ಬೆಂಗಳೂರು, ಜ.2:
ನಿವೃತ್ತರ ಸ್ವರ್ಗ, ಉದ್ಯಾನನಗರಿ ಎಂಬ ಹಿರಿಮೆಯ ಬೆಂಗಳೂರಿಗೆ ಮತ್ತೊಂದು ಗರಿ ಮೂಡುತ್ತಿದೆ. ನಗರದಲ್ಲಿನ ಅರಣ್ಯ ಇಲಾಖೆಗೆ ಸೇರಿದ 153 ಎಕರೆ ಪ್ರದೇಶದಲ್ಲಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ ಅಭಿವೃದ್ಧಿ ಪಡಿಸಲಾಗುತ್ತಿದೆ.
ಮಹತ್ವಕಾಂಕ್ಷೆಯ ಈ ಯೋಜನೆಗೆ ರೂಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಭೆಯ ನಂತರ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಂಪುಟ 50 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
265 ವರ್ಷಗಳ ಹಿಂದೆ 1760ರಲ್ಲಿ 240 ಎಕರೆ ಪ್ರದೇಶದಲ್ಲಿ ಲಾಲ್ ಬಾಗ್ ನಿರ್ಮಾಣವಾಗಿತ್ತು,. 155 ವರ್ಷಗಳ ಹಿಂದೆ 1870ರಲ್ಲಿ ನಿರ್ಮಾಣವಾಜ ಕಬ್ಬನ್ ಪಾರ್ಕ್ 197 ಎಕರೆ ಪ್ರದೇಶದಲ್ಲಿದ್ದು ಜನಾಕರ್ಷಣೆಯ ತಾಣವಾಗಿದೆ.
ಇದಾದ ಬಳಿಕ ಬೆಂಗಳೂರಿನಲ್ಲಿ ಹಲವು ಸಣ್ಣ ಉದ್ಯಾನಗಳ ನಿರ್ಮಾಣವಾಗಿದೆಯಾದರೂ ಬೃಹತ್ ಉದ್ಯಾನ ನಿರ್ಮಾಣ ಆಗಿರಲಿಲ್ಲ. ಈಗ ಅಂತಹ ಒಂದು ಬೃಹತ್ ಜೀವವೈವಿಧ್ಯ ಉದ್ಯಾನವನ್ನು ನಮ್ಮ ಸರ್ಕಾರ ಜನತೆಗೆ ಸಮರ್ಪಿಸುತ್ತಿದೆ ಎಂದರು.
ಬೆಂಗಳೂರು ಉತ್ತರ ತಾಲೂಕು ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲಿರುವ ಈ ಉದ್ಯಾನ ರಾಜ್ಯ ರಾಜಧಾನಿಯ 3ನೇ ಅತಿದೊಡ್ಡ ಉದ್ಯಾನವನವೆಂಬ ಖ್ಯಾತಿಗೆ ಪಾತ್ರವಾಗಲಿದೆ ಎಂದು ವಿವರಿಸಿದರು
ಬಹುತೇಕ ಒಂದೂವರೆ ಶತಮಾನದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಬೃಹತ್ ಉದ್ಯಾನ ನಿರ್ಮಾಣದ ಕಲ್ಪನೆ ಇಂದು ಸಾಕಾರವಾಗುತ್ತಿದ್ದು, ಇದನ್ನು ಶತಮಾನದ ಸಾಧನೆ ಎಂದರೂ ಅತಿಶಯೋಕ್ತಿಯಾಗಲಾರದು ಎಂದು ಬಣ್ಣಿಸಿದರು.
ಈ ಹಿಂದೆ ಅರಣ್ಯ ಇಲಾಖೆ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ಪ್ರದೇಶವನ್ನು ನೆಡುತೋಪು ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ಈಗ ಈ ಜಾಗವನ್ನು ಮರಳಿ ಇಲಾಖೆಗೆ ಪಡೆಯಲಾಗಿದ್ದು, ಇಲ್ಲಿರುವ ನೀಲಗಿರಿ ಮರಗಳನ್ನು ಹಂತಹಂತವಾಗಿ ತೆಗೆದು ಇಲ್ಲಿ ಸ್ಥಳೀಯ ಪ್ರಭೇದದ ಗಿಡ ಮರ ಬೆಳೆಸಿ, ಜಲ ಗುಂಡಿ ನಿರ್ಮಿಸಿ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ ನಿರ್ಮಿಸಲಾಗುವುದು ಎಂದರು.
ದಿವ್ಯೌಷಧೀಯ ಸಸ್ಯ ವನ, ಪಕ್ಷಿ ಲೋಕ, ವೃಕ್ಷೋದ್ಯಾನ ಹಾಗೂ ಇಂಟರ್ ಪ್ರಿಟೇಷನ್ ಸೆಂಟರ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದರು.
ಬೆಂಗಳೂರಿಗೆ ಮತ್ತೊಂದು ದೊಡ್ಡ ಪಾರ್ಕ್ ಬರಲಿದೆ ಎಲ್ಲಿ ಗೊತ್ತಾ?
Previous Articleಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
Next Article ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
