartha chakraBy vartha chakraಜನವರಿ 20, 2023Updated:ಜನವರಿ 21, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ಇದೊಂದು ಪ್ರತಿಷ್ಟೆಗಾಗಿ ನಡೆದ ಗಲಾಟೆ.ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಸಣ್ಣ ಅಪಘಾತ ಸಂಭವಿಸಿದೆ. ನಂತರ ನಡೆದ‌ ಕ್ಷುಲಕ ಕಾರಣದ ವಾಗ್ವಾದ ರಾದ್ಧಾಂತವಾಗಿ ಪರಿಣಮಿಸಿದೆ. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ಮುಖ್ಯರಸ್ತೆಯ ಜಂಕ್ಷನ್ ಬಳಿ ದರ್ಶನ್ ಎಂಬುವವರು ಚಲಾಯಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮತ್ತು ಶ್ವೇತಾ ಎಂಬವವರು ಚಲಾಯಿಸುತ್ತಿದ್ದ ಟಾಟಾ ನಿಕ್ಸಾನ್ ಕಾರಿನ ನಡುವೆ ಸಣ್ಣ ಅಪಘಾತ ಸಂಭವಿಸಿದೆ.
    ಈ‌ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ.ಇದರ ನಡುವೆ ಮಾತಿನ ಭರದಲ್ಲಿ ಶ್ವೇತಾರವರು ದರ್ಶನ್ ಗೆ ಮಧ್ಯ ಬೆರಳನ್ನು ತೋರಿಸಿ ಕೆಟ್ಟದಾಗಿ ವರ್ಣಿಸಿದ್ದಾರೆ . ಇದರಿಂದ ದರ್ಶನ್ ಕೋಪಗೊಂಡು ಶ್ವೇತಾರವರ ಕಾರ್ ಅನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಅಷ್ಟೇ ಅಲ್ಲ ತಮ್ಮ ಸ್ನೇಹಿತರಿಗೂ ಮಾಹಿತಿ ನೀಡಿ ಬರುವಂತೆ ಹೇಳಿದ್ದಾರೆ.
    ಶ್ವೇತಾ ಅವರ ಕಾರನ್ನು ಹಿಂಬಾಲಿಸಿಕೊಂಡು‌ ಬಂದ ದರ್ಶನ್‌ ಮಂಗಳೂರು ಪಿಯು ಕಾಲೇಜ್ ಬಳಿ ಕಾರನ್ನು ಅಡ್ಡಗಟ್ಟಿ ವಾಗ್ವಾದಕ್ಕಿಳಿದಿದ್ದಾರೆ. ಇದರಿಂದ ಕೋಪಗೊಂಡ ಶ್ವೇತಾರವರು ಕಾರನ್ನು ಮುಂದೆ ಚಲಾಯಿಸಲು ಹೋಗುತ್ತಿದ್ದಂತೆ ದರ್ಶನ್ ಆಕೆಯ ಕಾರಿನ ಬಾನೆಟ್ ಮೇಲೆ ಹತ್ತಿ ಕುಳಿತಿದ್ದಾರೆ.
    ಇದನ್ನು ಲೆಕ್ಕಿಸದ ಶ್ವೇತಾ ತಮ್ಮ ಕಾರನ್ನು ಚಲಾಯಿಸಿಕೊಂಡು ಮುಂದೆ ಹೋಗಿದ್ದಾರೆ. ಆ ಕಾರಿನ ಬಾನೆಟ್ ಮೇಲೆ ದರ್ಶನ್ ಕುಳಿತಿದ್ದು ಶ್ವೇತಾ ಸುಮಾರು ಒಂದು ಕಿಲೋಮೀಟರ್ ವರೆಗೂ ಚಲಾಯಿಸಿಕೊಂಡು ಹೋಗಿದ್ದಾರೆ. ಜೊತೆಗೆ ತಮ್ಮ ಪತಿಗೆ ಕರೆ ಮಾಡಿದ್ದಾರೆ.
    ಈ ವೇಳೆ ದರ್ಶನ್ ಸ್ನೇಹಿತರು ದ್ವಿಚಕ್ರ ವಾಹನಗಳಲ್ಲಿ ದೌಡಾಯಿಸಿ ಬಂದು ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.ಅಷ್ಟೇ ಅಲ್ಲ ಶ್ವೇತಾ ಅವರ ಕಾರಿನ ಗ್ಲಾಸುಗಳನ್ನೂ ಹೊಡೆದು ಹಾಕಿದ್ದಾರೆ‌‌.
    ಈ ವೇಳೆ ಶ್ವೇತಾ ಅವರ ಪತಿ ಪ್ರಮೋದ್ ಸ್ಥಳಕ್ಕೆ ಧಾವಿಸಿದ್ದು ಗಲಾಟೆ ಜೋರಾಗಿದೆ.ದರ್ಶನ್ ಸ್ನೇಹಿತರು ಪ್ರಮೋದ್ ಮೇಲೆ ಹಲ್ಲೆ ಮಾಡಿದ್ದಾರೆ.
    ರಸ್ತೆಯಲ್ಲಿ ನಡೆಯುತ್ತಿದ್ದ ಗಲಾಟೆಯ ಮಾಹಿತಿ ಪಡೆದು ಜ್ಞಾನ ಭಾರತಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಎರಡೂ ಕಡೆಯವರನ್ನು ಠಾಣೆಗೆ ಕರೆದುಕೊಂಡು ಬಂದು ದೂರು ದಾಖಲಿಸಿಕೊಂಡಿದ್ದಾರೆ. ಶ್ವೇತಾ ಅವರು ನೀಡಿದ ದೂರುನ್ನು ಆಧರಿಸಿ ದರ್ಶನ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಅದೇ ರೀತಿಯಲ್ಲಿ ದರ್ಶನ್ ನೀಡಿದ ದೂರನ್ನು ಆಧರಿಸಿ ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದಾರೆ ಒಟ್ಟಾರೆ ಈ ಪ್ರಕರಣ ಸಂಬಂಧ 5 ಮಂದಿಯ ಬಂಧನವಾಗಿದೆ.

    ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous ArticleAl Qaeda ಜೊತೆ ನಂಟು ಹೊಂದಿದ್ದ Tilak Nagar ಯುವಕರು
    Next Article ಎಂಜಿನಿಯರಿಂಗ್ ವೈಫಲ್ಯ Metro ದುರಂತಕ್ಕೆ ಕಾರಣ
    vartha chakra
    • Website

    Related Posts

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    ಜೂನ್ 26, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vyo14 ರಲ್ಲಿ ಶಹಬ್ಬಾಸ್ ಬಿಬಿಎಂಪಿ
    • qpg7h ರಲ್ಲಿ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ? | Bandipur
    • n6zhs ರಲ್ಲಿ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe