Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಟ್ ಕಾಯಿನ್ ತನಿಖೆಗೆ ಹಠಾತ್ ತಿರುವು..! | Bitcoin
    Trending

    ಬಿಟ್ ಕಾಯಿನ್ ತನಿಖೆಗೆ ಹಠಾತ್ ತಿರುವು..! | Bitcoin

    vartha chakraBy vartha chakraಅಕ್ಟೋಬರ್ 5, 202324 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.5 – ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ (Bitcoin) ಹಗರಣದ ತನಿಖೆಗೆ ಇದೀಗ ಹಠಾತ್ ಹೊಸ ತಿರುವು ಸಿಕ್ಕಿದೆ.
    ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದ್ದ ಈ ಹಗರಣದ ಕಿಂಗ್ ಪಿನ್ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ ಎಂದೇ ಎಲ್ಕರೂ ನಂಬಿದ್ದರು. ಆದರೆ ಇದೀಗ ಶ್ರೀಕಿಗಿಂತಲೂ ಐನಾತಿ ಹ್ಯಾಕರ್ ಇರುವುದು ಪತ್ತೆಯಾಗಿದೆ.
    ಈ ಹಗರಣದ ತನಿಖೆ ಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ ಐಟಿ)ದ ಅಧಿಕಾರಿಗಳು ಇನ್ನೊಬ್ಬ ಕಿಂಗ್‌ಪಿನ್‌ ಹ್ಯಾಕರ್‌ ನನ್ನು ಪತ್ತೆಹಚ್ಚಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆತನನ್ನು  ಪಂಜಾಬ್‌ನಲ್ಲಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕರ್ನಾಟಕದಲ್ಲಿ ಈ ಹಗರಣ ಬೆಳಕಿಗೆ ಬಂದ ನಾಲ್ಕು ವರ್ಷಗಳಿಂದ  ಭೂಗತನಾಗಿದ್ದ ಈ ಕಿಂಗ್‌ಪಿನ್‌ ಶ್ರೀಕಿಗಿಂತ ಮೊದಲೇ  ಬಿಟ್‌ಕಾಯಿನ್ ದೋಚಿರುವುದು ಪತ್ತೆಯಾಗಿದೆ.

    ಇಂಟರ್‌ನ್ಯಾಷನಲ್ ಹ್ಯಾಕರ್ ಆಗಿರುವ ಖದೀಮ ಪಂಜಾಬ್ ಮೂಲದ ರಾಜೇಂದ್ರ ಸಿಂಗ್ ಎಂದು ಪತ್ತೆ ಹಚ್ಚಲಾಗಿದ್ದು,ಆತನನ್ನು ಬಂಧಿಸಿ ನಗರಕ್ಕೆ ಕರೆತಂದು ವಿಚಾರಣೆ ಕೈಗೊಳ್ಳಲಾಗಿದೆ.
    ಶ್ರೀಕಿಗಿಂತ ಮೊದಲೇ ಹಗರಣದಲ್ಲಿ ರಾಜೇಂದ್ರ ಸಿಂಗ್ ಪಾತ್ರವಿತ್ತು. ಹಗರಣದ ಗ್ಯಾಂಗ್‌ಗೆ ಮೊದಲು ಸಾಥ್ ನೀಡಿದ್ದವನು ಈ ರಾಜೇಂದ್ರ ಸಿಂಗ್ ಎಂದು ಗೊತ್ತಾಗಿದೆ
    ಶ್ರೀಕಿಗೂ ಮೊದಲೇ ಹ್ಯಾಕಿಂಗ್‌ನಲ್ಲಿ ಎಕ್ಸ್‌ಪರ್ಟ್ ಆಗಿದ್ದ ಈತ ಸರ್ಕಾರಿ ಹಾಗೂ ಖಾಸಗಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವುದರಲ್ಲಿ ಪರಿಣಿತನಾಗಿದ್ದ.
    ಇಂತಹ ಪರಿಣಿತ ಇದಕ್ಕಾಗಿ ತನ್ನದೇ ಆದ ಗ್ಯಾಂಗ್ ವೊಂದನ್ನು ಕಟ್ಟಿದ್ದ ಈ ಗ್ಯಾಂಗ್‌ಗೆ ಪರಿಚಯವಾಗಿದ್ದ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ.ಆನಂತರದಲ್ಲಿ ಈ ಇಬ್ಬರೂ ಸೇರಿ ವೆಬ್‌ಸೈಟ್ ಹ್ಯಾಕ್ ಮಾಡಿ ವಂಚನೆ ಮಾಡಿದ್ದರು.

    ಶ್ರೀಕಿ ಬಂಧನವಾಗುತ್ತಿದ್ದಂತೆ ರಾಜೇಂದ್ರ ಸಿಂಗ್ ಪರಾರಿಯಾಗಿ ಭೂಗತನಾಗಿದ್ದು ಪ್ರಕರಣದಲ್ಲಿ ಇದುವರೆಗೂ ಎಲ್ಲೂ ರಾಜೇಂದ್ರ ಸಿಂಗ್ ಹೆಸರು ಬಂದಿರಲಿಲ್ಲ. ಎಸ್ ಐಟಿ ತನಿಖೆಯಲ್ಲಿ ರಾಜೇಂದ್ರ ಸಿಂಗ್ ಪಾತ್ರವಿರುವುದು ಬೆಳಕಿಗೆ ಬಂದಿದೆ.
    ರಾಜೇಂದ್ರ ಸಿಂಗ್ ಜಾಡು ಹಿಡಿದು ಪಂಜಾಬ್‌ಗೆ ಹೊರಟಿದ್ದ ಎಸ್ ಐಟಿ ಅಧಿಕಾರಿಗಳು, ಅಲ್ಲಿ ಆತನನ್ನು ಬಂಧಿಸಿ ಕರೆತಂದಿದೆ. ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ರಾಜೇಂದ್ರ ಸಿಂಗ್ ಬಂಧನ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
    ನಡೆದಿದೆ. ರಾಜೇಂದ್ರ ಸಿಂಗ್‌ನನ್ನು ಎಸ್‌ಐಟಿ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು, ಮುಂದಿನ ತನಿಖಾ ದೃಷ್ಟಿಯಿಂದ ಕೇಂದ್ರ ತನಿಖಾ ಸಂಸ್ಥೆಗಳ ನೆರವು ಕೇಳಿದೆ.ಶ್ರೀಕಿಯಿಂದ ಸುಮಾರು 9 ಕೋಟಿ ರೂ. ಮೌಲ್ಯದ 31 ಬಿಟ್ ಕಾಯಿನ್‌ಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ.

    ಹೈಕೋರ್ಟ್ ವಿನಾಯ್ತಿ:
    ಬಿಟ್‌ ಕಾಯಿನ್‌ ಹಗರಣದ ಆರೋಪಿಗಳಾದ ಶ್ರೀಕಿ ಅಲಿಯಾಸ್ ಶ್ರೀ ಕೃಷ್ಣ, ಸುನೀಶ್ ಹೆಗ್ಡೆ ಮತ್ತು ಹೇಮಂತ್ ಮುದ್ದಪ್ಪ ಅವರಿಗೆ ಅರ್ಜಿಯ ಕುರಿತ ಮುಂದಿನ ದಿನಾಂಕದ ವರೆಗೂ ಖುದ್ದು ವಿಚಾರಣೆಗೆ ಹಾಜರಾಗುವುದಕ್ಕೆ ಕೆಲ ದಿನಗಳ ಹಿಂದಷ್ಟೇ ವಿನಾಯ್ತಿ ನೀಡಿ ಹೈಕೋರ್ಟ್ ಆದೇಶಿಸಿತ್ತು.
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಕಾನೂನು ಪ್ರಕ್ರಿಯೆ ವಜಾ ಮಾಡುವಂತೆ ಕೋರಿ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ, ಸಹ ಆರೋಪಿಗಳಾದ ಸುನೀಶ್ ಹೆಗ್ಡೆ ಮತ್ತು ಪ್ರಸಿಧ್ ಶೆಟ್ಟಿ ಹಾಗೂ ಹೇಮಂತ್ ಮುದ್ದಪ್ಪ ಅವರು ಪ್ರತ್ಯೇಕವಾಗಿ ಅರ್ಜಿಗಳನ್ನು ಸಲ್ಲಿಸಿದ್ದರು.
    ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿತ್ತು.

    ಏನಿದು ಪ್ರಕರಣ:
    2020ರಲ್ಲಿ ಕೆಂಪೇಗೌಡ ನಗರ ಸಮೀಪ ಡ್ರಗ್ ಮಾರಾಟಕ್ಕೆ ಯತ್ನಿಸಿದ್ದಾಗ ಶ್ರೀಕಿ ಹಾಗೂ ಆತನ ಸ್ನೇಹಿತರು ಸಿಸಿಬಿ ಬಲೆಗೆ ಬಿದ್ದಿದ್ದರು. ಬಳಿಕ ವಿಚಾರಣೆ ವೇಳೆ ಅಂತಾರಾಷ್ಟ್ರೀಯ ಮಟ್ಟದ ಆನ್‌ಲೈನ್‌ ಗೇಮಿಂಗ್‌ ಕಂಪನಿಗಳು ಹಾಗೂ ಸರ್ಕಾರದ ವೆಬ್‌ಸೈಟ್‌ಗಳನ್ನು ಹ್ಯಾಕ್‌ ಮಾಡಿ ಸುಮಾರು 11 ಕೋಟಿ ರು. ಹಣವನ್ನು ಶ್ರೀಕಿ ದೋಚಿದ್ದ ಸಂಗತಿ ಬಯಲಾಗಿತ್ತು. ಹೀಗೆ ದೋಚಿದ್ದ ಹಣವನ್ನು ಬಿಟ್‌ ಕಾಯಿನ್‌ಗಳಾಗಿ ಪರಿವರ್ತಿಸಿ ಡ್ರಗ್ ದಂಧೆಗೆ ಶ್ರೀಕಿ ಬಳಸಿದ್ದ ಎನ್ನಲಾಗಿತ್ತು.

    Verbattle
    Verbattle
    Verbattle
    Bitcoin Government News tech news Trending Varthachakra ಕಾನೂನು ಚಂದನ್ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಸ್ ನಿಲ್ದಾಣ ಕದ್ದೊಯ್ದ ಕಳ್ಳರು | Cunningham Road
    Next Article ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uegomn ರಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    • Tracymix ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Tracymix ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.