Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.
    ಅಪರಾಧ

    ಬಳ್ಳಾರಿ ಚುನಾವಣೆಗೆ ಖರ್ಚಾದ ಹಣ.

    vartha chakraBy vartha chakraಅಕ್ಟೋಬರ್ 14, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.14-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ
    ಜಾರಿ ನಿರ್ದೇಶನಾಲಯ ಸ್ಪೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದೆ.
    ನಿಗಮದಿಂದ ಇತರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಇಡಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.
    ಈ ಕುರಿತಾಗಿ ಇಡಿ ಅಧಿಕಾರಿಗಳು ಹೊರಡಿಸಿರುವ  ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಚುನಾವಣಾ ವೆಚ್ಚದ ಖರ್ಚು ಸೇರಿ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಲಾಗಿದೆ.
    ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಪತ್ರಿಕಾ ಪ್ರಕಟಣೆಯಲ್ಲಿ 24 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿದೆ. ಪ್ರಕರಣದಲ್ಲಿ ಬಿ.ನಾಗೇಂದ್ರ ಪ್ರಮುಖ ರೂವಾರಿ ಎಂದು ಉಲ್ಲೇಖಿಸಿದೆ. ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ, ಸಹಚರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಹಾಗೂ ವಿಜಯ್ ಕುಮಾರ್ ಗೌಡ ಸೇರಿದಂತೆ 24 ಮಂದಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
    ಅವ್ಯವಹಾರ ಸಂಬಂಧ ಎಸ್ಐಟಿ ಹಾಗೂ ಸಿಬಿಐ ಪರ್ಯಾಯವಾಗಿ ತನಿಖೆ ನಡೆಸಿದ್ದು ಪತ್ತೆ ಹಚ್ಚಲಾದ 89.62 ಕೋಟಿ ಹಣವನ್ನ ಆಂಧ್ರ ಹಾಗೂ ತೆಲಂಗಾಣದ ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆಗಳಿಗೆ ವರ್ಗವಣೆ ಮಾಡಲಾಗಿದೆ.
    ಬೆಂಗಳೂರು ನಗರದ ಎಂ.ಜಿ.ರೋಡ್ ನಲ್ಲಿರುವ ಯೂನಿಯನ್ ಬ್ಯಾಂಕ್ ನ ನಿಗಮದ ಖಾತೆಯಿಂದ 187 ಕೋಟಿ ರೂ.ಹಣ ವರ್ಗಾವಣೆಯಾಗಿತ್ತು. ಇದರಲ್ಲಿ 43.33 ಕೋಟಿ ಹಣವನ್ನ ರಾಜ್ಯದ ಗಂಗಾ ಕಲ್ಯಾಣ ಯೋಜನೆಗೆ ಮೀಸಲಿಡಲಾಗಿತ್ತು. ಸರ್ಕಾರದ ನಿರ್ದೇಶನವನ್ನ ಗಾಳಿಗೆ ತೂರಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಗದಾಗಿ ಪರಿವರ್ತನೆ ಮಾಡಲಾಗಿತ್ತು.
    ಬಳ್ಳಾರಿ ಲೋಕಸಭಾ ಚುನಾವಣೆ ವೆಚ್ಚಕ್ಕಾಗಿ ನಿಗಮದ 20.19 ಕೋಟಿ ರೂಪಾಯಿ  ನಾಗೇಂದ್ರ ಅವರು ದುರ್ಬಳಕೆ ಮಾಡಿಕೊಂಡಿದ್ದಾರೆ.ಜೊತೆಗೆ ಗೆ ವೈಯಕ್ತಿಕ ಬಳಕೆಗೆ ವಿನಿಯೋಗ ಮಾಡಿಕೊಂಡಿದ್ದಾರೆ. ಮಾಜಿ ಸಚಿವರ ಮನೆ ಮೇಲೆ ನಡೆಸಿದ ದಾಳಿ ವೇಳೆಗೆ ಕೆಲ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ನಾಗೇಂದ್ರ ಆಪ್ತ ವಿಜಯ್ ಕುಮಾರ್ ಮೊಬೈಲ್ ಫೋನ್ ವಶಕ್ಕೆ ಪಡೆದು ರಿಟ್ರೀವ್ ಮಾಡಲಾಗಿದ್ದು ಅದರಲ್ಲಿ ಹಣ ಹಂಚಿಕೆ ಅವ್ಯವಹಾರ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Bangalore Congress Government Karnataka News Politics Valmiki Corporation scam ಅಪರಾಧ ಸುದ್ದಿ ಇಡಿ ಕಾಂಗ್ರೆಸ್ ಕಾನೂನು ಚುನಾವಣೆ ತೆಲಂಗಾಣ ಬೆಂಗಳೂರು ರಾಜಕೀಯ ವಾಲ್ಮೀಕಿ ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Article5 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶ
    Next Article ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • nohu90.careers ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Antoinette ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • can i order cheap pioglitazone ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe