Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ
    Viral

    ಶತ್ರು ನಾಶಕ್ಕಾಗಿ ವಿಜಯೇಂದ್ರ ಯಾಗ

    vartha chakraBy vartha chakraಮಾರ್ಚ್ 24, 20244 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಕುಟುಂಬ ಸಮೇತರಾಗಿ ಚಂಡಿಕಾ ಯಾಗ ನಡೆಸುವ ಮೂಲಕ ಯಶಸ್ಸು ಮತ್ತು ಶತ್ರುನಾಶಕ್ಕೆ ದೇವರ ಮೊರೆ ಹೊಕ್ಕಿದ್ದಾರೆ.

    ತಮ್ಮ ಪುತ್ರ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ ಎದುರುಸುತ್ತಿರುವ ಮೊದಲ ದೊಡ್ಡ ಚುನಾವಣೆ ಇದಾಗಿದೆ ಇದರಲ್ಲಿ ಅವರು ದೊಡ್ಡಮಟ್ಟದ ಯಶಸ್ಸು ಗಳಿಸುವ ಮೂಲಕ ಪ್ರಬಲ ನಾಯಕರಾಗಿ ಹೊರಹೊಮ್ಮಬೇಕು ಎಂದು ಕಾರ್ಯತಂತ್ರ ಮಾಡುತ್ತಿರುವ ಯಡಿಯೂರಪ್ಪ ಇದಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿದ್ದಾರೆ.

    ಆದರೆ ಅವನ ಸ್ವಕ್ಷೇತ್ರ ಶಿವಮೊಗ್ಗ ಸೇರಿದಂತೆ ಹಲವಡೆ ಬಂಡಾಯದ ಧಗೆ ಕಾಣಿಸಿಕೊಂಡಿದೆ. ಯಡಿಯೂರಪ್ಪ ಅವರ ಆಪ್ತರೆನಿಸಿಕೊಂಡವರೇ ಇದೀಗ ಭಿನ್ನಮತದ ರಾಗ ಹಾಡುತ್ತಿದ್ದಾರೆ ಹೀಗಾಗಿ ಇದು ವಿಜಯೇಂದ್ರ ಪ್ರಬಲ ನಾಯಕನಾಗಿ ಹೊರಹೊಮ್ಮಲು ದೊಡ್ಡ ಅಡ್ಡಿ ಎಂದು ವ್ಯಾಖ್ಯಾನಿಸಲಾಗುತ್ತಿದೆ.
    ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷಿತ ಪ್ರಮಾಣದಲ್ಲಿ ಸಾಧನೆ ಮಾಡದೆ ಹೋದರೆ, ವಿಜಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವುದು ಅನಿವಾರ್ಯವಾಗಲಿದೆ ಇದಾದ ನಂತರ ಅವರ ರಾಜಕೀಯ ಭವಿಷ್ಯ ಮಸುಕಾದಲ್ಲಿದೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ಭಿನ್ನಮತ ಶಮನ ಸೇರಿದಂತೆ ಎಲ್ಲ ರೀತಿಯ ಚಟುವಟಿಕೆಗಳಲ್ಲೂ ತಾವೇ ಸಕ್ರಿಯರಾಗಿ ತೊಡಗಿಕೊಂಡಿರುವ ಯಡಿಯೂರಪ್ಪ ಇದೀಗ ಶತ್ರುನಾಶ ಮತ್ತು ಗೆಲುವಿನ ಉದ್ದೇಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.

    ಕುಟುಂಬ ಸಮೇತರಾಗಿ ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಕ್ಷೇತ್ರದಲ್ಲಿ ವಿಶೇಷ ಹೋಮ ಹವನಗಳಲ್ಲಿ ತೊಡಗಿದ್ದಾರೆ.
    ಶನಿವಾರ ಸಾಯಂಕಾಲ ಹೊರನಾಡಿಗೆ ಬಂದಿಳಿದ ಯಡಿಯೂರಪ್ಪ ಅವರ ಕುಟುಂಬ ದೇಗುಲದಲ್ಲಿ ರಥೋತ್ಸವ ಸೇವೆ ಮಾಡಿ, ವಿಶೇಷ ಪೂಜೆ ಸಲ್ಲಿಸಿತ್ತು. ಈ ರಥೋತ್ಸವ ಸೇವೆಯಲ್ಲಿ ಬಿ.ವೈ. ವಿಜಯೇಂದ್ರ ಸಹ ಭಾಗಿಯಾದರು. ಇದಾದ ನಂತರ ಎಲ್ಲರೂ
    ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ಗಣಪತಿ ಹೋಮ ಮತ್ತು ಚಂಡಿಕಾ ಯಾಗ ನಡೆಸಿದರು. ಏಳಕ್ಕೂ ಹೆಚ್ಚು ಋತ್ವಿಜರಿಂದ ನಡೆದ ಯಾಗದ ಪೂರ್ಣಾಹುತಿಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಹೊರತುಪಡಿಸಿ ಕುಟುಂಬದ ಎಲ್ಲ ಸದಸ್ಯರು ಭಾಗಿಯಾಗಿದ್ದರು.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
    ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದು ತುಂಬಾ ದಿನವಾಗಿತ್ತು. ರಾಜ್ಯದಲ್ಲಿ ಉತ್ತಮ ಮಳೆ, ಬೆಳೆಗಾಗಿ ಪೂಜೆ ಸಲ್ಲಿಸಿದ್ದೇವೆ. ರಾಜ್ಯದ ಸಮೃದ್ಧಿಗಾಗಿ ದೇವಿಯ ಮುಂದೆ ಪ್ರಾರ್ಥನೆ ಮಾಡಿದ್ದೇನೆ. ನರೇಂದ್ರ ಮೋದಿರನ್ನು ಮತ್ತೆ ಪ್ರಧಾನಿ ಮಾಡುವ ಚುನಾವಣೆ ಇದು. ಅನ್ನಪೂರ್ಣೇಶ್ವರಿ ಆಶೀರ್ವಾದದಿಂದ ನಾವು ಯಶಸ್ವಿಯಾಗುತ್ತೇವೆ ಎಂದು ತಿಳಿಸಿದರು.

    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ಮೋದಿಗೆ ಮತ್ತಷ್ಟು ಶಕ್ತಿ ಬರಲಿ, ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆದ್ದು ಅವರ ಕೈ ಬಲಪಡಿಸಲು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಹೇಳಿದರು.
    ಕೇಂದ್ರ ಸರ್ಕಾರದ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿದ ಅವರು, ಇಂತ ಕೆಟ್ಟ ಪರಿಸ್ಥಿತಿ ರಾಜ್ಯದ ಮುಖ್ಯಮಂತ್ರಿಗೆ ಬರಬಾರದು. ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಈ ರೀತಿ ನಡೆದುಕೊಳ್ಳುತ್ತಿದೆ. ಚುನಾವಣೆ ಘೋಷಣೆ ಬಳಿಕ ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗುವ ನಾಟಕವಾಡಿದ್ದಾರೆ. ಅವರಿಗೆ ಇದು ಶೋಭೆ ತರಲ್ಲ. ಮುಖ್ಯಮಂತ್ರಿಗಳಿಗೆ ಹಣಕಾಸಿನ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಲು ಆಗುತ್ತಿಲ್ಲ ಎಂದು ವಾಗ್ದಾಳಿ ಮಾಡಿದರು.

    ಚುನಾವಣೆ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಸೇರುತ್ತಿದ್ದಾರೆ ಜನಾರ್ದನ ರೆಡ್ಡಿ | Janardhan Reddy
    Next Article ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    vartha chakra
    • Website

    Related Posts

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಜೂನ್ 17, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಜೂನ್ 17, 2025

    4 ಪ್ರತಿಕ್ರಿಯೆಗಳು

    1. a9ce3 on ಜೂನ್ 7, 2025 5:20 ಅಪರಾಹ್ನ

      can i buy clomiphene no prescription how to buy cheap clomid no prescription cost of cheap clomid pills can i order clomiphene prices clomiphene uk buy can i buy cheap clomid pill where to buy cheap clomiphene tablets

      Reply
    2. do cialis pills expire on ಜೂನ್ 8, 2025 10:35 ಅಪರಾಹ್ನ

      More posts like this would bring about the blogosphere more useful.

      Reply
    3. generic name for flagyl on ಜೂನ್ 10, 2025 4:13 ಅಪರಾಹ್ನ

      Thanks towards putting this up. It’s understandably done.

      Reply
    4. fv12i on ಜೂನ್ 12, 2025 5:14 ಅಪರಾಹ್ನ

      order azithromycin pill – order ciprofloxacin 500mg generic buy cheap generic flagyl

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertPat ರಲ್ಲಿ ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    • JamesWesee ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • Michelpog ರಲ್ಲಿ ನಟ, ರಾಜಕಾರಣಿ ಸಿ.ಪಿ. ಯೋಗೇಶ್ವರ್
    Latest Kannada News

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಜೂನ್ 17, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಜೂನ್ 17, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕುಕ್ಕೆಗೆ ಹೋದವರ ಗೋಳು ಕೇಳೋರ್ಯಾರು ? #kukke #varthachakra #facts #passenger #ksrtc #bus #sharevideo
    Subscribe