Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ!
    ರಾಜ್ಯ

    ಮುರುಘಾ ಮಠಕ್ಕೆ ಹೊಸ ಪೀಠಾಧಿಪತಿ!

    vartha chakraBy vartha chakraಅಕ್ಟೋಬರ್ 15, 2022Updated:ಅಕ್ಟೋಬರ್ 15, 20221 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.15- ಪೋಕ್ಸೋ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘ ರಾಜೇಂದ್ರ ಶರಣರನ್ನು ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿ ಪರ್ಯಾಯ ಪೀಠಾಧ್ಯಕ್ಷರ ನೇಮಕಕ್ಕೆ ತಯಾರಿಗಳು ನಡೆಯುತ್ತಿವೆ.
    ಮುರುಘಾ ಶ್ರೀಗಳ ವಿರುದ್ಧ ದಿನಕ್ಕೊಂದು ನಂಬಲು ಅಸಾಧ್ಯವಾದ ಲೈಂಗಿಕ ಪ್ರಕರಣಗಳು ಹೊರ ಬರುತ್ತಿರುವ ಹಿನ್ನೆಲೆಯಲ್ಲಿ ಪೀಠದಿಂದ ಅವರನ್ನು ವಜಾಗೊಳಿಸಿ, ಹೊಸಬರನ್ನು ಪೀಠಾಧ್ಯಕ್ಷರನ್ನಾಗಿ ನೇಮಿಸಲು ಮಠದ ಹಾಗೂ ಸಾಮಾಜಿಕ ಒತ್ತಡ ಹೆಚ್ಚಾಗಿದೆ.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಗಳು ಹೊಸ ಪೀಠಾಧ್ಯಕ್ಷರನ್ನು ನೇಮಿಸಲು ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.
    ಈ ಘಟನೆಯಿಂದಾಗಿ ಶತಮಾನಗಳ ಇತಿಹಾಸವಿರುವ ಮುರುಘಾ ಮಠದ ನಂಬಿಕೆ ಮತ್ತು ಧಾರ್ಮಿಕ ಪರಂಪರೆಯ ವಿಶ್ವಾಸಕ್ಕೆ ಆಘಾತ ಉಂಟಾಗಿದೆ. ತಕ್ಷಣವೇ ಹೊಸ ಶ್ರೀಗಳ ಹೆಸರನ್ನು ಪರಿಶೀಲಿಸಬೇಕೆಂದು ನಿಯೋಗ ಮನವಿ ಮಾಡಿಕೊಂಡಿದೆ.
    ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಠದ ಭಕ್ತರು ಹಾಗೂ, ಮಾಜಿ ಶಾಸಕರು ಸೇರಿದಂತೆ ಅನೇಕರು ನನ್ನನ್ನು ಭೇಟಿಯಾಗಿ ಅಲ್ಲಿನ ಪ್ರಸಕ್ತ ವಿದ್ಯಮಾನಗಳು ನನ್ನ ಗಮನಕ್ಕೆ ತಂದಿದ್ದಾರೆ.
    ಈ ಘಟನೆ ನಡೆದ ಬಳಿಕ ಮಠದಲ್ಲಿ ಉಂಟಾಗಿರುವ ಬೆಳವಣಿಗೆಗಳು ಸೇರಿದಂತೆ ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಡಳಿತ ವಿಚಾರದಲ್ಲಿ ಆಗಿರುವ ಸಮಸ್ಯೆಯನ್ನು ಮನವರಿಕೆ ಮಾಡಿದ್ದಾರೆ ಎಂದರು.
    ಮಠದಲ್ಲಿ ಒಂದು ಟ್ರಸ್ಟ್ ಇದೆ. ಏನೇ ಕ್ರಮಗಳಾಗಬೇಕಾದರೂ ಕಾನೂನಿನ ಪ್ರಕಾರವೇ ಆಗಬೇಕು. ನಾವು ಇದರ ವ್ಯಾಪ್ತಿಯಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಅಂತಿಮ ಕಾನೂನು ಚೌಕಟ್ಟಿನೊಳಗೆ ಮುಂದಿನ ಕ್ರಮಗಳು ನಡೆಯಲಿವೆ ಎಂಬ ಸುಳಿವು ನೀಡಿದ್ದಾರೆ.
    ರಾಯಚೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಕಂದಾಯ ಸಚಿವ ಅರ್.ಅಶೋಕ್ ಅವರು, ಮುರುಘಾ ಶ್ರೀಗಳನ್ನು ಪೀಠದಿಂದ ಕೆಳಗಿಳಿಸುವ ಬಗ್ಗೆ ಸರ್ಕಾರದ ಮೇಲೆ ಒತ್ತಡ ಬಂದಿರುವುದು ನಿಜ. ಶೀಘ್ರದಲ್ಲೇ ಸರ್ಕಾರ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
    ಮಠದ ವಿಷಯದಲ್ಲಿ ಸರ್ಕಾರ ನೇರವಾಗಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಆದರೆ ಸಮುದಾಯದ ಮುಖಂಡರೇ ಭೇಟಿಯಾಗಿ ಮನವಿ ಮಾಡಿರುವುದರಿಂದ ಸಮಾಜದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಸದ್ಯದಲ್ಲೇ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
    ಮೂಲಗಳ ಪ್ರಕಾರ ಈಗಾಗಲೇ ಮಾಜಿ ಸಿಎಂ ಬಿಎಸ್‍ವೈ ಬಳಿ ಚರ್ಚೆ ನಡೆಸಿರುವ ಬೊಮ್ಮಾಯಿ, ಮುರುಘಾ ಶ್ರೀಗಳು ಆರೋಪದಿಂದ ಮುಕ್ತವಾಗುವವರೆಗೂ ಪೀಠಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸದೆ ಹೊಸಬರನ್ನು ನೇಮಿಸಲು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

    Verbattle
    Verbattle
    Verbattle
    ಕಾನೂನು ಧಾರ್ಮಿಕ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನೂ ಒಂದು ವಾರ ಸುರಿಯಲಿದೆ ಮಳೆ!
    Next Article ರಾಜ್ಯ ಹೈಕೋರ್ಟ್ ಗೆ ಹೊಸ CJ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Everetttup ರಲ್ಲಿ ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    • LinwoodGah ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.