Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » International love story..
    ಅಂತಾರಾಷ್ಟ್ರೀಯ

    International love story..

    vartha chakraBy vartha chakraಜನವರಿ 25, 2023Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.25-
    ಮೊಬೈಲ್ ಗೇಮಿಂಗ್ ಆ್ಯಪ್ ಮೂಲಕ ಪರಿಚಿತಗೊಂಡ ಉತ್ತರ ಪ್ರದೇಶದ ಯುವಕನನ್ನು ಪ್ರೀತಿಸಿ, ಪಾಕಿಸ್ತಾನದ ಗಡಿಯನ್ನು ಕಳ್ಳದಾರಿಯ ಮೂಲಕ ದಾಟಿ, ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿರುವ‌ ಪಾಕ್ ಯುವತಿ ಸ್ವದೇಶಕ್ಕೆ ಹೋಗಲು ನಿರಾಕರಿಸಿದ್ದಾರೆ. ಈ ಅಂತಾರಾಷ್ಟ್ರೀಯ ಹಾಗೂ ಅಂತರ್ ಧರ್ಮೀಯ ಪ್ರೇಮ್ ಕಹಾನಿ ನಗರದ ಪೊಲೀಸರಿಗೆ ಹೊಸ ತಲೆ ನೋವು ತಂದಿದೆ. ಪ್ರೀತಿಸಿದ‌ ಯವಕನಿಗಾಗಿ ಗಡಿ ದಾಟಿ ಬಂದು, ಮದುವೆಯಾಗಿ ಹೆಸರು ಬದಲಾಯಿಸಿಕೊಂಡು ಭಾರತೀಯಳಾಗಿರುವ ಯುವತಿ ನಾನು, ಭಾರತದಲ್ಲಿಯೇ ಇರುವೆ. ಪತಿಯ ಜೊತೆಯಲ್ಲಿಯೇ ಸಾಯುವೆ. ಅದಕ್ಕೆ ಅವಕಾಶ ಮಾಡಿಕೊಡುವಂತೆ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾಳೆ.

    ‘ಪ್ರೀತಿಗಾಗಿ ದೇಶವನ್ನೇ ಬಿಟ್ಟು ಬಂದು ಭಾರತದ ಪ್ರಜೆಯನ್ನು ಮದುವೆಯಾಗಿರುವ ಪಾಕಿಸ್ತಾನಿ ಇಕ್ರಾ ಜಿವಾನಿ,ಇಲ್ಲಿಯೇ ಇರುತ್ತೇನೆ ನಾನು ಪಾಕಿಸ್ತಾನಕ್ಕೆ ಹೋಗಲ್ಲ, ನಾವಿಬ್ಬರು ಮದುವೆಯಾಗಿದ್ದೇವೆ. ಪತಿ ಮುಲಾಯಂ ಸಿಂಗ್ ಯಾದವ್ ನನ್ನು ಬಿಟ್ಟು ಹೋಗಲ್ಲ’ ಎಂದು ಪಟ್ಟು ಹಿಡಿದಿರುವುದು ಪೊಲೀಸರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಮಹಿಳೆಯು ಭಾರತ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರೂ, ಆಕೆ ಇಲ್ಲಿ ನೆಲೆಸಲು ಕಾನೂನಿನಲ್ಲಿ ಅವಕಾಶವೇ ಇಲ್ಲ. ಹೀಗಾಗಿ ಪೊಲೀಸರು ಆಕೆಯನ್ನು ಗಡಿಪಾರು ಮಾಡಲು ಬೇಕಾದ ಪ್ರಕ್ರಿಯೆ ನಡೆಸುತ್ತಿದ್ದಾರೆ. ಪೊಲೀಸರು ಮತ್ತು FRRO ಅಧಿಕಾರಿಗಳು ಮಹಿಳೆಯು ಭಾರತಕ್ಕೆ ಬಂದಿರುವುದು ಅಕ್ರಮವಾಗಿರುವುದರಿಂದ ಆಕೆಯನ್ನು ಮರಳಿ ಪಾಕಿಸ್ತಾನಕ್ಕೆ ಕಳಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

    ಕೇಂದ್ರ ಸರ್ಕಾರದ ಸಂಬಂಧಪಟ್ಟ ಏಜೆನ್ಸಿಗಳ ಜೊತೆ FRRO ಅಧಿಕಾರಿಗಳು ಸಂಪರ್ಕ ಮಾಡಿದ್ದಾರೆ. ಪಾಕ್ ಮಹಿಳೆಯನ್ನು ಆಕೆಯ ದೇಶಕ್ಕೆ ವಾಪಸ್ ಕಳಿಸಲು ಕನಿಷ್ಠ ಎರಡು ತಿಂಗಳ ಸಮಯ ಬೇಕಾಗಲಿದೆ. ಹೀಗಾಗಿ ಎರಡೂ ದೇಶಗಳ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಆಕೆಯನ್ನು ವಾಪಸ್ ಕಳಿಸಬೇಕು. ಇದಕ್ಕೆ ಬೇಕಾದ ಕಾನೂನು ಪ್ರಕ್ರಿಯೆ ಪರಿಶೀಲನೆಯನ್ನು FRRO ಮತ್ತು ಪೊಲೀಸರು ನಡೆಸಿದ್ದಾರೆ.

    ಮದುವೆಯೇ ಅನುಮಾನ:
    ಈ ನಡುವೆ ಇಕ್ರಾ ಜಿವಾನಿ ಮತ್ತು ಮುಲಾಯಂ ಸಿಂಗ್ ಮದುವೆ ಬಗ್ಗೆಯೇ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ವಿಚಾರಣೆ ವೇಳೆ ಇಬ್ಬರೂ ಮದುವೆಯಾಗಿದ್ದೇವೆ ಎಂದಿದ್ದಾರೆ.
    ಆದರೆ ಮದುವೆಯಾದ ಬಗ್ಗೆ ಯಾವುದೇ ಅಧಿಕೃತ ದಾಖಲೆ, ಫೋಟೊಗಳಿಲ್ಲ. ಮದುವೆಯಾದ ಬಗ್ಗೆ ಮ್ಯಾರೇಜ್ ಸರ್ಟಿಫಿಕೆಟ್ ಕೂಡ ಇಲ್ಲ. ಬೇರೆ ದಾಖಲಾತಿಗಳು ಕೂಡ ಪತ್ತೆಯಿಲ್ಲ. ಹೀಗಾಗಿ ಈ ರೀತಿಯ ಮದುವೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ.
    ವಿದೇಶಿ ಮಹಿಳೆಯನ್ನು ಮದುವೆಯಾದಾಗ ಕಾನೂನಾತ್ಮಕ ದಾಖಲೆ ಇರಬೇಕು. ಅದ್ಯಾವುದೂ ಇಲ್ಲದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಯಾದವ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸತೊಡಗಿದ್ದಾರೆ.

    Verbattle
    Verbattle
    Verbattle
    #pakistan national News Online gaming app Uttar pradesh ಕಾನೂನು ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.
    Next Article ಭ್ರಷ್ಟಾಚಾರವನ್ನು ಕಲಿಸಿಕೊಟ್ಟವರೇ Congress ನವರು.
    vartha chakra
    • Website

    Related Posts

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xnmpad ರಲ್ಲಿ ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    • Tracymix ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • купить мефедрон ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.