ಬೆಂಗಳೂರು, ಮಾ.20: ಪ್ರಕೃತಿ ವಿಕೋಪ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಜಾಗತಿಕ ಸಮಸ್ಯೆಗಳಿಗೆ ಮಾಲಿನ್ಯ ಮತ್ತು ಅರಣ್ಯ ನಾಶ ಕಾರಣ.ಈ ಹಿನ್ನೆಲೆಯಲ್ಲಿ, ಪ್ರಕೃತಿ, ಪರಿಸರ, ವನ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕುಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಅರಣ್ಯ ದಿನ ಸಂದರ್ಭದಲ್ಲಿ ನೀಡಿದ ಸಂದೇಶದಲ್ಲಿ ಅವರು, ಈ ಬಾರಿಯ ಅರಣ್ಯ ದಿನದ ಧ್ಯೇಯವಾಕ್ಯ ‘ಅರಣ್ಯ ಮತ್ತು ನಾವೀನ್ಯತೆ: ಉತ್ತಮ ವಿಶ್ವಕ್ಕಾಗಿ ಹೊಸ ಪರಿಹಾರಗಳು’ (Forests and innovation: New Solutions for a better world) ಎಂಬುದಾಗಿದೆ ಎಂದು ತಿಳಿಸಿದ್ದಾರೆ.
ಪರಿಸರ, ಅರಣ್ಯ ಪ್ರದೇಶ, ಸಸ್ಯ ಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಹಾಗೂ ಜೀವವೈವಿಧ್ಯದ ಸಂರಕ್ಷಣೆಗೆ ಸಮರ್ಥವಾಗಿ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ನಾವೀನ್ಯಪೂರ್ಣ ವಿಧಾನಗಳ ಅಳವಡಿಕೆ ಅತ್ಯಗತ್ಯ ಮತ್ತು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಒತ್ತುವರಿಯ ಪತ್ತೆಯಲ್ಲಿ ಉಪಗ್ರಹ ಚಿತ್ರಗಳು ಮಹತ್ವದ ಪಾತ್ರ ವಹಿಸುತ್ತವೆ. ಹಿಂದಿನ 5-10 ವರ್ಷಗಳಲ್ಲಿ ಅರಣ್ಯ ಹೇಗಿತ್ತು, ಈಗ ಹೇಗಿದೆ ಎಂಬುದನ್ನು ಈ ಚಿತ್ರಗಳಿಂದ ತಿಳಿಯಲು ಸಾಧ್ಯವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಉಪಗ್ರಹ ಚಿತ್ರಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದರೆ ಹೊಸ ಒತ್ತುವರಿ ತಡೆಯಲು ಸಾಧ್ಯ, ಈ ವಿಧಾನವನ್ನು ಅರಣ್ಯ ಇಲಾಖೆ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕಾಡ್ಗಿಚ್ಚಿನಿಂದ ಅರಣ್ಯ ಮತ್ತು ವನ್ಯಜೀವಿಗಳಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯುವಲ್ಲಿ ಉಪಗ್ರಹ ಚಿತ್ರದ ನೆರವಿನಿಂದ ಮಾಹಿತಿ ನೀಡುವ ದೂರ ಸಂವೇದಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಕಾಡ್ಗಿಚ್ಚಿನ ಮಾಹಿತಿ ಇಸ್ರೋದ ರಾಷ್ಟ್ರೀಯ ದೂರ ಸಂವೇದಿ ಕೇಂದ್ರ (ಎನ್.ಆರ್.ಎಸ್.ಸಿ.)ಗೆ ಬಂದು ಅಲ್ಲಿಂದ ಭಾರತೀಯ ಅರಣ್ಯ ಸರ್ವೇಕ್ಷಣಾ ಇಲಾಖೆ (ಎನ್.ಆರ್.ಎಸ್.ಸಿ.)ಗೆ ಬರುತ್ತದೆ. ಅಲ್ಲಿಂದ ಸಂಬಂಧಿತ ಅರಣ್ಯ ವಲಯದ ಸಿಬ್ಬಂದಿಗೆ ರವಾನೆ ಆಗುತ್ತಿದೆ. ಹೀಗಾಗಿ ತಕ್ಷಣವೇ ಬೆಂಕಿ ನಂದಿಸಲು ಹಾಗೂ ಅರಣ್ಯ ರಕ್ಷಿಸಲು ಸಹಕಾರಿ ಆಗುತ್ತಿದೆ. ನಾವೀನ್ಯಪೂರ್ಣ ವಿಧಾನಗಳ ಬಳಕೆ ಅರಣ್ಯ ಸಂರಕ್ಷಣೆಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.


1 ಟಿಪ್ಪಣಿ
No Mostbet vocГЄ recebe 144% de bГґnus + 300 free spins para arrasar nos jogos – https://mostbetpt.pro/ , Jogue no Mostbet e ganhe 125% extra + 325 free spins logo no primeiro depГіsito .