ಕೊಡಗು: ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ವಿದ್ಯಾರ್ಥಿನಿಯೊಬ್ಬರು ಬಲಿಯಾಗಿದ್ದಾರೆ
ಮಡಿಕೇರಿ ತಾಲೂಕಿನ ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ. ಮಡಿಕೇರಿಯ ಸಂತ ಮೈಕೆಲ್ ಶಾಲೆಯ ಪ್ರಥಮ ಪಿಯುಸಿ ಯಲ್ಲಿ ವ್ಯಾಸಂಗ ಮಾಡುತಿದ್ದ ಪೂಜಾ ನಿನ್ನೆ ಶನಿವಾರ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು.
ಬಸ್ಸಿನಿಂದಿಳಿದು ಮನೆಗೆ ನಡೆದುಕೊಂಡು ಹೋಗುವಾಗ ಏಕಾಏಕಿ ಬಂದ ಕಾಡಾನೆ ನಡೆಸಿದ ದಾಳಿಯಿಂದ ಪೂಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಯುವತಿಯ ಶವವನ್ನ ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಿದ್ಯಾರ್ಥಿನಿ ಪೂಜಾ ಹತ್ಯೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ – ಮಾನವ ಸಂಘರ್ಷ ತಡೆಗೆ ಕೂಡಲೇ ಅರಣ್ಯ ಇಲಾಖೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

