ಬೆಂಗಳೂರು,
ದೇಶಾದ್ಯಂತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಸುದ್ದಿ ಮಾಡಿದ ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ವಲಸಿಗರ ತೆರವು ಮತ್ತು ಪುನರ್ವಸತಿ ಯೋಜನೆ ವಿವಾದ ಇದೀಗ ರಾಜ್ಯ ಸರ್ಕಾರದಲ್ಲಿ ತೀವ್ರ ಬಿಕ್ಕಟ್ಟಿಗೆ ಕಾರಣವಾಗಿದೆ.
ವಿವಾದಕ್ಕೆ ಕಾರಣವಾದ ಕೋಗಿಲು ಬಡಾವಣೆ, ಕಂದಾಯ ಮಂತ್ರಿ ಕೃಷ್ಣ ಭೈರೇಗೌಡ ಅವರ ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಗೆ ಬರಲಿದೆ ಹೀಗಾಗಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಸ್ಥಳೀಯ ಶಾಸಕರ ನಿರ್ಧಾರ ಪ್ರಮುಖವಾಗಲಿದೆ ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂದಾಯ ಮಂತ್ರಿಯೂ ಆಗಿರುವ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಅಭಿಪ್ರಾಯಕ್ಕೆ ಕಾದು ಕುಳಿತಿದ್ದಾರೆ.
ವಿದೇಶ ಪ್ರವಾಸಕ್ಕೆ ತೆರಳಿದ್ದ ಕೃಷ್ಣಭೈರೇಗೌಡ ಅವರು ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು ಅಧಿಕಾರಿಗಳಿಂದ ವಿವಾದ ಕುರಿತಾಗಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ ಅಂತಿಮವಾಗಿ ಒತ್ತುವವರಿ ತೆರವು ಕಾರ್ಯಾಚರಣೆ ಪರವಾಗಿ ನಿಲುವು ತೆಗೆದುಕೊಂಡಿರುವ ಅವರು ಇಲ್ಲಿನ ಅಕ್ರಮವಾಸಿಗಳಿಗೆ ವಿಶೇಷ ಅನುಕಂಪದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅತಿಕ್ರಮಣ ಪ್ರವೇಶ ಆರೋಪ ಅಡಿಯಲ್ಲಿ ಇಲ್ಲಿಂದ ತೆರವು ಮಾಡಿರುವ ಕುಟುಂಬಗಳಿಗೆ ಮಾನವೀಯತೆಯ ಆಧಾರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ನಿರ್ಮಾಣ ಮಾಡಿಕೊಡಲು ತಮ್ಮ ಅಭ್ಯಂತರವಿಲ್ಲ ಆದರೆ ಇದಕ್ಕೆ ತಗಲುವ ವೆಚ್ಚದಲ್ಲಿ ಶೇಕಡ 75 ರಷ್ಟನ್ನು ಸರ್ಕಾರ ಭರಿಸುವ ಪ್ರಸ್ತಾವನೆಗೆ ತಮ್ಮ ವಿರೋಧವಿದೆ. ಅಲ್ಲದೆ ಈಗಾಗಲೇ ವಸತಿ ಕೋರಿ ಅರ್ಜಿ ಸಲ್ಲಿಸಿರುವ ಎಲ್ಲರ ಮನವಿಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು ಕೋಗಿಲು ಬಡಾವಣೆ ನಿವಾಸಿಗಳು ಸಂತ್ರಸ್ತರು ಎಂಬ ವಿಶೇಷ ಪ್ರಕರಣವಾಗಿ ಇದನ್ನು ಪರಿಗಣಿಸಬಾರದು ಎಲ್ಲಾ ವಸತಿ ಹೀನರ ರೀತಿಯಲ್ಲಿಯೇ ಇವರನ್ನು ಪರಿಗಣಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹೀಗಾಗಿ ಇಲ್ಲಿನ ನಿವಾಸಿಗಳ ಬಗ್ಗೆ ವಿಶೇಷ ಪ್ರಕರಣವೆಂದು ಪರಿಗಣಿಸಲು ವಾದ ಮಂಡಿಸುತ್ತಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಳೀಯ ಶಾಸಕರಾದ ಕೃಷ್ಣ ಬೈರೇಗೌಡ ಅವರ ನಿಲುವು ಆಘಾತ ತಂದಿದೆ ಈ ಹಿನ್ನಲೆಯಲ್ಲಿ ಕಂದಾಯ ಮಂತ್ರಿಗಳ ನಿವಾಸಕ್ಕೆ ತಮ್ಮ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರನ್ನು ಕಳುಹಿಸಿರುವ ಜಮೀರ್ ಖಾನ್ ಮಂತ್ರಿಗಳ ಮನವೊಲಿಸುವಂತೆ ಸೂಚಿಸಿದ್ದಾರೆ ಅದರಂತೆ ಕಂದಾಯ ಮಂತ್ರಿಗಳೊಂದಿಗೆ ವಸತಿ ಮಂತ್ರಿಗಳ ಆಪ್ತ ಕಾರ್ಯದರ್ಶಿ ಸುದೀರ್ಘ ಮಾತುಕತೆ ನಡೆಸಿದರು.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂತ್ರಿ ಕೃಷ್ಣ ಭೈರೇಗೌಡ, ಬಿಬಿಎಂಪಿ ಇರಲಿ, ಕಂದಾಯ ಇಲಾಖೆ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸವಾಗಿದೆ.ಈಗ ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಹೀಗಾಗಿ ಒತ್ತುವರಿ ಮಾಡಿಕೊಂಡವರು ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದರು.
ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿದ್ದಾರೆ ಎನ್ನುವ ಕಾರಣದಿಂದ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.
ಈ ಪ್ರದೇಶದಲ್ಲಿ ಬಾಂಗ್ಲಾದೇಶಕ್ಕೆ ಸೇರಿದ ಯಾವುದೇ ನಿವಾಸಿಗಳು ಇಲ್ಲ ಈ ಬಗ್ಗೆ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಈ ಪ್ರದೇಶದಲ್ಲಿ ಅಕ್ರಮವಾಗಿ ವಾಸಿಸಲು ಅವಕಾಶ ಮಾಡಿಕೊಟ್ಟವರು ಯಾರೇ ಇದ್ದರೂ ಕೂಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಅಂತವರು ತಮ್ಮ ಆಪ್ಣನೇ ಇರಲಿ, ಇಲ್ಲವೇ ಬಿಜೆಪಿ ಕಾರ್ಯಕರ್ತನಾಗಿರಲಿ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
Previous Articleಭಾರತೀಯ ಸೇನೆಯ ‘ಭೈರವ’ ಗೊತ್ತಾ..?
Next Article ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್

