Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024
    Trending

    ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲೂ ಗೆಲ್ಲುತ್ತಾರಂತೆ | Lok Sabha 2024

    vartha chakraBy vartha chakraನವೆಂಬರ್ 15, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha 2024) ರಾಜ್ಯದಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಸಂಕಲ್ಪದೊಂದಿಗೆ ಬಿಜೆಪಿಯ ನೂತನ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.
    ಪಕ್ಷದ ಕಚೇರಿಯಲ್ಲಿ ನಡೆದ ಅನೇಕ ಧಾರ್ಮಿಕ ವಿಧಿ ವಿಧಾನಗಳು ನಂತರ ನಿರ್ಗಮಿತ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿದರು. ಈ‌ ಸಮಾರಂಭಕ್ಕೆಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಲೆಹರ್‌ಸಿಂಗ್, ಗೋವಿಂದ ಕಾರಜೋಳ, ಹಲವು ಹಿರಿಯ ನಾಯಕರು ಸಾಕ್ಷಿಯಾದರು. ವಿಜಯೇಂದ್ರ ಅವರ ಪದಗ್ರಹಣ ಸಂದರ್ಭದಲ್ಲಿ ಹೊಸ ಹುರುಪು,ಉತ್ಸಾಹ ಮನೆ ಮಾಡಿತ್ತು. ಈ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಕಾರ್ಯಕರ್ತರ ಉತ್ಸಾಹ ಮುಗಿಲು ಮುಟ್ಟಿತ್ತು.

    ಅಧಿಕಾರ ಸ್ವೀಕಾರದ ಬಳಿಕ ಮಾತನಾಡಿದ ವಿಜಯೇಂದ್ರ, ಮುಂಬರುವ ಲೋಕಸಭಾ ಚುನಾಣವೆ ಅಗ್ನಿಪರೀಕ್ಷೆಯಾಗಿದ್ದು, 28 ಕ್ಕೆ 28 ಕ್ಷೇತ್ರಗಳನ್ನೂ ಗೆದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದು ನಮ್ಮೆಲ್ಲರ ಗುರಿ. ಇದಕ್ಕಾಗಿ ಎಲ್ಲರೂ ಒಗ್ಗೂಡಿಯೇ ಕೆಲಸ ಮಾಡುವ ಸಂಕಲ್ಪ ಮಾಡುತ್ತೇವೆ ಎಂದರು.
    ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ‌ಕಳೆದ ಲೋಕಸಭಾ ಚುನಾವಣೆ ವೇಳೆ ಅಂದಿನ ಪಕ್ಷದ ಅಧ್ಯಕ್ಷರಾಗಿದ್ದ ಯಡಿಯೂರಪ್ಪ ಅವರು 20 ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿದಾಗ ಹಲವರು ಹಾಸ್ಯ ಮಾಡಿದ್ದರು. ಒಗ್ಗಟ್ಟಿನಿಂದ ಹೋರಾಟ ನಡೆಸಿ 25 ಸ್ಥಾನಗಳನ್ನು ಪಕ್ಷ ಗೆದ್ದುಕೊಂಡಿತ್ತು. ದೇಶಕ್ಕಾಗಿ 1 ದಿನವೂ ರಜೆ ತೆಗೆದುಕೊಳ್ಳದೇ ಹಗಲಿರುಳೆನ್ನದೇ ಕೆಲಸ ಮಾಡುವ, ದೇಶವನ್ನು ಅಗ್ರಪಂಕ್ತಿ ರಾಷ್ಟ್ರಗಳ ಸಾಲಿಗೆ ತಂದು ನಿಲ್ಲಿಸುವ ಮೋದಿಯವರ ಕನಸು ನನಸು ಮಾಡಲು ನಾವೆಲ್ಲ ಹಗಲಿರುಳೆನ್ನೇ ಶ್ರಮಿಸಬೇಕಾಗಿದೆ ಎಂದು ಹೇಳಿದರು.
    ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿದೆ. ಆ ಸೋಲಿ ಕಹಿಯನ್ನು ಮೆಟ್ಟಿ ಮುನ್ನಡೆಯಬೇಕು. ಅಧ್ಯಕ್ಷ ಸ್ಥಾನದ ಮಹತ್ವ ಮತ್ತು ಗೌರವ ಏನು ಎಂಬುದು ಗೊತ್ತಿದೆ. ದಶಕಗಳ ಕಾಲ ಕಾರ್ಯಕರ್ತರ ಬೆವರು ಮತ್ತು ಶ್ರಮದಿಂದ ಈ ಮಟ್ಟಕ್ಕೆ ಬೆಳೆದಿದೆ. ಹೀಗಾಗಿ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರು ತಲೆ ತಗ್ಗಿಸುವ ಕೆಲಸ ಮಾಡುವುದಿಲ್ಲ.

    ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಬರ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ್‍ಯಾರು ಬರ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿಲ್ಲ. ಬರಪೀಡಿತ ಸ್ಥಳಗಳಿಗೆ ತೆರಳಿ ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ. ದರ್ಪದಿಂದ ಮೆರೆಯುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದರು.
    ಮುಂದೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿವೆ. ಅದನ್ನು ನಾವೆಲ್ಲ ಗಂಭೀರವಾಗಿ ಪರಿಗಣಿಸಿದ್ದೇವೆ. ಜತೆಗೆ ಲೋಕಸಭಾ ಚುನಾವಣೆಯಲ್ಲೂ 28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುವ ಸಂಕಲ್ಪ ತಮ್ಮದು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳಾಗಿದೆ. ಹಗಲು ದರೋಡೆ, ಭ್ರಷ್ಟಾಚಾರ ಮಿತಿ ಮೀರಿದೆ ಎಂದು ದೂರಿದರು.
    ಬಿಜೆಪಿ ಅಧಿಕಾರಿದಲ್ಲಿದ್ದಾಗ ಶೇ.40ರಷ್ಟು ಕಮಿಷನ್ ಸರ್ಕಾರ ಎಂದು ಟೀಕಿಸಿದ್ದ ಕಾಂಗ್ರೆಸ್‌ನವರು ಶೇ. 40 ರ ಕಮಿಷನ್ ಆರೋಪವನ್ನು ಅನುಷ್ಠಾನ ಮಾಡುತ್ತಿದ್ದಾರೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    Verbattle
    Verbattle
    Verbattle
    lok sabha lok sabha 2024 ಈಶ್ವರಪ್ಪ ಕಾಂಗ್ರೆಸ್ ಚುನಾವಣೆ ತೇಜಸ್ವಿ ಸೂರ್ಯ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಬಿಗ್ ಬಾಸ್ ಸೆಟ್ ನಲ್ಲಿ ಪೊಲೀಸ್ ವಿಚಾರಣೆ | Bigg Boss Kannada
    Next Article ವಿದ್ಯುತ್ ಕಳ್ಳತನ ಆರೋಪ: ಕುಮಾರಸ್ವಾಮಿಗೆ 68 ಸಾವಿರ ದಂಡ | HD Kumaraswamy
    vartha chakra
    • Website

    Related Posts

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    ಫೆಬ್ರವರಿ 20, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    1 ಟಿಪ್ಪಣಿ

    1. Wzktiv on ಫೆಬ್ರವರಿ 13, 2026 5:29 ಅಪರಾಹ್ನ

      mgmbets betmgm-play betmgm NY

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinmama casino ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • digitalprivacyalert.org ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.