ಬೆಂಗಳೂರು – ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ (BJP) ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪತ್ರ ಹಾಗೂ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಹಾಲಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರ ಅವಧಿ ಅಂತ್ಯಗೊಂಡು ಸುಮಾರು ಒಂದುವರೆ ವರ್ಷಗಳ ನಂತರ ಈ ನೇಮಕಾತಿ ಮಾಡಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿರುವ ಬಿಜೆಪಿ ಕೇಂದ್ರ ನಾಯಕತ್ವ ರಾಜ್ಯದಲ್ಲಿಡೆ ಸಮೀಕ್ಷೆ ನಡೆಸಿ ವರದಿಯನ್ನು ಪಡೆದುಕೊಂಡಿತ್ತು.
ಖಾಸಗಿ ಸಂಸ್ಥೆ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಎಲ್ಲ ವರ್ಗಗಳ ಅಭಿಪ್ರಾಯ ಆಲಿಸಿ ಬಿಜೆಪಿ (BJP) ರಾಷ್ಟ್ರಿಯ ನಾಯಕತ್ವಕ್ಕೆ ವರದಿಯೊಂದನ್ನು ರವಾನಿಸಿತ್ತು ಇದರಲ್ಲಿ ರಾಜ್ಯ ಬಿಜೆಪಿಗೆ ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಅದರಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂಬ ಎಂಬುದಾಗಿ ತಿಳಿಸಿತ್ತು.
ಈ ಕುರಿತಾಗಿ ಬಿಜೆಪಿಯ ಕೇಂದ್ರೀಯ ನಾಯಕತ್ವ ರಾಜ್ಯದ ಹಲವು ಮುಖಂಡರನ್ನು ಸಂಪರ್ಕಿಸಿ ಯಡಿಯೂರಪ್ಪ ಅವರ ಪುತ್ರ ವಿಜೇಂದ್ರ ಅವರು ಈ ಹುದ್ದೆಗೆ ಅರ್ಹ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಿದ ಪರಿಣಾಮ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತೀರ್ಮಾನಿಸಿದ್ದು ಇದೀಗ ಅವರ ಪುತ್ರನಿಗೆ ಉನ್ನತ ಹುದ್ದೆ ನೀಡಿದೆ.
ಪಕ್ಷದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರಗೊಂಡಿರುವ ಹಲವು ನಾಯಕರು ಇದೀಗ ಪಕ್ಷ ತೊರೆಯಲು ಸಜ್ಜಾಗಿದ್ದರು. ಅವರೆಲ್ಲರನ್ನು ಹಿಡಿದಿಟ್ಟುಕೊಳ್ಳುವ ದೃಷ್ಟಿಯಿಂದ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಪ್ರಾತಿನಿಧ್ಯತೆ ನೀಡಿದೆ


14 ಪ್ರತಿಕ್ರಿಯೆಗಳು
pin-up казино играть pin up официальный сайт вход
pin up зеркало на сегодня https://бесплатнаяюрпомощь.рф
онлайн казино пин ап https://yitservice.ru
казино пинап pin-up casino вход в личный кабинет
пин ап казино зеркало https://global-smm.ru
пин ап казино россия https://pinup-casinos.ru
пинап казино вход https://adm-neritza.ru
pin up bet pin up
pin up games https://school33bel.ru
пинап рабочее зеркало вход пин ап
pin up зеркало https://pinup-casinos.ru
pin up вход казино пин ап
pin up онлайн казино pin up онлайн-казино
пин ап казино пин ап казино официальный сайт