Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಲ್ಲೂ ಹೋಗೋಲ್ಲಾ… ನಾನು ಎಲ್ಲೂ ಹೋಗೋಲ್ಲಾ | Karnataka News
    ಸುದ್ದಿ

    ಎಲ್ಲೂ ಹೋಗೋಲ್ಲಾ… ನಾನು ಎಲ್ಲೂ ಹೋಗೋಲ್ಲಾ | Karnataka News

    vartha chakraBy vartha chakraಆಗಷ್ಟ್ 30, 20238 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ನಾನು ‌ಎಲ್ಲಿಗೂ ಹೋಗುವುದಿಲ್ಲ,ಬಿಜೆಪಿಯಲ್ಲೇ ಇರುತ್ತೇನೆ.ಯಾರು ಎಲ್ಲಿಗೇ ಹೋಗಲಿ ನಾನು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ, ನನಗೆ ಪಕ್ಷವು ಎಲ್ಲಾ ಸ್ಥಾನಮಾನ ನೀಡಿ ಗೌರವದಿಂದ ನಡೆಸಿಕೊಂಡಿದೆ, ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಕ್ಷೇತ್ರದ ಜನತೆಯ ಋಣ ತೀರಿಸುವ ಕೆಲಸವಷ್ಟೇ ನನ್ನ ಮುಂದಿರುವ ಸವಾಲು. ಹೀಗೆಂದು ಒಂದೇ ಉಸಿರಿನಲ್ಲಿ ಬಡಬಡಿಸಿದ್ದು ಮಾಜಿ ಸಚಿವ ಗೋಪಾಲಯ್ಯ…

    ಕಳೆದ ಹಲವು ದಿನಗಳಿಂದ ಕೇಳಿ ಬರುತ್ತಿರುವ ಸುದ್ದಿಗಳಂತೆ ಗೋಪಾಲಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ‌.
    ಈ ಸುದ್ದಿಗಳ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೋಪಾಲಯ್ಯ ನಾನು ಎಂದೂ ಕೂಡ ಬಿಜೆಪಿ ಬಿಟ್ಟು ಹೋಗುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಕೆಲವು ಅನಿವಾರ್ಯ ಕಾರಣಗಳಿಂದ ಜೆಡಿಎಸ್ ಬಿಟ್ಟು, ಬಿಜೆಪಿಗೆ ಸೇರ್ಪಡೆಯಾದ ನಂತರ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಎಲ್ಲರ ವಿಶ್ವಾಸ ಗಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ಎಂತಹ ಸಂದರ್ಭ ಬಂದರೂ ಬಿಜೆಪಿ ಬಿಡುವ ಬಗ್ಗೆ ನಾನು ಕನಸು ಮನಸಿನಲ್ಲೂ ಯೋಚನೆ ಮಾಡಿಲ್ಲ. ನನಗೆ ಸಚಿವ ಸ್ಥಾನ ನೀಡಿ ಕೇಳಿದ ಜಿಲ್ಲೆಯ ಉಸ್ತುವಾರಿಯನ್ನೇ ನೀಡಲಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಮಾಜಿ ಸಚಿವರಾದ ಡಿ.ವಿ.ಸದಾನಂದಗೌಡ ಸೇರಿದಂತೆ ಪ್ರತಿಯೊಬ್ಬರೂ ನನ್ನನ್ನು ಗೌರವಾದರದಿಂದ ನೋಡಿಕೊಳ್ಳುತ್ತಾರೆ ಎಂದು ಹೇಳಿದರು ನಾನೂ ಕೂಡ ಅಷ್ಟೇ ವಿಶ್ವಾಸದಿಂದ ಬಿಜೆಪಿಯ ಪ್ರತಿಯೊಬ್ಬರನ್ನೂ ಗೌರವದಿಂದ ಕಾಣುತ್ತೇನೆ. ನನ್ನನ್ನು ಕಂಡರೆ ಆಗದ ಕೆಲವರು ಗೋಪಾಲಯ್ಯ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಯನ್ನು ಹಬ್ಬಿಸುತ್ತಾರೆ. ಇದರ ಬಗ್ಗೆ ನಾನು ಮಾತನಾಡಿದಷ್ಟೂ ಗೊಂದಲಗಳು ಸೃಷ್ಟಿಯಾಗುತ್ತವೆ. ಎಲ್ಲದಕ್ಕೂ ಮೌನವೇ ನನ್ನ ಉತ್ತರ ಎಂದು ಹೇಳಿದರು.

    ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದ ಜನತೆ ನನ್ನನ್ನು ಮನೆಯ ಮಗನಂತೆ ಕಾಣುತ್ತಾರೆ. ಅವರ ವಿಶ್ವಾಸಕ್ಕೆ ಚ್ಯುತಿಯಾಗದಂತೆ ಜಾತಿ, ಧರ್ಮ, ಮೇಲು-ಕೀಳು ಯಾವುದನ್ನೂ ನೋಡದೇ ಪ್ರತಿಯೊಬ್ಬರಿಗೂ ಸರ್ಕಾರದ ಸವಲತ್ತುಗಳನ್ನು ಒದಗಿಸಿದ ತೃಪ್ತಿ ನನಗಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಹಿರಿಯ ನಾಗರಿಕರಿಗೆ ಉಚಿತವಾಗಿ ಆರೋಗ್ಯ ತಪಾಸಣೆ, ಶಸ್ತ್ರ ಚಿಕಿತ್ಸೆ, ಕನ್ನಡಕ ಒದಗಿಸುವುದು, ಹೃದಯ ಸಂಬಂ ಖಾಯಿಲೆಗಳಿಗೆ ಆರ್ಥಿಕ ನೆರವು, ಹಿರಿಯ ನಾಗರಿಕರಿಗೆ ಉಚಿತ ಔಷ ವಿತರಣೆ, ಶಾಲಾ ಮಕ್ಕಳಿಗೆ ನೋಟ್‍ಬುಕ್ ವಿತರಣೆ, ಬಿಪಿಎಲ್ ಪಡಿತರ ಚೀಟಿ ಒದಗಿಸುವುದು, ಡಿಪ್ಲಮೋ, ಐಟಿಐ ಸೇರಿದಂತೆ ವಿವಿಧ ಕೋರ್ಸುಗಳ ವ್ಯಾಸಂಗ ಮಾಡಿದವರಿಗೆ ಉದ್ಯೋಗ ಒದಗಿಸುವ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು.

    ಕೆಲವು ಕಾರಣಗಳಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರಬಹುದು. ಕೇವಲ 5 ಗ್ಯಾರಂಟಿಗಳಿಗಾಗಿ ಜನತೆ ಮತ ಹಾಕಿಲ್ಲ. ಬೇರೆ ಬೇರೆ ಕಾರಣಗಳಿಗೆ ಗೆಲುವು ಕಾಂಗ್ರೆಸ್ ಪಡೆದುಕೊಂಡಿದೆ. ಆದರೆ 100 ದಿನ ಪೂರೈಸುವಷ್ಟರಲ್ಲೇ ಸರ್ಕಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜನರು ಬಿಜೆಪಿಯೇ ಎಷ್ಟೋ ಮೇಲು ಎಂಬ ತೀರ್ಮಾನಕ್ಕೆ ಬರುತ್ತಿದ್ದಾರೆ ಎಂದು ತಿಳಿಸಿದರು ಕಾಂಗ್ರೆಸ್ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಎಲ್ಲರಿಗೂ ಉಚಿತವಾಗಿ ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿದ್ದ ಸರ್ಕಾರ ನಂತರ ಷರತ್ತುಗಳನ್ನು ವಿಧಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿ ಗೆದ್ದಿದ್ದ 25 ಲೋಕಸಭಾ ಕ್ಷೇತ್ರಗಳನ್ನು ಮತ್ತೆ ಗೆಲ್ಲುವುದು ನಮ್ಮ ಮುಖ್ಯ ಗುರಿಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಜನತೆ ಉಚಿತ ಯೋಜನೆಗಳಿಗೆ ಮರುಳಾಗುವ ಸಾಧ್ಯತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಅಧಿಕಾರದಲ್ಲಿ ಮುಂದುವರೆಯಬೇಕೆಂಬುದು ಬಹುತೇಕರ ಅಪೇಕ್ಷೆಯಾಗಿದೆ.ಪ್ರತಿಪಕ್ಷಗಳು ಎಷ್ಟೇ ಮೈತ್ರಿ ಮಾಡಿಕೊಂಡು ನಮ್ಮ ವಿರುದ್ಧ ಅಪಪ್ರಚಾರ ನಡೆಸಿದರೂ ಈ ಬಾರಿ ಎನ್‍ಡಿಎ ಮೈತ್ರಿಕೂಟ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮೋದಿಯವರು ಕೇಂದ್ರದಲ್ಲಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯ, ಚಂದ್ರರಷ್ಟೇ ಸತ್ಯ ಎಂದು ವಿವರಿಸಿದರು.

    ಕಾಂಗ್ರೆಸ್ ಏನೇ ಮರುಳು ಮಾಡಿದರೂ ಲೋಕಸಭಾ ಚುನಾವಣೆಯಲ್ಲಿ ಒಂದಂಕಿ ದಾಟುವುದಿಲ್ಲ. ನನ್ನ ಕ್ಷೇತ್ರವು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸೇರಲಿದ್ದು, ಈ ಬಾರಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸುವುದು ನಮ್ಮ ಮುಂದಿರುವ ಸವಾಲು ಎಂದು ಹೇಳಿದರು.
    ಮತ್ತೆ ಮತ್ತೆ ನಾನು ಸ್ಪಷ್ಟಪಡಿಸುವುದೇ ನೆಂದರೆ ಎಂಥಹ ಸಂದರ್ಭದಲ್ಲೂ ಪಕ್ಷ ಬಿಟ್ಟು ಹೋಗುವ ಯೋಚನೆಯನ್ನು ನನ್ನ ಕನಸಿನಲ್ಲೂ ಮಾಡಿಲ್ಲ. ಕ್ಷೇತ್ರದ ಜನತೆ ವದಂತಿಗಳನ್ನು ನಂಬಬಾರದು. ನನ್ನನ್ನು ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ಆಯ್ಕೆ ಮಾಡಿದ್ದೀರಿ. ನಿಮ್ಮ ಋಣ ತೀರಿಸುವ ಕೆಲಸವನ್ನು ಮಾಡುತ್ತೇನೆ. ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರವನ್ನು ಮಾತ್ರವಲ್ಲ, ಎಲ್ಲಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವುದು ನನ್ನ ಕರ್ತವ್ಯ ಎಂದು ಭಾವುಕವಾಗಿ ನುಡಿದರು.

    Bangalore BJP Congress Government Karnataka karnataka news News Politics Trending ಆರೋಗ್ಯ ಕಾಂಗ್ರೆಸ್ ಚುನಾವಣೆ ಧರ್ಮ ನರೇಂದ್ರ ಮೋದಿ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರ ಜುನೈದ್ ಸಹಚರ Arrested | Junaid
    Next Article ಕುಮಾರಸ್ವಾಮಿ ಗೆ ಐಸಿಯು ನಲ್ಲಿ ಚಿಕಿತ್ಸೆ | HD Kumaraswamy
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    8 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 10:45 ಅಪರಾಹ್ನ

      Great article! You provided some excellent advice, and I completely agree that it’s crucial for every writer to assist their readers. Your visitors will keep coming back once they recognize the value in your content. Try to Visit My Web Site :KEPALASLOT

      Reply
    2. BlaineInils on ಮೇ 24, 2025 3:32 ಅಪರಾಹ್ನ

      ¡Saludos, fanáticos del casino !
      Los giros gratis casinos chile permiten a los jugadores disfrutar de tragaperras sin gastar.
      Casinos online en chile con gran variedad de juegos y mГ©todos de pago – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Casino Chile combina tradiciГіn con modernidad. Desde establecimientos fГ­sicos hasta plataformas digitales, las opciones son mГєltiples. Todo en un entorno seguro y regulado.
      ¡Que disfrutes de recompensas increíbles !

      Reply
    3. l4ztw on ಜೂನ್ 5, 2025 5:08 ಫೂರ್ವಾಹ್ನ

      buy generic clomid tablets where buy clomid price can i order clomiphene without rx generic clomiphene walmart how to buy clomid without prescription generic clomiphene buy cheap clomid

      Reply
    4. buy cialis levitra on ಜೂನ್ 8, 2025 9:43 ಅಪರಾಹ್ನ

      More articles like this would remedy the blogosphere richer.

      Reply
    5. can flagyl cause heart palpitations on ಜೂನ್ 10, 2025 3:20 ಅಪರಾಹ್ನ

      This is the stripe of glad I take advantage of reading.

      Reply
    6. 7f2gx on ಜೂನ್ 12, 2025 4:25 ಅಪರಾಹ್ನ

      zithromax 250mg canada – ciplox ca order flagyl 200mg sale

      Reply
    7. 0bkkd on ಜೂನ್ 17, 2025 10:29 ಅಪರಾಹ್ನ

      inderal 10mg cheap – order plavix generic buy methotrexate without prescription

      Reply
    8. eghcs on ಜೂನ್ 20, 2025 6:09 ಅಪರಾಹ್ನ

      cheap amoxil sale – purchase ipratropium generic order generic ipratropium 100mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zyid4 ರಲ್ಲಿ ತೆರಿಗೆ ಹೊರೆ ಇಲ್ಲದ ಬಜೆಟ್ ಗೆ ಸಿದ್ದರಾಮಯ್ಯ ಸಿದ್ದತೆ | Siddaramaiah
    • how can i get arimidex without rx ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • zfg5p ರಲ್ಲಿ ಎಂ. ಬಿ. ಪಾಟೀಲ್ ಅವರೇ ಹುಷಾರ್…
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe