ಬೆಂಗಳೂರು, ಮಾ. 6: ಅಸಾಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಪಡೆಯುವ ಮೂಲಕ ಕೃಷಿ ಕ್ಷೇತ್ರವನ್ನು ಮತ್ತಷ್ಟು ಸಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯ ಇಂಧನ ಇಲಾಖೆ ಹೊಸ ಆವಿಷ್ಕಾರಗಳಿಗೆ ಮುಂದಾಗಿದೆ.
ಇದನ್ನು ರೈತರಿಗೆ ಪರಿಚಯಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತ ಸೌರಶಕ್ತಿ ಮೇಳ ಆಯೋಜಿಸಿದೆ.ಈ ಮೂಲಕ ಕೃಷಿ ಬಳಕೆ ಪಂಪ್ ಸೆಟ್ ಗಳಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂಬ ನಿಟ್ಟಿನಲ್ಲಿ ಈ ಮೇಳ ಆಯೋಜಿಸಲಾಗಿದೆ.
ಮಾರ್ಚ್ 9 ರಂದು ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಆಯೋಜಿಸಿರುವ ಈ ಮೇಳದ ಕುರಿತು ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್, “ರೈತರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸಲು ಸೌರ ಪಂಪ್ಸೆಟ್ ಬಳಕೆಯೇ ಪರಿಹಾರ. ಹಾಗಾಗಿ, ಈ ಬಗ್ಗೆ ರೈತರಿಗೆ ಹೆಚ್ಚಿನ ಮಾಹಿತಿ ಒದಗಿಸಲು ಜಿಕೆವಿಕೆ ಆವರಣದಲ್ಲಿ ಇದೇ ಮಾರ್ಚ್ 9 ರಂದು “ರೈತ ಸೌರ ಶಕ್ತಿ ಮೇಳ” ಆಯೋಜಿಸಲಾಗಿದೆ,”ಎಂದರು.
ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆ ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು. ಅದಕ್ಕಾಗಿ ನಮ್ಮ ಸರ್ಕಾರ ‘ಕುಸುಮ್ ಬಿ’ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡುತ್ತಿದೆ. ನವೀನ ಮಾದರಿಯ ಸೌರ ಪಂಪ್ಸೆಟ್ಗಳ ಪ್ರಾತ್ಯಕ್ಷಿಕೆಯನ್ನು ನೋಡಿ, ಈ ವಿಚಾರವಾಗಿ ಇರುವ ಗೊಂದಲಗಳನ್ನು ಪರಿಹರಿಸಿಕೊಳ್ಳಲು ಮೇಳ ಅತ್ಯುತ್ತಮ ವೇದಿಕೆಯಾಗಲಿದೆ. ಸೌರ ಪಂಪ್ಸೆಟ್ಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ರೈತರು ತಮ್ಮ ಜಮೀನುಗಳಲ್ಲಿ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು ಮಾರ್ಚ್ 9ರಂದು 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೇರಿದಂತೆ ಹಲವು ಸಚಿವರು ಮೇಳದಲ್ಲಿ ಭಾಗಿಯಾಗಲಿದ್ದಾರೆ.ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ರೈತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರ ಕೃಷಿಕರು ನೀರಾವರಿಗೆ ಸಾಂಪ್ರದಾಯಿಕ ಇಂಧನ ಮೂಲದ ಬದಲಾಗಿ ಹೆಚ್ಚಿನ ಪ್ರಮಾಣದಲ್ಲಿ ಸೌರ ಪಂಪ್ ಸೆಟ್ ಅಳವಡಿಕೆಯನ್ನು ರೈತರ ಸಮೂಹಗಳಲ್ಲಿ ಉತ್ತೇಜಿಸಲು ರಾಜ್ಯ ಸರ್ಕಾರದಿಂದ ಈವರೆಗೆ ನೀಡಲಾಗುತ್ತಿದ್ದ ಶೇ 30 ರಷ್ಟು ಸಹಾಯಧನವನ್ನು ಶೇ 50 ಕ್ಕೆ ಹೆಚ್ಚಿಸಿದೆ. ಒಟ್ಟಾರೆ ಮೊತ್ತದಲ್ಲಿ ಶೇ 20 ರಷ್ಟನ್ನು ಮಾತ್ರ ರೈತರು ಭರಿಸಬೇಕಾಗಿರುತ್ತದೆ. ಇದಲ್ಲದೇ, ಯೋಜನೆಯಡಿ ರೈತರಿಗೆ ಪಂಪ್, ಮೀಟರ್, ಪೈಪ್ಗಳನ್ನು ಒದಗಿಸಲಿದೆ,”ಎಂದರು ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್ಸೆಟ್ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿರುತ್ತದೆ. ವಿವಿಧ ಸೌರ ವಿದ್ಯುತ್ ಉತ್ಪನ್ನಗಳ ಮಳಿಗೆಗಳರಲಿವೆ.
ಸೌರ ಪಂಪ್ಸೆಟ್ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ನೇರವಾಗಿ ನೋಡುವ ಅವಕಾಶ ಇರುತ್ತದೆ. ಸೋಲಾರ್ ಪಂಪ್ಸೆಟ್ ಅಳವಡಿಕೊಳ್ಳುವ ರೈತರಿಗಾಗಿಯೇ ಆನ್ಲೈನ್ ಪೋರ್ಟಲ್ ವಿನ್ಯಾಸಗೊಳಿಸಲಾಗಿದೆ. ಅಲ್ಲದೇ, ಮೇಳದಲ್ಲಿ ‘ಸೌರ ಮಿತ್ರ’ ಆ್ಯಪ್ ಬಿಡುಗಡೆ ಮಾಡಲಾಗಿತ್ತದೆ. ಆ್ಯಪ್ ಮೂಲಕವೂ ರೈತರು ಅರ್ಜಿ ಸಲ್ಲಿಸಬಹುದಾಗಿದೆ.ಎಂದು ಹೇಳಿದರು
ರೈತರಿಗಾಗಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸೌರ ಪಂಪ್ ಸೆಟ್ಗಳ ಉತ್ಪಾದಕರು, ಮಾರಾಟಗಾರರು, ಬ್ಯಾಂಕ್ ಅಧಿಕಾರಿಗಳು, ಕೃಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು ಸಂವಾದದಲ್ಲಿ ಪಾಲ್ಗೊಂಡು ರೈತರಿಗೆ ಮಾಹಿತಿ ಒದಗಿಸಲಿದ್ದಾರೆ.
ಜತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ‘ಕುಸುಮ್ ಸಿ’ ಯೋಜನೆ ಹಾಗೂ ರಾಜ್ಯದ 13 ಜಿಲ್ಲೆಗಳಲ್ಲಿರುವ ವಿವಿಧ ವೋಲ್ಟೇಜ್ ವರ್ಗಗಳ ಹೊಸ ಸಬ್ಸ್ಟೇಷನ್ಗಳಿಗೂ ಮುಖ್ಯಮಂತ್ರಿಯವರು ಚಾಲನೆ ನೀಡಲಿದ್ದಾರೆ. ,”ಎಂದು ಸಚಿವ ಜಾರ್ಜ್ ಮಾಹಿತಿ ನೀಡಿದರು.
ಈ ವೇಳೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ ರುದ್ರಪ್ಪಯ್ಯ ಉಪಸ್ಥಿತರಿದ್ದರು.

2 ಪ್ರತಿಕ್ರಿಯೆಗಳು
Betano Casino – le pur plaisir du jeu. Recevez 100 % jusqu’Г 500 € plus 100 tours gratuits https://betanogame.org/fr/ sur votre premier dГ©pГґt. Les meilleurs divertissements du monde vous attendent.
The casino that turns moments into memories – http://gketorolac.com/starburst-slot-game-best-online-real-money-play-big-wins-2026/ , Come for the game, stay for the legend .