Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ
    ರಾಜ್ಯ

    ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ

    vartha chakraBy vartha chakraಸೆಪ್ಟೆಂಬರ್ 1, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Ramanagar
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ, Sep 1 : ಬೆಂಗಳೂರು ಮತ್ತು ಮೈಸೂರು ನಡುವೆ ನಿರ್ಮಾಣ ಆಗುತ್ತಿರುವ ಎಕ್ಸ್ ಪ್ರೆಸ್ ಹೈವೇ ಯೋಜನೆಯಲ್ಲಿ ಕೈಗೊಂಡಿರುವ ಅವೈಜಾನಿಕ ಕಾಮಗಾರಿಗಳಿಂದಲೇ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಪಾದಿಸಿದ್ದಾರೆ.
    ಅಲ್ಲಿದೆ, ಎಕ್ಸ್ ಪ್ರೆಸ್ ಹೈವೇ ಹಾಗೂ ಪ್ರವಾಹದ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವರು ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
    ಚನ್ನಪಟ್ಟಣದ ಮಳೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು.
    ಮೊದಲು ಒತ್ತುವರಿಯಾದ ನಾಲೆ, ಕಾಲುವೆ ತೆರವು ಮಾಡಲಿ ಎಂಬ ಪ್ರತಾಪ್ ಸಿಂಹ ಟ್ವೀಟ್ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು ಬೆಂಗಳೂರಿನ ವಿವಿಧೆಡೆ ಮನೆಗಳಲ್ಲಿ ನೀರು ನಿಂತಿದೆ. ಯಾಕೆ ಎನ್ನುವುದನ್ನು ಪ್ರತಾಪ್ ಸಿಂಹ ಅರ್ಥ ಮಾಡಿಕೊಳ್ಳಬೇಕು. ಇದು ಈಗ ಆಗಿರುವ ತೊಂದರೆ ಅಲ್ಲ . ರಾಜಕೀಯ ಸ್ವೇಚ್ಛಾಚಾರದಿಂದ ಆಗಿರುವ ಅನಾಹುತಗಳಿವು. ಈ ಹಿಂದಿನ ಸರ್ಕಾರಗಳಲ್ಲಿ ಆಗಿರುವ ತಪ್ಪು ತೀರ್ಮಾನಗಳಿವು ಎಂದು ಟೀಕಾ ಪ್ರಹಾರ ನಡೆಸಿದರು.
    ರಸ್ತೆಗಳಲ್ಲಿ ನೀರು ನಿಂತಿದೆಯಲ್ಲ, ಅದಕ್ಕೆ ಕಾರಣ ಯಾರು? ಅಕ್ರಮವಾಗಿ ನಿರ್ಮಾಣ ಆಗಿರುವುದನ್ನು ನಾವು ತೆರವು ಮಾಡಿಸುತ್ತೇವೆ. ಅದು ಒಂದು ಭಾಗ. ಆದರೆ, ಎಕ್ಸ್ ಪ್ರೆಸ್ ಹೈವೇ ಕಾಮಗಾರಿ ಪ್ರಾರಂಭ ಆದಮೇಲೆ ಈ ಸಮಸ್ಯೆ ಸೃಷ್ಟಿಯಾಗಿದೆ. ಪ್ರತಾಪ್ ಸಿಂಹ ಏನು ದೊಡ್ಡ ಎಂಜಿನಿಯರ್ ಏನ್ರೀ? ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.
    ಅದೆಲ್ಲೋ ಬರವಣಿಗೆ ಮಾಡಿಕೊಂಡು ಇದ್ದ ವ್ಯಕ್ತಿ ಪ್ರತಾಪ್ ಸಿಂಹ ಈಗ ನರೇಂದ್ರ ಮೋದಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರಿಂದ ನಾನು ಕಲಿಯಬೇಕಾ? ಅವರು ಸುಖಾ ಸುಮ್ಮನೆ ನನ್ನನ್ನು ಕೆರಳಿಸುವುದು ಬೇಡ. ಹೆದ್ದಾರಿಯಲ್ಲಿ ನೀರು ನಿಂತದ್ದು ಒತ್ತುವರಿಯಿಂದನಾ? ಅದು ಆಗಿರುವುದು ಕಳಪೆ ಕಾಮಗಾರಿಯಿಂದ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
    ಎಕ್ಸ್ ಪ್ರೆಸ್ ಹೈವೇ ಅಂಡರ್ ಪಾಸ್ ಗಳಲ್ಲಿ ನೀರು ನಿಂತಿದೆ. ಅದು ಯಾಕೆ ನಿಂತಿದೆ ಎನ್ನುವುದನ್ನು ಎಷ್ಟು ಸಲ ಹೇಳಲಿ. ಸಂಸದ ಪ್ರತಾಪ್ ಸಿಂಹ ಎಷ್ಟು ಕಡೆ ಹೋಗಿದ್ದಾರೆ. ಫೋಟೋ ತೆಗೆಸಿಕೊಳ್ಳಲು ಬಂದಿದ್ದರಲ್ಲ ಈಗ ಎಷ್ಟು ಕಡೆ ಬಂದಿದ್ದಾರೆ? ಇವರ ಹತ್ತಿರ ನಾನು ರಾಜಕೀಯ ಕಲಿಯಬೇಕಿಲ್ಲ. ಜನರ ಬದುಕೇನು ಎಂದು ಈತನಿಂದ ಕಲಿಯಬೇಕಿಲ್ಲ. ಜನರ ಕಷ್ಟ ಸುಖಾ ನೋಡಿ ರಾಜಕೀಯ ಮಾಡಿದ್ದರೆ ವಸ್ತುಸ್ಥಿತಿ ಏನೆಂದು ಗೊತ್ತಾಗುತ್ತಿತ್ತು. ಕೇವಲ ಬಿಜೆಪಿ, ಮೋದಿ ಹೆಸರಿನಲ್ಲಿ ರಾಜಕೀಯ ಮಾಡಿ ಎಂಪಿ ಆಗಿದ್ದಾರೆ. ಕಷ್ಟಪಟ್ಟು ಎಂಪಿ ಸ್ಥಾನ ಪಡೆದಿಲ್ಲ ಎಂದು ಅವರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    Verbattle
    Verbattle
    Verbattle
    ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲ್ವೆ ನೌಕರರನ ಹೆಸರಲ್ಲಿ ಗಾಂಜಾ ಮಾರಾಟ
    Next Article ಕದ್ದ ಚಿತ್ರ ತೆರೆಗೆ ಸಿದ್ಧ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_tesl ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Neiroset dlya ychebi_kmsl ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • tg88 com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.