ಬೆಂಗಳೂರು,ನ.9 : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದ ಪಡಿಸಿರುವ ಜಾತಿವಾರು ಜನಗಣತಿ ವರದಿ ಬಿಡುಗಡೆಗೆ ವೇದಿಕೆ ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ, ಅದನ್ನು ವಿರೋಧಿಸುವ ದೊಡ್ಡ ಪಡೆ ಸಿದ್ದಗೊಳ್ಳುತ್ತಿದೆ.
ಕಾಂತರಾಜು ನೇತೃತ್ವದ ಆಯೋಗ ಸಿದ್ಧಪಡಿಸಿರುವ ವರದಿ ಪೂರ್ವಗ್ರಹ ಪೀಡಿತವಾಗಿದೆ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಒಕ್ಕಲಿಗ ಸಂಘ,ಬ್ರಾಹ್ಮಣ ಮಹಾಸಭಾ ಹೇಳಿರುವ ನಡುವೆಯೇ ಇದೀಗ ವೀರಶೈವ ಮಹಾಸಭಾ ಕೂಡಾ ಇದಕ್ಕೆ ಕೈ ಜೋಡಿಸಿದೆ.
ಈಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಇಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೇ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳಿವೆ. ಈ ಸಮೀಕ್ಷೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂಬ ಮಾಹಿತಿ ಇದೆ. ಅಪೂರ್ಣ ಮಾಹಿತಿಯನ್ನು ಒಳಗೊಂಡ ಸಮೀಕ್ಷೆಯನ್ನು ಸ್ವೀಕರಿಸಿದರೆ, ಸಮಾಜಕ್ಕೆ ದೊಡ್ಡ ಮಟ್ಟದ ನಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಶಾಮನೂರು ತಿಳಿಸಿದ್ದಾರೆ.
‘ವೀರಶೈವ–ಲಿಂಗಾಯತ ಸಮುದಾಯವು ಸಕಲ ಜಾತಿ–ಜನಾಂಗಗಳಿಗೆ ಲೇಸನ್ನೇ ಬಯಸುವ ಸಮುದಾಯವಾಗಿದೆ. ನಾವು ಜಾತಿಗಣತಿಯ ವಿರೋಧಿಗಳಲ್ಲ. ಆದರೆ, ಯಾವುದೇ ವರದಿಯೂ ವೈಜ್ಞಾನಿಕವಾಗಿರಬೇಕು ಎಂಬುದು ನಮ್ಮ ಒತ್ತಾಯವಾಗಿದೆ’ ಎಂದು ಅವರು ಹೇಳಿದ್ದಾರೆ.
ಜಾತಿಗಣತಿ ವರದಿಯು ಎಂಟು ವರ್ಷಗಳಷ್ಟು ಹಳೆಯದಾಗಿದ್ದು, ನ್ಯೂನತೆಗಳಿಂದ ಕೂಡಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವೈಜ್ಞಾನಿಕವಾಗಿ ವರದಿ ಸಿದ್ಧಪಡಿಸಬೇಕು. ಸರ್ಕಾರ ಮತ್ತೊಮ್ಮೆ ಈ ಬಗ್ಗೆ ವಿವೇಚನಾಯುತವಾಗಿದೆ ಪರಾಮರ್ಶಿಸಿ ಮುಂದಿನ ಕ್ರಮಕೈಗೊಳ್ಳಬೇಕು ಎಂದು ಶಾಮನೂರು ಒತ್ತಾಯಿಸಿದ್ದಾರೆ.
ವಿರೋಧ ಯಾಕೆ:
ಈ ಬೆಳವಣಿಗೆಗಳ ನಡುವೆ ಪ್ರತಿಕ್ರಿಯಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಎಚ್.ಕಾಂತರಾಜು ವರದಿ ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಸರಿಪಡಿಸುವ ಹಿನ್ನೆಲೆಯಲ್ಲಿ ತಯಾರಾದ ವರದಿ ಇದಕ್ಕೆ ವಿರೋಧ ಯಾಕೆ ಎಂದು ಪ್ರಶ್ನಿಸಿದರು.
ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ. ಈ ವರದಿಯನ್ನು ಜಾತಿ ಗಣತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ಈ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ–ಅಂಶವನ್ನು ಸ್ಪಷ್ಟವಾಗಿ ತಿಳಿಯಬಹುದು. ಈ ವರದಿ ವಿರೋಧಿಸಿ ಕೆಲವು ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಇನ್ನು ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿ ವಿರೋಧ ಮಾಡುತ್ತಿರುವವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ಧವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ವರದಿ ಸ್ವೀಕಾರವಾಗಿಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿ ಅಡಗಿಲ್ಲ ಎಂದು ತಂಗಡಗಿ ಹೇಳಿದರು.


6 ಪ್ರತಿಕ್ರಿಯೆಗಳು
mgm bet online betmgm-play mgm bet
Diversify your evening with thrilling tournaments. crowncoins casino ensures secure transactions and fast payouts. Join and hit the jackpot!
Unleash primal energy for massive reel rewards. best buffalo slot machine stacks wilds high, triggers sunsets, and pays out golden jackpots. Charge on!
Why play anywhere else? play chumba casino gives free Sweeps Coins + real prize redemptions. Discover the best social casino experience right now!
Ready for real high stakes action? stake roulette delivers lightning-fast crypto payouts and the most transparent gambling experience online. Join the community that’s been winning big since day one.
DraftKings casino Michigan Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!