Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ
    ರಾಜಕೀಯ

    15ನೇ ವಿಧಾನಸಭೆ ಅಂತ್ಯ – ಮತ್ತೆ ಗೆದ್ದು ಬರಲು ಶಾಸಕರ ಪಣ

    vartha chakraBy vartha chakraಫೆಬ್ರವರಿ 24, 2023Updated:ಫೆಬ್ರವರಿ 28, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ. 24- ಹಲವಾರು ಸಿಹಿ,ಕಹಿ ಘಟನೆಗಳೊಂದಿಗೆ15ನೇ ವಿಧಾನಸಭೆಯ ಅಧಿವೇಶನ ಅಂತ್ಯಗೊಂಡಿದೆ.
    ಮೂವರು ಮುಖ್ಯಮಂತ್ರಿಗಳು, ನಾಲ್ವರು ಉಪ‌ ಮುಖ್ಯಮಂತ್ರಿಗಳು ಇಬ್ಬರು ಪ್ರತಿಪಕ್ಷ ನಾಯಕರು ಹಾಗೂ ಇಬ್ಬರು ವಿಧಾನಸಭಾಧ್ಯಕ್ಷರನ್ನು ಕಂಡ ವಿಧಾನಸಭೆ ಅಂತ್ಯಗೊಂಡಿದೆ.
    ಕಲಾಪದ ಕೊನೆಯ ದಿನ ವಿಧಾನಸಭೆಯಲ್ಲಿ ವಿದಾಯ ಭಾಷಣದ್ದೇ ಕಾರುಬಾರು.ಕಳೆದ ಐದು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ, ಜನತೆಯ ಹಿತಕ್ಕಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡು ತನುಮನದಿಂದ ದುಡಿದ ಸಂತೃಪ್ತ, ಸಾರ್ಥಕ ಭಾವನೆಯನ್ನು ಎಲ್ಲ ಸದಸ್ಯರುಗಳು ವ್ಯಕ್ತಪಡಿಸಿ, ಪರಸ್ಪರ ಶುಭಾಶಯ, ಅಭಿನಂದನೆಗಳ ವಿನಿಮಯ ಮಾಡಿಕೊಂಡರು.
    ಮತ್ತೆ ಚುನಾವಣೆಯಲ್ಲಿ ಗೆದ್ದು ಸದನಕ್ಕೆ ಬರೋಣ ಶುಭ ಹಾರೈಕೆಗಳ ವಿನಿಮಯವೂ ಸದನದಲ್ಲಿ ಆಯಿತು.
    ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ಇಂದು ಸದಸ್ಯರುಗಳೆಲ್ಲರೂ ತಮ್ಮ ಕರ್ತವ್ಯ ಹಾಗೂ ಸದನದ ಕಲಾಪಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡು ರಾಜ್ಯದ ಹಿತಕ್ಕಾಗಿ ತಾವು ಕೆಲಸ ಮಾಡಿದ ರೀತಿಗೆ ಸದನ ಅಭಿನಂದನೆಗಳನ್ನು ಸಲ್ಲಿಸಲಿದೆ ಎಂದು ಹೇಳುವ ಮೂಲಕ ಈ ಕುರಿತಾದ ಚರ್ಚೆಗೆ ಅವಕಾಶ ಮಾಡಿಕೊಟ್ಟರು.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್‌ನ ಯು.ಟಿ. ಖಾದರ್, ಜೆಡಿಎಸ್‌ನ ಬಂಡೆಪ್ಪ ಕಾಶಂಪೂರ್ ಸೇರಿದಂತೆ ಇಂದು ಸದನದಲ್ಲಿ ಹಾಜರಿದ್ದ ಬಹುತೇಕ ಸದಸ್ಯರುಗಳು ತಾವು ಮಾಡಿದ ಕೆಲಸ, ಸದನದಲ್ಲಿ ಜನ ಹಿತಕ್ಕಾಗಿ ಕೈಗೊಂಡ ತೀರ್ಮಾನ, ಹೋರಾಟ ಎಲ್ಲವನ್ನು ಮೆಲುಕು ಹಾಕಿದರು.
    5 ವರ್ಷಗಳ ಕಾಲ ಶಾಸಕರಾಗಿ ಸದನದಲ್ಲಿ ಏನೇ ಪ್ರಸ್ತಾಪ ಮಾಡಿದ್ದರೂ ಜನ ಹಿತಕ್ಕಾಗಿ ಎಲ್ಲವನ್ನು ಮಾಡಿದ್ದೇವೆ. ತಮ್ಮ ವಿಚಾರ ಅಭಿವ್ಯಕ್ತಿಕೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಆಗಿದೆ. ಈ ವಿಚಾರಗಳ ಅಭಿವ್ಯಕ್ತಿಕೆ ಸಂದರ್ಭದಲ್ಲಿ ಕೆಲವೊಮ್ಮೆ ಸಿಟ್ಟು, ಆವೇಶ, ಕೆಲ ಮಾತುಗಳು ಬಂದಿದ್ದರೂ ಅದೆಲ್ಲ ವೈಯುಕ್ತಿಕವಾಗಿ ಅಲ್ಲ. ಕೇವಲ ರಾಜ್ಯದ ಅಭಿವೃದ್ದಿ ಹಾಗೂ ಜನರ ಬದುಕಿಗೆ ಒಳ್ಳೆಯದನ್ನು ಮಾಡುವ ಸದುದ್ದೇಶದಿಂದ ಆಡಿದ ಮಾತುಗಳಾಗಿವೆ ಅಷ್ಟೇ. ಏನೇ ಇರಲಿ, ನಾವೆಲ್ಲಾ ವೈಯುಕ್ತಿಕವಾಗಿ ಸ್ನೇಹಿತರು. ಯಾವುದೇ ಕಹಿ ಮನಸ್ಸಿನಲ್ಲಿ ಇಲ್ಲ. ಎಲ್ಲೇ ಸಿಕ್ಕರೂ ಉಭಯ ಕುಶಲೋಪರಿ ಇದ್ದೇ ಇರುತ್ತದೆ ಎಂಬ ಭಾವನೆಯೊಂದಿಗೆ ಎಲ್ಲ ಸದಸ್ಯರು ವಿದಾಯ ಭಾಷಣ ಮಾಡಿದರು.
    ಐತಿಹಾಸಿಕ ನಿರ್ಧಾರ:
    ವಿದಾಯ ಭಾಷಣ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನೇಕ ಸವಾಲುಗಳ ನಡುವೆಯೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದು ಒಂದು ಐತಿಹಾಸಿಕ ನಿರ್ಧಾರ. ಬರುವ ದಿನಗಳಲ್ಲಿ ಇದರ ಲಾಭ ಆ ಸಮುದಾಯಕ್ಕೆ ಸಿಗಲಿದೆ ಎಂದು ಹೇಳಿದರು.
    15 ನೇ ವಿಧಾನಸಭೆ 5 ವರ್ಷ ಕಾಲಘಟ್ಟದಲ್ಲಿ ಎರಡಮೂರು ವಿಚಾರಗಳನ್ನು ನಮ್ಮನ್ನು ಗಟ್ಟಿಗೊಳಿಸುತ್ತಾ ಹೋಗಿವೆ. ಈ ಐದು ವರ್ಷಗಳಲ್ಲಿ ನಾವು ಎಂದೂ ಕಾಣದ ದಿನಗಳನ್ನು ನೋಡಿದ್ದೇವೆ. ಕೋವಿಡ್ ಕಾಲದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದೆವು, ಸದನದಲ್ಲಿ ಗ್ಲಾಸ್ ಹಾಕಿ ಕಲಾಪ ನಡೆಸಲಾಯಿತು. ಇದು ಮರೆಯಲಾರದ ದಿನ ಎಂದರು.
    ಭಯದ ವಾತಾವರಣವಿದ್ದಾಗ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ವೈದ್ಯರು, ಹಲವು ತಜ್ಞರು… ವಿಜ್ಞಾನಿಗಳು ಕೋವಿಡ್‍ಗಾಗಿಲಸಿಕೆ ಕಂಡುಹಿಡಿದು ಸಕಾಲಕ್ಕೆ ಕೊಟ್ಟಿದ್ದು ಅಮೃತ ಘಳಿಗೆ ಎಂದು ಹೇಳಿದರು.
    ಈ ಐದು ವರ್ಷ ನಮಗೆ ಕೋವಿಡ್ ಸಾಕಷ್ಟು ಅನುಭವ ನೀಡಿದೆ. ಒಂದು ಕಡೆ ಸತತ ಪ್ರವಾಹ, ಮತ್ತೊಂದು ಕಡೆ ಕೋವಿಡ್ ಮಾರಿ ಎದುರಾದವು ಆದರೂ ದೃತಿಗೆಡದೆ ಪರಿಸ್ಥಿತಿಯನ್ನು ನಿಭಾಯಿಸಿದ್ದೇವೆ. ಆರ್ಥಿಕ ಬೆಳವಣಿಗೆಯು ಉತ್ತಮವಾಗಿದೆ ಎಂದರು.
    ಒಂದು ದೇಶ ಸ್ವಾತಂತ್ರ ಪಡೆಯುವುದು ಸುಲಭವಲ್ಲ ಮತ್ತು ನಂತರ ಅಭಿವೃದ್ಧಿಯಾಗುವುದು ಕೂಡ ಸುಲಭವಲ್ಲ. ಅಂಬೇಡ್ಕರ್, ಗಾಂೀಜಿ, ಮೊದಲ ಪ್ರಧಾನಿ ದೂರ ದೃಷ್ಟಿಯಿಂದ ಭಾರತಕ್ಕೆ ಒಂದು ಅಡಿಪಾಯ ಹಾಕಿದ್ದಾರೆ. ಅದರಲ್ಲೂ ಅಂಬೇಡ್ಕರ್ ಕೊಡುಗೆ ಸಾಕಷ್ಟು ಕೊಟ್ಟಿದ್ದಾರೆ ಎಂದು ಸ್ಮರಿಸಿದರು.
    ಸಂವಿಧಾನ ಮೂಲಕ ದೇಶ ಅಭಿವೃದ್ಧಿ ಕಾರಣವಾಗಿದೆ. ಅದೇ ರೀತಿ ಕರ್ನಾಟಕ ಏಕೀಕರಣಕ್ಕೆ ಸಾಕಷ್ಟು ಜನ ಕೊಡುಗೆ ಕೊಟ್ಟಿದ್ದಾರೆ. ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಕೊಡುಗೆ ಕೂಡ ಜಾಸ್ತಿ ಇದೆ ಎಂದು ಮೆಲುಕು ಹಾಕಿದರು.
    ಕಾಂಗ್ರೆಸ್‌ನ ಯು.ಟಿ. ಖಾದರ್, ಜೆಡಿಎಸ್‌ನ ಬಂಡೆಪ್ಪ ಕಾಶಂಪೂರ್, ಹೆಚ್.ಕೆ. ಕುಮಾರಸ್ವಾಮಿ, ಸಾ.ರಾ. ಮಹೇಶ್ ಸೇರಿದಂತೆ ಹಲವು ಸದಸ್ಯರುಗಳು ವಿದಾಯ ಭಾಷಣದಲ್ಲಿ ಮಾತನಾಡಿದ್ದು, ಕೊನೆಯದಾಗಿ ಸಭಾಧ್ಯಕ್ಷರು ತಮ್ಮ ವಿದಾಯ ಭಾಷಣದಲ್ಲಿ ಎಲ್ಲರ ಸಹಕಾರ ನೆನೆದು ಶುಭ ಹಾರೈಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾನೂನು ಕಾರು ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleBJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    Next Article BPL ಕಾರ್ಡ್ ಗೆ 10 ಕಿಲೋ ಅಕ್ಕಿ Free
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    1 ಟಿಪ್ಪಣಿ

    1. Cqubeg on ಫೆಬ್ರವರಿ 11, 2026 3:24 ಅಪರಾಹ್ನ

      betmgm super bowl promo online casino betmgm play betmgm California

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Glennhof ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.